ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಣ್ಣ ವಿರುದ್ಧ ಬೀದಿಗಿಳಿದ ಜೆಡಿಎಸ್

Last Updated 3 ಜುಲೈ 2022, 16:19 IST
ಅಕ್ಷರ ಗಾತ್ರ

ಮಂಡ್ಯ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಬಗ್ಗೆ ಲಘುವಾಗಿ ಹೇಳಿಕೆ ನೀಡಿರುವ ತುಮಕೂರಿನ ಕಾಂಗ್ರೆಸ್ ಕೆ.ಎನ್.ರಾಜಣ್ಣ ವಿರುದ್ಧ ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ನಗರದ ಜೆ.ಸಿ.ವೃತ್ತದಲ್ಲಿ ಪ್ರತಿಭಟನೆ ನೆಡೆಸಿದರು.

ನಗರದ ಬೆಂಗಳೂರು- ಮೈಸೂರು ರಸ್ತೆಯ ಸಂಜಯ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಹೆದ್ದಾರಿ ತಡೆದ ನೂರಾರು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಎಂ.ಶ್ರೀನಿವಾಸ್ ಮಾತ ನಾಡಿ, ಈ ನಾಡಿನ ಹಿರಿಯ ಮುತ್ಸದ್ಧಿ ರಾಜಕಾರಣಿ ಎಚ್.ಡಿ.ದೇವೇಗೌಡ ಅವರ ಬಗ್ಗೆ ಹಗುರವಾಗಿ ಮಾತನಾ ಡಿರುವ ಕೆ.ಎನ್.ರಾಜಣ್ಣ ಅವರ ನಡೆ ಸರಿಯಲ್ಲ. ಎಚ್.ಡಿ.ದೇವೇಗೌಡ ಅವರ ಸಲಹೆ, ಸಹಕಾರ ದೇಶ ಹಾಗೂ ರಾಜ್ಯದ ಅಭಿವೃದ್ಧಿಗೆ ಅಗತ್ಯವಿದೆ. ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರಾಜಣ್ಣ ರಾಜಕಾರಣದಲ್ಲಿ ಇರಲು ಅನರ್ಹ ಎಂದರು.

ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎಚ್.ಎನ್.ಯೋಗೇಶ್ ಮಾತನಾಡಿ, ಎಚ್.ಡಿ.ದೇವೇಗೌಡ ಅವರು ನಮ್ಮ ರಾಷ್ಟ್ರದ ಆಸ್ತಿ. ಅಂಥವರ ಬಗ್ಗೆ ಹಗುರವಾಗಿ ಮಾತನಾಡಿರುವ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಕಾವೇರಿ ಹೋರಾಟಗಾರ ದಿ.ಜಿ.ಮಾದೇಗೌಡ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರನ್ನು ಜೆಡಿಎಸ್‌ನಿಂದ ಉಚ್ಚಾಟಿಸಿದಂತೆರಾಜಣ್ಣ ಅವರನ್ನೂ ಉಚ್ಚಾಟಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದರು. ನಂತರ ಪ್ರತಿಭಟನಕಾರನ್ನು ಪೊಲೀಸರು ಮನವೊಲಿಸಿದರು.

ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ನಗರಸಭೆ ಅಧ್ಯಕ್ಷ ಎಚ್.ಎಸ್.ಮಂಜು, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಮೇಶ್, ನಗರ ಘಟಕದ ಅಧ್ಯಕ್ಷ ಎಸ್.ಪಿ.ಗೌರೀಶ್, ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜಿ.ತಿಮ್ಮೇಗೌಡ, ಪಿಇಎಸ್ ಅಧ್ಯಕ್ಷ ಕೆ.ಎಸ್.ವಿಜಯಾನಂದ, ನಗರಸಭೆ ಸದಸ್ಯರಾದ ಮೀನಾಕ್ಷಿ, ಮಂಜುಳಾ, ನಾಗೇಶ್, ಪೂರ್ಣಾನಂದ, ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎಸ್.ಮಹಮ್ಮುದ್, ಮುಖಂಡರಾದ ನಾಗಮ್ಮ, ಜಯಶೀಲಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT