<p><strong>ಮಂಡ್ಯ:</strong> ನಗರದ ತಮಿಳು ಕಾಲೊನಿ ಸ್ಥಳಾಂತರಗೊಳಿಸಿ ಮೆಡಿಕಲ್ ಕಾಲೇಜು ಮತ್ತು ಮಿಮ್ಸ್ ಆಸ್ಪತ್ರೆಯ ಜಾಗ ಉಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ, ರಾಜ್ಯ ರೈತ ಸಂಘ(ರಾಷ್ಟ್ರ ಸಮಿತಿ), ಕರುನಾಡ ಸೇವಕರು ಸಂಘಟನೆಯ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಬೈಕ್ ರ್ಯಾಲಿ ನಡೆಸಿದರು.</p>.<p>ನಗರದ ಮಿಮ್ಸ್ ಜಿಲ್ಲಾಸ್ಪತ್ರೆ ಆವರಣದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಬೈಕ್ ರ್ಯಾಲಿ ಆರಂಭಿಸಿದರು. ನಂತರ ಪ್ರಮುಖ ನಗರದ ಬೀದಿಗಳಲ್ಲಿ ಸಾಗಿ ಘೋಷಣೆ ಕೂಗಿದರು.</p>.<p>ಮೈಸೂರು ಮಹಾರಾಜರು ಆಡಳಿತ, ಆರೋಗ್ಯ ಹಾಗೂ ಶಿಕ್ಷಣಕ್ಕಾಗಿ ಜಮೀನುಗಳನ್ನು ಅಂದೇ ರೈತರಿಂದ ಸ್ವಾಧೀನಪಡಿಸಿಕೊಂಡಿದ್ದರು. ಖಾಲಿ ಜಾಗದಲ್ಲಿ ತಮಿಳರು ಗುಡಿಸಲುಗಳನ್ನು ಹಾಕಿಕೊಂಡು ವಾಸ ಮಾಡತೊಡಗಿದರು. ಅಂದು ಆಸ್ಪತ್ರೆಗೆ ಹೆಚ್ಚಿನ ಜಾಗದ ಅಗತ್ಯವಿರಲಿಲ್ಲ. ಆದರೆ ಇಂದು ಜನಸಂಖ್ಯೆ ಹೆಚ್ಚಾದಂತೆ ಜಾಗದ ಅವಶ್ಯಕತೆ ಹೆಚ್ಚಿದೆ. ಹೀಗಾಗಿ, ತಮಿಳು ನಿವಾಸಿಗಳನ್ನು ಸ್ಥಳಾಂತರಿಸಿ ಆಸ್ಪತ್ರೆ ಜಾಗದಲ್ಲಿ ಉನ್ನತ ಕೇಂದ್ರಗಳನ್ನು ಸ್ಥಾಪಿಸುವ ಅಗತ್ಯ ಇದೆ. ಹಾಗಾಗಿ ತಮಿಳು ನಿವಾಸಿಗಳು ತಮಗೆ ಕಟ್ಟಿಕೊಟ್ಟಿರುವ ಮನೆಗಳಿಗೆ ಹೋಗಬೇಕು ಎಂದು ಆಗ್ರಹಿಸಿದರು.</p>.<p>ಬೈಕ್ ರ್ಯಾಲಿಗೆ ಚಾಲನೆ ನೀಡಿದ ಕರವೇ ರಾಜ್ಯ ಘಟಕದ ಅಧ್ಯಕ್ಷ ಶಿವರಾಮೇಗೌಡ, ಮಿಮ್ಸ್ ಆಸ್ಪತ್ರೆಗೆ ರಾಮನಗರ, ಚನ್ನಪಟ್ಟಣ, ಕುಣಿಗಲ್, ಟಿ.ನರಸೀಪುರ ಸೇರಿ ವಿವಿಧೆಡೆ ನಗರ ಮತ್ತು ಪಟ್ಟಣ ಪ್ರದೇಶಗಳ 30 ಲಕ್ಷ ಜನರಿಗೆ ಪ್ರಮುಖ ಆಸ್ಪತ್ರೆಯಾಗಿದೆ. ಆಸ್ಪತ್ರೆಯಲ್ಲಿ ನಿತ್ಯ ಸಾವಿರಾರು ಜನರು ಹೊರ ರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 400 ಹಾಸಿಗೆಗಳ ಆಸ್ಪತ್ರೆಯನ್ನು 1 ಸಾವಿರ ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೇಗೇರಿಸುವ ಅಗತ್ಯತೆ ತುಂಬಾ ಇದೆ. ಇದಕ್ಕಾಗಿ ಜಾಗದ ಕೊರತೆ ಎದ್ದು ಕಾಣುತ್ತಿದೆ ಎಂದು ಆರೋಪಿಸಿದರು.</p>.<p>ರೈತ ನಾಯಕಿ ಸುನಂದಾ ಜಯರಾಂ ಮಾತನಾಡಿ, ಆಸ್ಪತ್ರೆಗಾಗಿ ಭೂಸ್ವಾಧೀನ ಮಾಡಿಕೊಂಡಿರುವ ತಮಿಳು ನಿವಾಸಿಗಳನ್ನು ಸ್ಥಳಾಂತರ ಮಾಡಲು ಸರ್ಕಾರ ಮೂರ್ನಾಲ್ಕು ಬಾರಿ ಪ್ರಯತ್ನ ಮಾಡಿದ್ದರೂ ಅಲ್ಲಿನ ಕೆಲವೇ ಕೆಲವು ಮಂದಿ ಇದಕ್ಕೆ ಅವಕಾಶ ಕೊಡದಿರುವುದು ವಿಷಾದನೀಯ. ಇನ್ನಾದರೂ ಆಸ್ಪತ್ರೆ ಮತ್ತು ಜನರ ಆರೋಗ್ಯದ ಹಿತದೃಷ್ಟಿಯಿಂದ ಅವರಿಗಾಗಿ ನಿರ್ಮಿಸಿರುವ ಚಿಕ್ಕಮಂಡ್ಯಕ್ಕೆ ಹೊಂದಿಕೊಂಡಿರುವ ಕೆರೆಯಂಗಳದ ಜಾಗಕ್ಕೆ ಸ್ಥಳಾಂತರ ಮಾಡಬೇಕು ಎಂದು ಮನವಿ ಮಾಡಿದರು.</p>.<p>ಕರುನಾಡ ಸೇವಕರು ಸಂಘಟನೆಯ ಎಂ.ಬಿ.ನಾಗಣ್ಣಗೌಡ ಮಾತನಾಡಿ, ಆಸ್ಪತ್ರೆ ಆವರಣದಲ್ಲಿ ಟ್ರಾಮಾಕೇರ್, ಹೃದ್ರೋಗ ಚಿಕಿತ್ಸಾ ಘಟಕ ಸೇರಿ ಉನ್ನತ ಚಿಕಿತ್ಸಾ ಕೇಂದ್ರಗಳು ಬರಬೇಕಿದೆ. ಇವೆಲ್ಲವನ್ನೂ ಮಾಡಬೇಕಾದರೆ ಹೆಚ್ಚಿನ ಜಾಗದ ಅಗತ್ಯತೆ ಇದೆ. ಆಸ್ಪತ್ರೆಗೆ ಸೇರಿದ 18 ಎಕರೆ ಜಮೀನು ಮಿಮ್ಸ್ ಆಸ್ಪತ್ರೆ ವಶಕ್ಕೆ ನೀಡುವಂತೆ ನ್ಯಾಯಾಲಯವೂ ಆದೇಶ ನೀಡಿದೆ. ಆದರೂ ಕೆಲ ಪಟ್ಟಭದ್ರ ಹಿತಾಸಕ್ತಿಗಳು ತಮಿಳು ನಿವಾಸಿಗಳನ್ನು ದಿಕ್ಕು ತಪ್ಪಿಸುತ್ತಿವೆ ಎಂದು ಆರೋಪಿಸಿದರು.</p>.<p>ವಿವಿಧ ಸಂಘಟನೆಯ ಮುಖಂಡರಾದ ಎಚ್.ಡಿ.ಜಯರಾಂ, ಲೋಕೇಶ್, ಮುದ್ದೇಗೌಡ, ಬೋರ್ವೆಲ್ ನಾರಾಯಣ್, ಆಟೊ ವೆಂಕಟೇಶ್, ಮಂಜುಳಾ, ಶೋಭಾ, ರಮೇಶ್, ಶಿವಳ್ಳಿ ಚಂದ್ರಶೇಖರ್, ಇಂಡುವಾಳು ಸಿದ್ದೇಗೌಡ, ಅಣ್ಣಯ್ಯ, ಭವಾನಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ನಗರದ ತಮಿಳು ಕಾಲೊನಿ ಸ್ಥಳಾಂತರಗೊಳಿಸಿ ಮೆಡಿಕಲ್ ಕಾಲೇಜು ಮತ್ತು ಮಿಮ್ಸ್ ಆಸ್ಪತ್ರೆಯ ಜಾಗ ಉಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ, ರಾಜ್ಯ ರೈತ ಸಂಘ(ರಾಷ್ಟ್ರ ಸಮಿತಿ), ಕರುನಾಡ ಸೇವಕರು ಸಂಘಟನೆಯ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಬೈಕ್ ರ್ಯಾಲಿ ನಡೆಸಿದರು.</p>.<p>ನಗರದ ಮಿಮ್ಸ್ ಜಿಲ್ಲಾಸ್ಪತ್ರೆ ಆವರಣದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಬೈಕ್ ರ್ಯಾಲಿ ಆರಂಭಿಸಿದರು. ನಂತರ ಪ್ರಮುಖ ನಗರದ ಬೀದಿಗಳಲ್ಲಿ ಸಾಗಿ ಘೋಷಣೆ ಕೂಗಿದರು.</p>.<p>ಮೈಸೂರು ಮಹಾರಾಜರು ಆಡಳಿತ, ಆರೋಗ್ಯ ಹಾಗೂ ಶಿಕ್ಷಣಕ್ಕಾಗಿ ಜಮೀನುಗಳನ್ನು ಅಂದೇ ರೈತರಿಂದ ಸ್ವಾಧೀನಪಡಿಸಿಕೊಂಡಿದ್ದರು. ಖಾಲಿ ಜಾಗದಲ್ಲಿ ತಮಿಳರು ಗುಡಿಸಲುಗಳನ್ನು ಹಾಕಿಕೊಂಡು ವಾಸ ಮಾಡತೊಡಗಿದರು. ಅಂದು ಆಸ್ಪತ್ರೆಗೆ ಹೆಚ್ಚಿನ ಜಾಗದ ಅಗತ್ಯವಿರಲಿಲ್ಲ. ಆದರೆ ಇಂದು ಜನಸಂಖ್ಯೆ ಹೆಚ್ಚಾದಂತೆ ಜಾಗದ ಅವಶ್ಯಕತೆ ಹೆಚ್ಚಿದೆ. ಹೀಗಾಗಿ, ತಮಿಳು ನಿವಾಸಿಗಳನ್ನು ಸ್ಥಳಾಂತರಿಸಿ ಆಸ್ಪತ್ರೆ ಜಾಗದಲ್ಲಿ ಉನ್ನತ ಕೇಂದ್ರಗಳನ್ನು ಸ್ಥಾಪಿಸುವ ಅಗತ್ಯ ಇದೆ. ಹಾಗಾಗಿ ತಮಿಳು ನಿವಾಸಿಗಳು ತಮಗೆ ಕಟ್ಟಿಕೊಟ್ಟಿರುವ ಮನೆಗಳಿಗೆ ಹೋಗಬೇಕು ಎಂದು ಆಗ್ರಹಿಸಿದರು.</p>.<p>ಬೈಕ್ ರ್ಯಾಲಿಗೆ ಚಾಲನೆ ನೀಡಿದ ಕರವೇ ರಾಜ್ಯ ಘಟಕದ ಅಧ್ಯಕ್ಷ ಶಿವರಾಮೇಗೌಡ, ಮಿಮ್ಸ್ ಆಸ್ಪತ್ರೆಗೆ ರಾಮನಗರ, ಚನ್ನಪಟ್ಟಣ, ಕುಣಿಗಲ್, ಟಿ.ನರಸೀಪುರ ಸೇರಿ ವಿವಿಧೆಡೆ ನಗರ ಮತ್ತು ಪಟ್ಟಣ ಪ್ರದೇಶಗಳ 30 ಲಕ್ಷ ಜನರಿಗೆ ಪ್ರಮುಖ ಆಸ್ಪತ್ರೆಯಾಗಿದೆ. ಆಸ್ಪತ್ರೆಯಲ್ಲಿ ನಿತ್ಯ ಸಾವಿರಾರು ಜನರು ಹೊರ ರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 400 ಹಾಸಿಗೆಗಳ ಆಸ್ಪತ್ರೆಯನ್ನು 1 ಸಾವಿರ ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೇಗೇರಿಸುವ ಅಗತ್ಯತೆ ತುಂಬಾ ಇದೆ. ಇದಕ್ಕಾಗಿ ಜಾಗದ ಕೊರತೆ ಎದ್ದು ಕಾಣುತ್ತಿದೆ ಎಂದು ಆರೋಪಿಸಿದರು.</p>.<p>ರೈತ ನಾಯಕಿ ಸುನಂದಾ ಜಯರಾಂ ಮಾತನಾಡಿ, ಆಸ್ಪತ್ರೆಗಾಗಿ ಭೂಸ್ವಾಧೀನ ಮಾಡಿಕೊಂಡಿರುವ ತಮಿಳು ನಿವಾಸಿಗಳನ್ನು ಸ್ಥಳಾಂತರ ಮಾಡಲು ಸರ್ಕಾರ ಮೂರ್ನಾಲ್ಕು ಬಾರಿ ಪ್ರಯತ್ನ ಮಾಡಿದ್ದರೂ ಅಲ್ಲಿನ ಕೆಲವೇ ಕೆಲವು ಮಂದಿ ಇದಕ್ಕೆ ಅವಕಾಶ ಕೊಡದಿರುವುದು ವಿಷಾದನೀಯ. ಇನ್ನಾದರೂ ಆಸ್ಪತ್ರೆ ಮತ್ತು ಜನರ ಆರೋಗ್ಯದ ಹಿತದೃಷ್ಟಿಯಿಂದ ಅವರಿಗಾಗಿ ನಿರ್ಮಿಸಿರುವ ಚಿಕ್ಕಮಂಡ್ಯಕ್ಕೆ ಹೊಂದಿಕೊಂಡಿರುವ ಕೆರೆಯಂಗಳದ ಜಾಗಕ್ಕೆ ಸ್ಥಳಾಂತರ ಮಾಡಬೇಕು ಎಂದು ಮನವಿ ಮಾಡಿದರು.</p>.<p>ಕರುನಾಡ ಸೇವಕರು ಸಂಘಟನೆಯ ಎಂ.ಬಿ.ನಾಗಣ್ಣಗೌಡ ಮಾತನಾಡಿ, ಆಸ್ಪತ್ರೆ ಆವರಣದಲ್ಲಿ ಟ್ರಾಮಾಕೇರ್, ಹೃದ್ರೋಗ ಚಿಕಿತ್ಸಾ ಘಟಕ ಸೇರಿ ಉನ್ನತ ಚಿಕಿತ್ಸಾ ಕೇಂದ್ರಗಳು ಬರಬೇಕಿದೆ. ಇವೆಲ್ಲವನ್ನೂ ಮಾಡಬೇಕಾದರೆ ಹೆಚ್ಚಿನ ಜಾಗದ ಅಗತ್ಯತೆ ಇದೆ. ಆಸ್ಪತ್ರೆಗೆ ಸೇರಿದ 18 ಎಕರೆ ಜಮೀನು ಮಿಮ್ಸ್ ಆಸ್ಪತ್ರೆ ವಶಕ್ಕೆ ನೀಡುವಂತೆ ನ್ಯಾಯಾಲಯವೂ ಆದೇಶ ನೀಡಿದೆ. ಆದರೂ ಕೆಲ ಪಟ್ಟಭದ್ರ ಹಿತಾಸಕ್ತಿಗಳು ತಮಿಳು ನಿವಾಸಿಗಳನ್ನು ದಿಕ್ಕು ತಪ್ಪಿಸುತ್ತಿವೆ ಎಂದು ಆರೋಪಿಸಿದರು.</p>.<p>ವಿವಿಧ ಸಂಘಟನೆಯ ಮುಖಂಡರಾದ ಎಚ್.ಡಿ.ಜಯರಾಂ, ಲೋಕೇಶ್, ಮುದ್ದೇಗೌಡ, ಬೋರ್ವೆಲ್ ನಾರಾಯಣ್, ಆಟೊ ವೆಂಕಟೇಶ್, ಮಂಜುಳಾ, ಶೋಭಾ, ರಮೇಶ್, ಶಿವಳ್ಳಿ ಚಂದ್ರಶೇಖರ್, ಇಂಡುವಾಳು ಸಿದ್ದೇಗೌಡ, ಅಣ್ಣಯ್ಯ, ಭವಾನಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>