<p><strong>ಕಿಕ್ಕೇರಿ:</strong> ಉದ್ಯೋಗ ಖಾತ್ರಿ ಮಾನವ ದಿನವನ್ನು 200ಕ್ಕೆ ಹೆಚ್ಚಿಸಿ ಪ್ರತಿದಿವಸ ಕನಿಷ್ಠ ₹600 ಕೂಲಿ ನಿಗದಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಹೋಬಳಿಯ ಘಟಕ ಹಾಗೂ ತಾಲ್ಲೂಕು ಸಮಿತಿಯವರು ಮಂಗಳವಾರ ಪ್ರತಿಭಟನೆ ನಡೆಸಿ ತಾಲ್ಲೂಕು ಪಂಚಾಯಿತಿ ಇಒ ಸುಷ್ಮಾ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.</p>.<p>ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ಹನುಮೇಶ್ ಮಾತನಾಡಿ, ‘ಕಾರ್ಮಿಕರಿಗೆ ಕೆಲಸದ ವೇಳೆ ನೆರಳು, ನೀರು, ಅರೋಗ್ಯ ಕಿಟ್ ವ್ಯವಸ್ಥೆ, ಕೆಲಸದ ಸ್ಥಳದಲ್ಲಿ 2 ಬಾರಿ ಫೋಟೋ ತೆಗೆಯುವುದು ಬೇಡ, ಸ್ಮಶಾನದ ಸೌಲಭ್ಯ ಕಲ್ಪಿಸಿಕೊಡಬೇಕು’ ಎಂದು ಆಗ್ರಹಿಸಿದರು.</p>.<p>ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಗಂಗೇನಹಳ್ಳಿ ಗಿರೀಶ್ ಮಾತನಾಡಿ, ‘ಚೌಡೇನಹಳ್ಳಿ, ಲಕ್ಷ್ಮೀಪುರ, ಮಾಕವಳ್ಳಿ, ಹಿರಿಕಳಲೆ, ಮಂದಗೆರೆ, ಆನೆಗೊಳ ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಯೋಜನೆಯಡಿ ಕೆಲಸ ನೀಡುತ್ತಿಲ್ಲ’ ಎಂದು ಆರೋಪಿಸಿದರು.</p>.<p>ಉಪಾಧ್ಯಕ್ಷ ಎನ್. ಸುರೇಂದ್ರ, ತಾಲ್ಲೂಕು ಅಧ್ಯಕ್ಷ ಗಿರೀಶ್, ಕಾರ್ಯದರ್ಶಿ ಗೋಪಾಲ್, ಉಪಾಧ್ಯಕ್ಷ ಸುರೇಶ್, ಜಯಮ್ಮ, ಲಕ್ಷ್ಮಮ್ಮ, ಶಾಂತಮ್ಮ, ಕೆಂಪಮ್ಮ, ರತ್ನಮ್ಮ ಭಾಗವಹಿಸಿದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಿಕ್ಕೇರಿ:</strong> ಉದ್ಯೋಗ ಖಾತ್ರಿ ಮಾನವ ದಿನವನ್ನು 200ಕ್ಕೆ ಹೆಚ್ಚಿಸಿ ಪ್ರತಿದಿವಸ ಕನಿಷ್ಠ ₹600 ಕೂಲಿ ನಿಗದಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಹೋಬಳಿಯ ಘಟಕ ಹಾಗೂ ತಾಲ್ಲೂಕು ಸಮಿತಿಯವರು ಮಂಗಳವಾರ ಪ್ರತಿಭಟನೆ ನಡೆಸಿ ತಾಲ್ಲೂಕು ಪಂಚಾಯಿತಿ ಇಒ ಸುಷ್ಮಾ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.</p>.<p>ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ಹನುಮೇಶ್ ಮಾತನಾಡಿ, ‘ಕಾರ್ಮಿಕರಿಗೆ ಕೆಲಸದ ವೇಳೆ ನೆರಳು, ನೀರು, ಅರೋಗ್ಯ ಕಿಟ್ ವ್ಯವಸ್ಥೆ, ಕೆಲಸದ ಸ್ಥಳದಲ್ಲಿ 2 ಬಾರಿ ಫೋಟೋ ತೆಗೆಯುವುದು ಬೇಡ, ಸ್ಮಶಾನದ ಸೌಲಭ್ಯ ಕಲ್ಪಿಸಿಕೊಡಬೇಕು’ ಎಂದು ಆಗ್ರಹಿಸಿದರು.</p>.<p>ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಗಂಗೇನಹಳ್ಳಿ ಗಿರೀಶ್ ಮಾತನಾಡಿ, ‘ಚೌಡೇನಹಳ್ಳಿ, ಲಕ್ಷ್ಮೀಪುರ, ಮಾಕವಳ್ಳಿ, ಹಿರಿಕಳಲೆ, ಮಂದಗೆರೆ, ಆನೆಗೊಳ ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಯೋಜನೆಯಡಿ ಕೆಲಸ ನೀಡುತ್ತಿಲ್ಲ’ ಎಂದು ಆರೋಪಿಸಿದರು.</p>.<p>ಉಪಾಧ್ಯಕ್ಷ ಎನ್. ಸುರೇಂದ್ರ, ತಾಲ್ಲೂಕು ಅಧ್ಯಕ್ಷ ಗಿರೀಶ್, ಕಾರ್ಯದರ್ಶಿ ಗೋಪಾಲ್, ಉಪಾಧ್ಯಕ್ಷ ಸುರೇಶ್, ಜಯಮ್ಮ, ಲಕ್ಷ್ಮಮ್ಮ, ಶಾಂತಮ್ಮ, ಕೆಂಪಮ್ಮ, ರತ್ನಮ್ಮ ಭಾಗವಹಿಸಿದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>