<p><strong>ಶ್ರೀರಂಗಪಟ್ಟಣ:</strong> ಪಟ್ಟಣದ ಬೂದಿ ಗುಂಡಿ ಸೇರಿದಂತೆ ಇತರೆಡೆ ಸರ್ಕಾರಿ ಹಾಗೂ ಕಂದಾಯ ಭೂಮಿಯಲ್ಲಿ ನಿರ್ಮಿಸಿಕೊಂಡಿರುವ ಮನೆಗಳಿಗೆ ಖಾತೆ ಮಾಡಿಕೊಟ್ಟು ಬಡ ಜನರಿಗೆ ಸ್ವಂತ ಸೂರು ಕಲ್ಪಿಸಿಕೊಡಬೇಕು ಎಂದು ಪುರಸಭೆ ಸದಸ್ಯ ಎಸ್.ಟಿ. ರಾಜು, ಎಂ.ಶ್ರೀನಿವಾಸ್ ಒತ್ತಾಯಿಸಿದರು.</p>.<p>ಇಲ್ಲಿನ ಪುರಸಭೆ ಕಚೇರಿ ಸಭಾಂಗ ಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಸದಸ್ಯರು ಈ ವಿಷಯ ಪ್ರಸ್ತಾಪಿಸಿದರು.</p>.<p>ಕೂಲಿ ಅರಸಿಕೊಂಡು ಹೊರ ಜಿಲ್ಲೆ, ರಾಜ್ಯಗಳಿಂದ ಬಂದವರು 30–40 ವರ್ಷಗಳ ಹಿಂದೆ ಇಲ್ಲೇ ನೆಲೆ ನಿಂತಿದ್ದಾರೆ. ಮಕ್ಕಳು, ಮೊಮ್ಮಕ್ಕಳೂ ಇದ್ದಾರೆ. ತಾವು ನಿರ್ಮಿಸಿಕೊಂಡಿರುವ ಗುಡಿಸಲು, ಕಲ್ನಾರ್ ಶೀಟಿನ ಮನೆಗಳಿಗೆ ಖಾತೆ ಮಾಡಿಕೊಡುವಂತೆ ಹಲವು ಬಾರಿ ಪುರಸಭೆಗೆ ಮನವಿ ಸಲ್ಲಿಸಿದ್ದಾರೆ. ಆದರೂ ಈ ಬಗ್ಗೆ ಏಕೆ ಗಮನ ಹರಿಸುತ್ತಿಲ್ಲ? ಎಂದು ಪ್ರಶ್ನಿಸಿದರು.</p>.<p>ಇದಕ್ಕೆ ಸದಸ್ಯರಾದ ಎಂ.ಎಲ್.ದಿನೇಶ್, ರಾಧಾ ಶ್ರೀಕಂಠು ಇತರರು ದನಿಗೂಡಿಸಿದರು.</p>.<p>ಪೌರಕಾರ್ಮಿಕರೂ ಸೇರಿದಂತೆ ವಸತಿ ರಹಿತರಿಗೆ ನಿವೇಶನ ಹಂಚಲು ಸರ್ಕಾರಿ ಜಾಗ ಗುರುತಿಸುವ ಸಂಬಂಧ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲಾ ಗು ವುದು ಎಂದು ಮುಖ್ಯಾಧಿಕಾರಿ ಕೃಷ್ಣ ಹೇಳಿದರು.</p>.<p>ಪುರಸಭೆ ವಕೀಲರಾಗಿದ್ದ ವೆಂಕಟಪ್ಪ ಈಚೆಗೆ ನಿಧನರಾಗಿದ್ದು, ಹೊಸ ವಕೀಲರನ್ನು ನೇಮಕ ಮಾಡಿಕೊಳ್ಳಬೇಕಿದೆ. ಬಾಲರಾಜು, ಹೇಮಾರಾಧ್ಯ, ಪುಷ್ಪಲತಾ ಎಂಬ ವರು ಅರ್ಜಿ ಸಲ್ಲಿಸಿದ್ದಾರೆ ಎಂದು ಮುಖ್ಯಾ ಧಿಕಾರಿ ಕೃಷ್ಣ ಸಭೆಯ ಗಮನಕ್ಕೆ ತಂದರು.</p>.<p>ಅಧಿಕೃತ ಜ್ಞಾಪನ ಹೊರಡಿಸದೆ ವಕೀಲರನ್ನು ನೇಮಿಸಿಕೊಂಡರೆ ಅಸಿಂಧುವಾಗುತ್ತದೆ. ನಿಯಮ ಉಲ್ಲಂಘಿಸಿದರೆ ಪುರಸಭೆಗೆ ಕೆಟ್ಟ ಹೆಸರು ಬರುತ್ತದೆ ಎಂದು ಸದಸ್ಯರಾದ ಎಸ್.ನಂದೀಶ್, ಎಂ.ನಂದೀಶ್ ಆಕ್ಷೇಪ ವ್ಯಕ್ತಪಡಿಸಿದರು.</p>.<p class="Subhead">ರಾಜರ ಹೆಸರಿಡಿ: ಇದು ಐತಿಹಾಸಿಕ ಮಹತ್ವದ ಪಟ್ಟಣ. ರಸ್ತೆಗಳು, ಬಡಾವಣೆಗಳಿಗೆ ಇಲ್ಲಿ ಆಳಿದ ರಾಜ ಒಡೆಯರ್, ಕಂಠೀರವ ನರಸರಾಜ ಒಡೆಯರ್, ಚಿಕ್ಕದೇವರಾಜ ಒಡೆಯರ್ ಇತರರ ಹೆಸರಿಡಬೇಕು. ಆ ಮೂಲಕ ಈ ಊರಿನ ಪರಂಪರೆಯನ್ನು ಜೀವಂತಗೊಳಿಸಬೇಕು. ಮುಮ್ಮಡಿ ಕೃಷ್ಣರಾಜ ಒಡೆಯರ್ ಜನನ ಮಂಟಪ ಅನಾಥವಾಗಿದ್ದು, ಅದರ ರಕ್ಷಣೆಗೆ ಕ್ರಮ ವಹಿಸಬೇಕು. ಪತ್ರಕರ್ತರ ಕ್ಷೇಮ ನಿಧಿಗೆ ₹ 2 ಲಕ್ಷ ಮೀಸಲಿಡಬೇಕು ಎಂದು ಎಂ. ನಂದೀಶ್ ಸಲಹೆ ನೀಡಿದರು. ಇದಕ್ಕೆ ಸಭೆ ಒಕ್ಕೊರಲ ಸಮ್ಮತಿ ಸೂಚಿಸಿತು.</p>.<p>ಆಸ್ತಿ ರಕ್ಷಿಸಿ: ಕೆಲವೆಡೆ ಪುರಸಭೆ ಆಸ್ತಿ ಅತಿಕ್ರಮವಾಗುತ್ತಿದ್ದು, ರಕ್ಷಣೆಗೆ ಕ್ರಮ ಕೈಗೊಳ್ಳಬೇಕು. ಎಲ್ಲ ಆಸ್ತಿಗಳಿಗೆ ಫಲಕ ಹಾಕಬೇಕು ಎಂದು ಸದಸ್ಯರಾದ ವಸಂತಕುಮಾರಿ ಲೋಕೇಶ್, ರಾಧಾ ಶ್ರೀಕಂಠ, ಎಂ.ಎಲ್.ದಿನೇಶ್ ಒತ್ತಾಯಿಸಿದರು.</p>.<p>ಹಲವು ವಾರ್ಡ್ಗಳಲ್ಲಿ ಕಾಮಗಾರಿ ಅಪೂರ್ಣವಾಗಿದ್ದು, ಶೀಘ್ರ ಪೂರ್ಣ ಗೊಳಿಸಿ ಎಂದು ಸದಸ್ಯರು ಆಗ್ರಹಿಸಿದರು. ಅಗತ್ಯ ಇರುವೆಡೆ ಅಂಗನವಾಡಿಗಳ ನಿರ್ಮಾಣ, ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಇತರ ವಿಷಯಗಳು ಸಭೆಯಲ್ಲಿ ಚರ್ಚೆಯಾದವು.</p>.<p>ಅಧ್ಯಕ್ಷೆ ಪಿ.ನಿರ್ಮಲಾ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಪ್ರಕಾಶ್, ಸದಸ್ಯರಾದ ಕೃಷ್ಣಪ್ಪ, ಶಿವು ಚರ್ಚೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ:</strong> ಪಟ್ಟಣದ ಬೂದಿ ಗುಂಡಿ ಸೇರಿದಂತೆ ಇತರೆಡೆ ಸರ್ಕಾರಿ ಹಾಗೂ ಕಂದಾಯ ಭೂಮಿಯಲ್ಲಿ ನಿರ್ಮಿಸಿಕೊಂಡಿರುವ ಮನೆಗಳಿಗೆ ಖಾತೆ ಮಾಡಿಕೊಟ್ಟು ಬಡ ಜನರಿಗೆ ಸ್ವಂತ ಸೂರು ಕಲ್ಪಿಸಿಕೊಡಬೇಕು ಎಂದು ಪುರಸಭೆ ಸದಸ್ಯ ಎಸ್.ಟಿ. ರಾಜು, ಎಂ.ಶ್ರೀನಿವಾಸ್ ಒತ್ತಾಯಿಸಿದರು.</p>.<p>ಇಲ್ಲಿನ ಪುರಸಭೆ ಕಚೇರಿ ಸಭಾಂಗ ಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಸದಸ್ಯರು ಈ ವಿಷಯ ಪ್ರಸ್ತಾಪಿಸಿದರು.</p>.<p>ಕೂಲಿ ಅರಸಿಕೊಂಡು ಹೊರ ಜಿಲ್ಲೆ, ರಾಜ್ಯಗಳಿಂದ ಬಂದವರು 30–40 ವರ್ಷಗಳ ಹಿಂದೆ ಇಲ್ಲೇ ನೆಲೆ ನಿಂತಿದ್ದಾರೆ. ಮಕ್ಕಳು, ಮೊಮ್ಮಕ್ಕಳೂ ಇದ್ದಾರೆ. ತಾವು ನಿರ್ಮಿಸಿಕೊಂಡಿರುವ ಗುಡಿಸಲು, ಕಲ್ನಾರ್ ಶೀಟಿನ ಮನೆಗಳಿಗೆ ಖಾತೆ ಮಾಡಿಕೊಡುವಂತೆ ಹಲವು ಬಾರಿ ಪುರಸಭೆಗೆ ಮನವಿ ಸಲ್ಲಿಸಿದ್ದಾರೆ. ಆದರೂ ಈ ಬಗ್ಗೆ ಏಕೆ ಗಮನ ಹರಿಸುತ್ತಿಲ್ಲ? ಎಂದು ಪ್ರಶ್ನಿಸಿದರು.</p>.<p>ಇದಕ್ಕೆ ಸದಸ್ಯರಾದ ಎಂ.ಎಲ್.ದಿನೇಶ್, ರಾಧಾ ಶ್ರೀಕಂಠು ಇತರರು ದನಿಗೂಡಿಸಿದರು.</p>.<p>ಪೌರಕಾರ್ಮಿಕರೂ ಸೇರಿದಂತೆ ವಸತಿ ರಹಿತರಿಗೆ ನಿವೇಶನ ಹಂಚಲು ಸರ್ಕಾರಿ ಜಾಗ ಗುರುತಿಸುವ ಸಂಬಂಧ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲಾ ಗು ವುದು ಎಂದು ಮುಖ್ಯಾಧಿಕಾರಿ ಕೃಷ್ಣ ಹೇಳಿದರು.</p>.<p>ಪುರಸಭೆ ವಕೀಲರಾಗಿದ್ದ ವೆಂಕಟಪ್ಪ ಈಚೆಗೆ ನಿಧನರಾಗಿದ್ದು, ಹೊಸ ವಕೀಲರನ್ನು ನೇಮಕ ಮಾಡಿಕೊಳ್ಳಬೇಕಿದೆ. ಬಾಲರಾಜು, ಹೇಮಾರಾಧ್ಯ, ಪುಷ್ಪಲತಾ ಎಂಬ ವರು ಅರ್ಜಿ ಸಲ್ಲಿಸಿದ್ದಾರೆ ಎಂದು ಮುಖ್ಯಾ ಧಿಕಾರಿ ಕೃಷ್ಣ ಸಭೆಯ ಗಮನಕ್ಕೆ ತಂದರು.</p>.<p>ಅಧಿಕೃತ ಜ್ಞಾಪನ ಹೊರಡಿಸದೆ ವಕೀಲರನ್ನು ನೇಮಿಸಿಕೊಂಡರೆ ಅಸಿಂಧುವಾಗುತ್ತದೆ. ನಿಯಮ ಉಲ್ಲಂಘಿಸಿದರೆ ಪುರಸಭೆಗೆ ಕೆಟ್ಟ ಹೆಸರು ಬರುತ್ತದೆ ಎಂದು ಸದಸ್ಯರಾದ ಎಸ್.ನಂದೀಶ್, ಎಂ.ನಂದೀಶ್ ಆಕ್ಷೇಪ ವ್ಯಕ್ತಪಡಿಸಿದರು.</p>.<p class="Subhead">ರಾಜರ ಹೆಸರಿಡಿ: ಇದು ಐತಿಹಾಸಿಕ ಮಹತ್ವದ ಪಟ್ಟಣ. ರಸ್ತೆಗಳು, ಬಡಾವಣೆಗಳಿಗೆ ಇಲ್ಲಿ ಆಳಿದ ರಾಜ ಒಡೆಯರ್, ಕಂಠೀರವ ನರಸರಾಜ ಒಡೆಯರ್, ಚಿಕ್ಕದೇವರಾಜ ಒಡೆಯರ್ ಇತರರ ಹೆಸರಿಡಬೇಕು. ಆ ಮೂಲಕ ಈ ಊರಿನ ಪರಂಪರೆಯನ್ನು ಜೀವಂತಗೊಳಿಸಬೇಕು. ಮುಮ್ಮಡಿ ಕೃಷ್ಣರಾಜ ಒಡೆಯರ್ ಜನನ ಮಂಟಪ ಅನಾಥವಾಗಿದ್ದು, ಅದರ ರಕ್ಷಣೆಗೆ ಕ್ರಮ ವಹಿಸಬೇಕು. ಪತ್ರಕರ್ತರ ಕ್ಷೇಮ ನಿಧಿಗೆ ₹ 2 ಲಕ್ಷ ಮೀಸಲಿಡಬೇಕು ಎಂದು ಎಂ. ನಂದೀಶ್ ಸಲಹೆ ನೀಡಿದರು. ಇದಕ್ಕೆ ಸಭೆ ಒಕ್ಕೊರಲ ಸಮ್ಮತಿ ಸೂಚಿಸಿತು.</p>.<p>ಆಸ್ತಿ ರಕ್ಷಿಸಿ: ಕೆಲವೆಡೆ ಪುರಸಭೆ ಆಸ್ತಿ ಅತಿಕ್ರಮವಾಗುತ್ತಿದ್ದು, ರಕ್ಷಣೆಗೆ ಕ್ರಮ ಕೈಗೊಳ್ಳಬೇಕು. ಎಲ್ಲ ಆಸ್ತಿಗಳಿಗೆ ಫಲಕ ಹಾಕಬೇಕು ಎಂದು ಸದಸ್ಯರಾದ ವಸಂತಕುಮಾರಿ ಲೋಕೇಶ್, ರಾಧಾ ಶ್ರೀಕಂಠ, ಎಂ.ಎಲ್.ದಿನೇಶ್ ಒತ್ತಾಯಿಸಿದರು.</p>.<p>ಹಲವು ವಾರ್ಡ್ಗಳಲ್ಲಿ ಕಾಮಗಾರಿ ಅಪೂರ್ಣವಾಗಿದ್ದು, ಶೀಘ್ರ ಪೂರ್ಣ ಗೊಳಿಸಿ ಎಂದು ಸದಸ್ಯರು ಆಗ್ರಹಿಸಿದರು. ಅಗತ್ಯ ಇರುವೆಡೆ ಅಂಗನವಾಡಿಗಳ ನಿರ್ಮಾಣ, ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಇತರ ವಿಷಯಗಳು ಸಭೆಯಲ್ಲಿ ಚರ್ಚೆಯಾದವು.</p>.<p>ಅಧ್ಯಕ್ಷೆ ಪಿ.ನಿರ್ಮಲಾ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಪ್ರಕಾಶ್, ಸದಸ್ಯರಾದ ಕೃಷ್ಣಪ್ಪ, ಶಿವು ಚರ್ಚೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>