ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಹಾಲು ಒಕ್ಕೂಟದ ಅಧ್ಯಕ್ಷ ರಾಮಚಂದ್ರು, ವ್ಯವಸ್ಥಾಪಕ ನಿರ್ದೇಶಕ ಮಹೇಶ್, ನಿರ್ದೇಶಕಿ ರೂಪ ಬಂದರು. ಮೃತ ವೀರೇಶ್ ಕುಟುಂಬದವರೊಂದಿಗೆ ಮಾತುಕತೆ ನಡೆಸಿದ ನಂತರ ಕುಟುಂಬ ಸದಸ್ಯರಿಗೆ ಒಕ್ಕೂಟದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ, ಟ್ಯಾಂಕರ್ ಮಾಲೀಕನ ಕಡೆಯಿಂದ ₹ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ ನಂತರ ಪ್ರತಿಭಟನೆಯನ್ನು ಮೃತ ಕುಟುಂಬದವರು ಹಿಂಪಡೆದರು.