<p><strong>ಮದ್ದೂರು:</strong> ಮಂಡ್ಯದ ಸ್ವರ್ಣಸಂದ್ರ ಬಳಿ ಸಂಚಾರ ಪೊಲೀಸರು ಬೈಕ್ ಅಡ್ಡಗಟ್ಟಿದ್ದರ ಪರಿಣಾಮ ತಾಲ್ಲೂಕಿನ ಗೊರವನಹಳ್ಳಿಯ ಅಶೋಕ್ - ವಾಣಿಶ್ರೀ ದಂಪತಿಯ ಪುತ್ರಿ 3 ವರ್ಷದ ಮಗು ರಿತೀಕ್ಷಾ ಮೃತಪಟ್ಟಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರಗತಿಪರ ಸಂಘಟನೆಗಳ ಒಕ್ಕೂಟದವರು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲೇ ಸೂಕ್ತ ಚಿಕಿತ್ಸೆ ನೀಡಿದ್ದರೆ, ಪೋಷಕರು ಮಂಡ್ಯದ ಜಿಲ್ಲಾಸ್ಪತ್ರೆಗೆ ಆತುರಾತುರದಿಂದ ಕರೆದುಕೊಂಡು ಹೋಗುವ ಪರಿಸ್ಥಿತಿ ಬರುತ್ತಿರಲಿಲ್ಲ, ದುರ್ಘಟನೆಯೂ ಸಂಭವಿಸುತ್ತಿರಲಿಲ್ಲ ಎಂದು ಪಟ್ಟಣದ ಆಸ್ಪತ್ರೆಯ ಆಡಳಿತಾಧಿಕಾರಿ ಹಾಗೂ ಮುಖ್ಯವೈದ್ಯಾಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ವೇಳೆ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ನ.ಲಿ. ಕೃಷ್ಣ ಮಾತನಾಡಿ, ‘ಸೋಮವಾರ ಗೊರವನಹಳ್ಳಿ ಗ್ರಾಮದಲ್ಲಿ ಮಗು ಮನೆ ಮುಂದೆ ಆಟವಾಡುತ್ತಿದ್ದ ವೇಳೆ ನಾಯಿಯೊಂದು ಕಚ್ಚಿದ್ದರಿಂದ ಮಗುವನ್ನು ತಕ್ಷಣ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಪೋಷಕರು ಕರೆದುಕೊಂಡು ಬಂದಿದ್ದಾರೆ. ಆ ವೇಳೆ ಆಸ್ಪತ್ರೆಯ ವೈದ್ಯರೊಬ್ಬರು ಪ್ರಥಮ ಚಿಕಿತ್ಸೆ ನೀಡಿ ನಂತರ ಮಂಡ್ಯದ ಮಿಮ್ಸ್ಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಆದರೆ ಇಲ್ಲೇ ಸೂಕ್ತ ಚಿಕಿತ್ಸೆ ನೀಡಲಿಲ್ಲವೇಕೆ? ತಲೆಗೆ ನಾಯಿ ಕಚ್ಚಿದ್ದರೂ ಆಂಬುಲೆನ್ಸ್ ಮೂಲಕವಾದರೂ ಬಾಲಕಿಯನ್ನು ಕಳುಹಿಸಬಹುದಿತ್ತಲ್ಲವೇ’ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.</p>.<p>ಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ಉಮಾಶಂಕರ್ ಮಾತನಾಡಿ, ‘ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಸಾರ್ವಜನಿಕರಿಗೆ ಚಿಕಿತ್ಸೆ ಸಿಗುತ್ತಿಲ್ಲ ಸ್ಕ್ಯಾನಿಂಗ್ಗೆ ಹೊರಗಡೆ ಕಳುಹಿಸುತ್ತಾರೆ. ಅಷ್ಟೇ ಅಲ್ಲದೇ, ಎಷ್ಟೋ ರೋಗಿಗಳಿಗೆ ಮಂಡ್ಯಕ್ಕೆ ಹೋಗಿ ಎನ್ನುತ್ತಾರೆ ಏಕೆ? ತಾಲ್ಲೂಕು ಆಸ್ಪತ್ರೆಯಲ್ಲಿ ಈ ಅವ್ಯವಸ್ಥೆ ಸರಿ ಹೋಗುವುದು ಯಾವಾಗ? ಮೃತಪಟ್ಟ ಮಗುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವಾಗಿದ್ದು ಇದಕ್ಕೆ ನ್ಯಾಯ ಸಲ್ಲಿಸುವವರು ಯಾರು’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ತಹಶೀಲ್ದಾರ್ ಸ್ಮಿತಾ, ಆರೋಗ್ಯ ಇಲಾಖೆಯ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವೀಂದ್ರ ಬಿ. ಗೌಡ, ಆಸ್ಪತ್ರೆಯ ಮುಖ್ಯ ಆರೋಗ್ಯಾಧಿಕಾರಿ ಡಾ.ಬಾಲಕೃಷ್ಣ ಪಶು ಸಂಗೋಪನಾ ಇಲಾಖೆಯ ಡಾ.ಗೋವಿಂದ್, ತಾ.ಪಂ ಇ.ಒ ರಾಮಲಿಂಗಯ್ಯ ಸೇರಿದಂತೆ ಹಲವರು ಬಂದು ಪ್ರತಿಭಟನಾಕಾರರ ದೂರುಗಳನ್ನು ಆಲಿಸಿದರು.</p>.<p>ಈ ವೇಳೆ ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್ ಮಾತನಾಡಿ, ‘ಈ ರೀತಿಯ ದುರ್ಘಟನೆ ಆಗಬಾರದಿತ್ತು, ಪಟ್ಟಣದ ಸರ್ಕಾರಿ ಆಸ್ಪತ್ರೆಯ ವೈದ್ಯರೂ ಸೇರಿದಂತೆ ಎಲ್ಲಾ ಆಯಾಮದಲ್ಲೂ ತನಿಖಾ ತಂಡವನ್ನು ರಚಿಸಿ ಸೂಕ್ತ ತನಿಖೆ ನಡೆಸಲಾಗುವುದು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಯಾವುದೇ ಅವ್ಯವಸ್ಥೆಗಳಿದ್ದರೂ ಆ ಬಗ್ಗೆ ಪರಿಶೀಲನೆ ನಡೆಸಿ ಮೇಲಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<p>ಪ್ರತಿಭಟನೆಯಲ್ಲಿ ಶಂಕರೇಗೌಡ, ಚನ್ನಸಂದ್ರ ಲಕ್ಷ್ಮಣ್, ಮ.ನ. ಪ್ರಸನ್ನ ಕುಮಾರ್, ಮರಳಿಗ ಶಿವರಾಜು, ರೈತ ಸಂಘದ ತಾಲ್ಲೂಕು ಅಧ್ಯಕ್ಷ ಉಮೇಶ್, ಹೂತಗೆರೆ ಜನಾರ್ದನ್ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ಮಂಡ್ಯದ ಸ್ವರ್ಣಸಂದ್ರ ಬಳಿ ಸಂಚಾರ ಪೊಲೀಸರು ಬೈಕ್ ಅಡ್ಡಗಟ್ಟಿದ್ದರ ಪರಿಣಾಮ ತಾಲ್ಲೂಕಿನ ಗೊರವನಹಳ್ಳಿಯ ಅಶೋಕ್ - ವಾಣಿಶ್ರೀ ದಂಪತಿಯ ಪುತ್ರಿ 3 ವರ್ಷದ ಮಗು ರಿತೀಕ್ಷಾ ಮೃತಪಟ್ಟಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರಗತಿಪರ ಸಂಘಟನೆಗಳ ಒಕ್ಕೂಟದವರು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲೇ ಸೂಕ್ತ ಚಿಕಿತ್ಸೆ ನೀಡಿದ್ದರೆ, ಪೋಷಕರು ಮಂಡ್ಯದ ಜಿಲ್ಲಾಸ್ಪತ್ರೆಗೆ ಆತುರಾತುರದಿಂದ ಕರೆದುಕೊಂಡು ಹೋಗುವ ಪರಿಸ್ಥಿತಿ ಬರುತ್ತಿರಲಿಲ್ಲ, ದುರ್ಘಟನೆಯೂ ಸಂಭವಿಸುತ್ತಿರಲಿಲ್ಲ ಎಂದು ಪಟ್ಟಣದ ಆಸ್ಪತ್ರೆಯ ಆಡಳಿತಾಧಿಕಾರಿ ಹಾಗೂ ಮುಖ್ಯವೈದ್ಯಾಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ವೇಳೆ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ನ.ಲಿ. ಕೃಷ್ಣ ಮಾತನಾಡಿ, ‘ಸೋಮವಾರ ಗೊರವನಹಳ್ಳಿ ಗ್ರಾಮದಲ್ಲಿ ಮಗು ಮನೆ ಮುಂದೆ ಆಟವಾಡುತ್ತಿದ್ದ ವೇಳೆ ನಾಯಿಯೊಂದು ಕಚ್ಚಿದ್ದರಿಂದ ಮಗುವನ್ನು ತಕ್ಷಣ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಪೋಷಕರು ಕರೆದುಕೊಂಡು ಬಂದಿದ್ದಾರೆ. ಆ ವೇಳೆ ಆಸ್ಪತ್ರೆಯ ವೈದ್ಯರೊಬ್ಬರು ಪ್ರಥಮ ಚಿಕಿತ್ಸೆ ನೀಡಿ ನಂತರ ಮಂಡ್ಯದ ಮಿಮ್ಸ್ಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಆದರೆ ಇಲ್ಲೇ ಸೂಕ್ತ ಚಿಕಿತ್ಸೆ ನೀಡಲಿಲ್ಲವೇಕೆ? ತಲೆಗೆ ನಾಯಿ ಕಚ್ಚಿದ್ದರೂ ಆಂಬುಲೆನ್ಸ್ ಮೂಲಕವಾದರೂ ಬಾಲಕಿಯನ್ನು ಕಳುಹಿಸಬಹುದಿತ್ತಲ್ಲವೇ’ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.</p>.<p>ಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ಉಮಾಶಂಕರ್ ಮಾತನಾಡಿ, ‘ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಸಾರ್ವಜನಿಕರಿಗೆ ಚಿಕಿತ್ಸೆ ಸಿಗುತ್ತಿಲ್ಲ ಸ್ಕ್ಯಾನಿಂಗ್ಗೆ ಹೊರಗಡೆ ಕಳುಹಿಸುತ್ತಾರೆ. ಅಷ್ಟೇ ಅಲ್ಲದೇ, ಎಷ್ಟೋ ರೋಗಿಗಳಿಗೆ ಮಂಡ್ಯಕ್ಕೆ ಹೋಗಿ ಎನ್ನುತ್ತಾರೆ ಏಕೆ? ತಾಲ್ಲೂಕು ಆಸ್ಪತ್ರೆಯಲ್ಲಿ ಈ ಅವ್ಯವಸ್ಥೆ ಸರಿ ಹೋಗುವುದು ಯಾವಾಗ? ಮೃತಪಟ್ಟ ಮಗುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವಾಗಿದ್ದು ಇದಕ್ಕೆ ನ್ಯಾಯ ಸಲ್ಲಿಸುವವರು ಯಾರು’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ತಹಶೀಲ್ದಾರ್ ಸ್ಮಿತಾ, ಆರೋಗ್ಯ ಇಲಾಖೆಯ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವೀಂದ್ರ ಬಿ. ಗೌಡ, ಆಸ್ಪತ್ರೆಯ ಮುಖ್ಯ ಆರೋಗ್ಯಾಧಿಕಾರಿ ಡಾ.ಬಾಲಕೃಷ್ಣ ಪಶು ಸಂಗೋಪನಾ ಇಲಾಖೆಯ ಡಾ.ಗೋವಿಂದ್, ತಾ.ಪಂ ಇ.ಒ ರಾಮಲಿಂಗಯ್ಯ ಸೇರಿದಂತೆ ಹಲವರು ಬಂದು ಪ್ರತಿಭಟನಾಕಾರರ ದೂರುಗಳನ್ನು ಆಲಿಸಿದರು.</p>.<p>ಈ ವೇಳೆ ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್ ಮಾತನಾಡಿ, ‘ಈ ರೀತಿಯ ದುರ್ಘಟನೆ ಆಗಬಾರದಿತ್ತು, ಪಟ್ಟಣದ ಸರ್ಕಾರಿ ಆಸ್ಪತ್ರೆಯ ವೈದ್ಯರೂ ಸೇರಿದಂತೆ ಎಲ್ಲಾ ಆಯಾಮದಲ್ಲೂ ತನಿಖಾ ತಂಡವನ್ನು ರಚಿಸಿ ಸೂಕ್ತ ತನಿಖೆ ನಡೆಸಲಾಗುವುದು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಯಾವುದೇ ಅವ್ಯವಸ್ಥೆಗಳಿದ್ದರೂ ಆ ಬಗ್ಗೆ ಪರಿಶೀಲನೆ ನಡೆಸಿ ಮೇಲಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<p>ಪ್ರತಿಭಟನೆಯಲ್ಲಿ ಶಂಕರೇಗೌಡ, ಚನ್ನಸಂದ್ರ ಲಕ್ಷ್ಮಣ್, ಮ.ನ. ಪ್ರಸನ್ನ ಕುಮಾರ್, ಮರಳಿಗ ಶಿವರಾಜು, ರೈತ ಸಂಘದ ತಾಲ್ಲೂಕು ಅಧ್ಯಕ್ಷ ಉಮೇಶ್, ಹೂತಗೆರೆ ಜನಾರ್ದನ್ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>