<p><strong>ಮಂಡ್ಯ:</strong> ಕೃಷಿಯಲ್ಲಿ ಬಳಸುವ ಲಘು ಪೋಷಕಾಂಶಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ಜಂಟಿ ಕೃಷಿ ನಿರ್ದೇಶಕ ವಿ.ಎಸ್. ಅಶೋಕ್ ಸಲಹೆ ನೀಡಿದರು.</p>.<p>ನಗರದ ಪರತಂತ್ರ ಜೀವಿ ಪ್ರಯೋಗಾಲಯದ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ತಾಲ್ಲೂಕಿನ ಕೃಷಿ ಪರಿಕರ ಹಾಗೂ ಬಿತ್ತನೆ ಬೀಜ, ಕೀಟನಾಶಕ ಹಾಗೂ ರಸಗೊಬ್ಬರ ಮಾರಾಟಗಾರರಿಗೆ ಒಂದು ದಿನದ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರೈತರು ಉತ್ತಮ ಇಳುವರಿ ಪಡೆಯಲು ತಮ್ಮ ಬೆಳಗಳಿಗೆ ಪೋಷಕಾಂಶವನ್ನು 4:2:1ರ ಅನುಪಾತದಲ್ಲಿ ಬಳಕೆ ಮಾಡಬೇಕು. ಮಾರಾಟಗಾರರು ರೈತರಿಗೆ ಕೃಷಿ ಪರಿಕರ ಮಾರಾಟ ಮಾಡುವ ಸಮಯದಲ್ಲಿ ಲಘು ಪೋಷಕಾಂಶಗಳಾದ ಜಿಂಕ್ ಸಲ್ಫೇಟ್, ಬೋರಾಕ್ಸ್ ಹಾಗೂ ಸೂಕ್ಷ್ಮಾಣು ಜೀವಿಗಳ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು ಜೊತೆಗೆ ರೈತರು ಕೀಟನಾಶಕಗಳನ್ನು ಮಿತವಾಗಿ ಬಳಸುವಂತೆಯೂ ಸಲಹೆ ನೀಡಬೇಕು ಎಂದರು.</p>.<p>ಉಪ ಕೃಷಿ ನಿರ್ದೇಶಕ(ಮಂಡ್ಯ ಉಪ ವಿಭಾಗ-1) ಮುನೇಗೌಡ ಮಾತನಾಡಿ, ‘ಕೃಷಿ ಪರಿಕರ ಮಾರಾಟಗಾರರು ಕಡ್ಡಾಯವಾಗಿ ಪರವಾನಗಿ ಹೊಂದಿರಬೇಕು. ಅದರಲ್ಲಿ ನಮೂದು ಮಾಡಲಾಗಿರುವ ಕೃಷಿ ಪರಿಕರಗಳನ್ನು ಮಾತ್ರ ರೈತರಿಗೆ ಮಾರಾಟ ಮಾಡಬೇಕು’ ಎಂದು ತಿಳಿಸಿದರು.</p>.<p>ಜಾರಿದಳ ವಿಭಾಗ ಕಚೇರಿಯ ಜಂಟಿ ಕೃಷಿ ನಿರ್ದೇಶಕ ಚನ್ನಕೇಶವ ಮೂರ್ತಿ ಮಾತನಾಡಿ, ಎಲ್ಲಾ ಪರಿಕರ ಮಾರಾಟಗಾರರು ನಿಗದಿತ ನಮೂನೆಯಲ್ಲಿ ದಾಖಲಾತಿಗಳ ನಿರ್ವಹಣೆ ಮಾಡುವುದು ಮುಖ್ಯವಾಗಬೇಕು ಎಂದರು.</p>.<p>ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕಿ ಎಚ್.ಸುನಿತಾ, ಕೃಷಿ ಅಧಿಕಾರಿಗಳಾದ ದೇವರಾಜೇಗೌಡ, ಹರ್ಷ, ಗಂಗಾ ನರಸಿಂಹಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಕೃಷಿಯಲ್ಲಿ ಬಳಸುವ ಲಘು ಪೋಷಕಾಂಶಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ಜಂಟಿ ಕೃಷಿ ನಿರ್ದೇಶಕ ವಿ.ಎಸ್. ಅಶೋಕ್ ಸಲಹೆ ನೀಡಿದರು.</p>.<p>ನಗರದ ಪರತಂತ್ರ ಜೀವಿ ಪ್ರಯೋಗಾಲಯದ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ತಾಲ್ಲೂಕಿನ ಕೃಷಿ ಪರಿಕರ ಹಾಗೂ ಬಿತ್ತನೆ ಬೀಜ, ಕೀಟನಾಶಕ ಹಾಗೂ ರಸಗೊಬ್ಬರ ಮಾರಾಟಗಾರರಿಗೆ ಒಂದು ದಿನದ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರೈತರು ಉತ್ತಮ ಇಳುವರಿ ಪಡೆಯಲು ತಮ್ಮ ಬೆಳಗಳಿಗೆ ಪೋಷಕಾಂಶವನ್ನು 4:2:1ರ ಅನುಪಾತದಲ್ಲಿ ಬಳಕೆ ಮಾಡಬೇಕು. ಮಾರಾಟಗಾರರು ರೈತರಿಗೆ ಕೃಷಿ ಪರಿಕರ ಮಾರಾಟ ಮಾಡುವ ಸಮಯದಲ್ಲಿ ಲಘು ಪೋಷಕಾಂಶಗಳಾದ ಜಿಂಕ್ ಸಲ್ಫೇಟ್, ಬೋರಾಕ್ಸ್ ಹಾಗೂ ಸೂಕ್ಷ್ಮಾಣು ಜೀವಿಗಳ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು ಜೊತೆಗೆ ರೈತರು ಕೀಟನಾಶಕಗಳನ್ನು ಮಿತವಾಗಿ ಬಳಸುವಂತೆಯೂ ಸಲಹೆ ನೀಡಬೇಕು ಎಂದರು.</p>.<p>ಉಪ ಕೃಷಿ ನಿರ್ದೇಶಕ(ಮಂಡ್ಯ ಉಪ ವಿಭಾಗ-1) ಮುನೇಗೌಡ ಮಾತನಾಡಿ, ‘ಕೃಷಿ ಪರಿಕರ ಮಾರಾಟಗಾರರು ಕಡ್ಡಾಯವಾಗಿ ಪರವಾನಗಿ ಹೊಂದಿರಬೇಕು. ಅದರಲ್ಲಿ ನಮೂದು ಮಾಡಲಾಗಿರುವ ಕೃಷಿ ಪರಿಕರಗಳನ್ನು ಮಾತ್ರ ರೈತರಿಗೆ ಮಾರಾಟ ಮಾಡಬೇಕು’ ಎಂದು ತಿಳಿಸಿದರು.</p>.<p>ಜಾರಿದಳ ವಿಭಾಗ ಕಚೇರಿಯ ಜಂಟಿ ಕೃಷಿ ನಿರ್ದೇಶಕ ಚನ್ನಕೇಶವ ಮೂರ್ತಿ ಮಾತನಾಡಿ, ಎಲ್ಲಾ ಪರಿಕರ ಮಾರಾಟಗಾರರು ನಿಗದಿತ ನಮೂನೆಯಲ್ಲಿ ದಾಖಲಾತಿಗಳ ನಿರ್ವಹಣೆ ಮಾಡುವುದು ಮುಖ್ಯವಾಗಬೇಕು ಎಂದರು.</p>.<p>ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕಿ ಎಚ್.ಸುನಿತಾ, ಕೃಷಿ ಅಧಿಕಾರಿಗಳಾದ ದೇವರಾಜೇಗೌಡ, ಹರ್ಷ, ಗಂಗಾ ನರಸಿಂಹಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>