ಕಲ್ಲು ಗಣಿಗಾರಿಕೆಯಿಂದ ಕೆಆರ್ಎಸ್ ಜಲಾಶಯಕ್ಕೆ ಧಕ್ಕೆ ಉಂಟಾಗಲಿದೆ. 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಬೇಕು ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ 2018ರಲ್ಲೇ ವರದಿ ನೀಡಿದೆ. ಜಿಲ್ಲಾಡಳಿತ ಗಣಿಗಾರಿಕೆಯನ್ನು ನಿಷೇಧಿಸಿದ್ದರೂ ರಾತ್ರಿಯ ವೇಳೆಯಲ್ಲಿ ಗಣಿ ಚಟುವಟಿಕೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ‘ಕಾವೇರಿ– ಕೆಆರ್ಎಸ್ ಉಳಿಸಿ’ ಘೋಷಣೆಯಡಿ ಬಂದ್ ಆಚರಣೆ ಮಾಡಲಾಗುತ್ತಿದೆ.