<p><strong>ಮಂಡ್ಯ:</strong> ಮೈಷುಗರ್ ಪ್ರೌಢಶಾಲೆಯನ್ನು ಗುತ್ತಿಗೆ ನೀಡಲು ಮುಂದಾಗಿರುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿ ಮೈಷುಗರ್ ಕಬ್ಬು ಬೆಳೆಗಾರರ ಒಕ್ಕೂಟ, ಕರ್ನಾಟಕ ರಾಜ್ಯ ರೈತ ಸಂಘ(ಏಕೀಕರಣ)ದ ಕಾರ್ಯಕರ್ತರು ನಗರದ ಜೆ.ಸಿ.ವೃತ್ತದ ಬಳಿ ಬುಧವಾರ ಪ್ರತಿಭಟನೆ ನಡೆಸಿದರು.</p>.<p>15 ವರ್ಷಗಳ ಅವಧಿಗೆ ಪ್ರೌಢಶಾಲೆಯನ್ನು ಜಿಲ್ಲೆಯ ಪ್ರಭಾವಶಾಲಿ ರಾಜಕಾರಣಿಯೊಬ್ಬರ ವಿದ್ಯಾಸಂಸ್ಥೆಗೆ ಉಚಿತವಾಗಿ ಗುತ್ತಿಗೆ ನೀಡಲು ಮುಂದಾಗುತ್ತಿರುವುದು ಏಕೆ ಎಂದು ಪ್ರಶ್ನಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಮೈಷುಗರ್ ಕಬ್ಬು ಬೆಳೆಗಾರರ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಸಾತನೂರು ವೇಣುಗೋಪಾಲ್ ಮಾತನಾಡಿ, ‘ಮೈಷುಗರ್ ಶಾಲೆ ಸರ್ಕಾರದ ಅನುದಾನಕ್ಕೆ ಒಳಪಟ್ಟಿದೆ. ಜೊತೆಗೆ ರೈತರು ಕೂಡ ಪ್ರತಿ ಟನ್ಗೆ ನಾಲ್ಕು ರೂಪಾಯಿಗಳನ್ನು ನೀಡುತ್ತಿದ್ದಾರೆ. ಹಳೆ ವಿದ್ಯಾರ್ಥಿಗಳ ಒಕ್ಕೂಟದಿಂದ ಇತ್ತೀಚೆಗೆ ₹40 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿಗಳನ್ನು ದುರಸ್ತಿಗೊಳಿಸಿ, ಸುಣ್ಣ ಬಣ್ಣ ಬಳಿದು ವ್ಯವಸ್ಥಿತವಾಗಿ ಇಡಲಾಗಿದೆ’ ಎಂದರು.</p>.<p>‘ಭಾರತ್ ಪೆಟ್ರೋಲಿಯಂನವರು ₹80 ಲಕ್ಷ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಿಸಿದ್ದಾರೆ. ಈ ರೀತಿ ಸುಸಜ್ಜಿತವಾಗಿದ್ದ ಶಾಲೆಯನ್ನು ಅನವಶ್ಯಕ ಕಾರಣಗಳನ್ನು ನೀಡುತ್ತಾ 15 ವರ್ಷಗಳ ಅವಧಿಗೆ ಉಚಿತವಾಗಿ ಗುತ್ತಿಗೆಯನ್ನು ಯಾರೂ ಒಪ್ಪುವುದಲ್ಲಿ ಹಾಗಾಗಿ ಯಾವುದೇ ಕಾರಣಕ್ಕೂ ನೀಡಬಾರದು’ ಎಂದು ಆಗ್ರಹಿಸಿದರು.</p>.<p>‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಈಗಿರುವ ಉಸ್ತುವಾರಿ ಸಚಿವರ ನೇತೃತ್ವದಲ್ಲಿಯೇ ಕಾಂಗ್ರೆಸ್ ಪಕ್ಷದಿಂದ ಮೈಷುಗರ್ ಖಾಸಗೀಕರಣವನ್ನು ವಿರೋಧಿಸಿ ಎತ್ತಿನ ಗಾಡಿ ಮೆರವಣಿಗೆ ಮಾಡಿದ್ದೆವು. ಇಂದು ಅದನ್ನು ಮರೆತು ತಮ್ಮ ಹಿಂದಿನ ಮಾತನ್ನೇ ಧಿಕ್ಕರಿಸಿದ್ದಾರೆ’ ಎಂದು ಕಿಡಿಕಾರಿದರು.</p>.<p>ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಇಂಡುವಾಳು ಚಂದ್ರಶೇಖರ್, ಮುಖಂಡರಾದ ಶಿವಳ್ಳಿ ಚಂದ್ರಶೇಖರ್, ತುಳಸಿ, ವಡ್ಡರಹಳ್ಳಿಕೊಪ್ಪಲು ಚಂದ್ರಶೇಖರ್, ಮಲ್ಲಿಕಾರ್ಜುನ್, ಪ್ರಶಾಂತ್, ಲಕ್ಕಪ್ಪ, ಶಂಕರ್ನಗರ ಮಹೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಮೈಷುಗರ್ ಪ್ರೌಢಶಾಲೆಯನ್ನು ಗುತ್ತಿಗೆ ನೀಡಲು ಮುಂದಾಗಿರುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿ ಮೈಷುಗರ್ ಕಬ್ಬು ಬೆಳೆಗಾರರ ಒಕ್ಕೂಟ, ಕರ್ನಾಟಕ ರಾಜ್ಯ ರೈತ ಸಂಘ(ಏಕೀಕರಣ)ದ ಕಾರ್ಯಕರ್ತರು ನಗರದ ಜೆ.ಸಿ.ವೃತ್ತದ ಬಳಿ ಬುಧವಾರ ಪ್ರತಿಭಟನೆ ನಡೆಸಿದರು.</p>.<p>15 ವರ್ಷಗಳ ಅವಧಿಗೆ ಪ್ರೌಢಶಾಲೆಯನ್ನು ಜಿಲ್ಲೆಯ ಪ್ರಭಾವಶಾಲಿ ರಾಜಕಾರಣಿಯೊಬ್ಬರ ವಿದ್ಯಾಸಂಸ್ಥೆಗೆ ಉಚಿತವಾಗಿ ಗುತ್ತಿಗೆ ನೀಡಲು ಮುಂದಾಗುತ್ತಿರುವುದು ಏಕೆ ಎಂದು ಪ್ರಶ್ನಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಮೈಷುಗರ್ ಕಬ್ಬು ಬೆಳೆಗಾರರ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಸಾತನೂರು ವೇಣುಗೋಪಾಲ್ ಮಾತನಾಡಿ, ‘ಮೈಷುಗರ್ ಶಾಲೆ ಸರ್ಕಾರದ ಅನುದಾನಕ್ಕೆ ಒಳಪಟ್ಟಿದೆ. ಜೊತೆಗೆ ರೈತರು ಕೂಡ ಪ್ರತಿ ಟನ್ಗೆ ನಾಲ್ಕು ರೂಪಾಯಿಗಳನ್ನು ನೀಡುತ್ತಿದ್ದಾರೆ. ಹಳೆ ವಿದ್ಯಾರ್ಥಿಗಳ ಒಕ್ಕೂಟದಿಂದ ಇತ್ತೀಚೆಗೆ ₹40 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿಗಳನ್ನು ದುರಸ್ತಿಗೊಳಿಸಿ, ಸುಣ್ಣ ಬಣ್ಣ ಬಳಿದು ವ್ಯವಸ್ಥಿತವಾಗಿ ಇಡಲಾಗಿದೆ’ ಎಂದರು.</p>.<p>‘ಭಾರತ್ ಪೆಟ್ರೋಲಿಯಂನವರು ₹80 ಲಕ್ಷ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಿಸಿದ್ದಾರೆ. ಈ ರೀತಿ ಸುಸಜ್ಜಿತವಾಗಿದ್ದ ಶಾಲೆಯನ್ನು ಅನವಶ್ಯಕ ಕಾರಣಗಳನ್ನು ನೀಡುತ್ತಾ 15 ವರ್ಷಗಳ ಅವಧಿಗೆ ಉಚಿತವಾಗಿ ಗುತ್ತಿಗೆಯನ್ನು ಯಾರೂ ಒಪ್ಪುವುದಲ್ಲಿ ಹಾಗಾಗಿ ಯಾವುದೇ ಕಾರಣಕ್ಕೂ ನೀಡಬಾರದು’ ಎಂದು ಆಗ್ರಹಿಸಿದರು.</p>.<p>‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಈಗಿರುವ ಉಸ್ತುವಾರಿ ಸಚಿವರ ನೇತೃತ್ವದಲ್ಲಿಯೇ ಕಾಂಗ್ರೆಸ್ ಪಕ್ಷದಿಂದ ಮೈಷುಗರ್ ಖಾಸಗೀಕರಣವನ್ನು ವಿರೋಧಿಸಿ ಎತ್ತಿನ ಗಾಡಿ ಮೆರವಣಿಗೆ ಮಾಡಿದ್ದೆವು. ಇಂದು ಅದನ್ನು ಮರೆತು ತಮ್ಮ ಹಿಂದಿನ ಮಾತನ್ನೇ ಧಿಕ್ಕರಿಸಿದ್ದಾರೆ’ ಎಂದು ಕಿಡಿಕಾರಿದರು.</p>.<p>ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಇಂಡುವಾಳು ಚಂದ್ರಶೇಖರ್, ಮುಖಂಡರಾದ ಶಿವಳ್ಳಿ ಚಂದ್ರಶೇಖರ್, ತುಳಸಿ, ವಡ್ಡರಹಳ್ಳಿಕೊಪ್ಪಲು ಚಂದ್ರಶೇಖರ್, ಮಲ್ಲಿಕಾರ್ಜುನ್, ಪ್ರಶಾಂತ್, ಲಕ್ಕಪ್ಪ, ಶಂಕರ್ನಗರ ಮಹೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>