ನಾಗಮಂಗಲದಲ್ಲಿ ಇವರ ಒಡೆತನದಲ್ಲಿರುವ ವಾಣಿಜ್ಯ ಕಟ್ಟಡದಲ್ಲೇ ತಾಲ್ಲೂಕು ಕಾಂಗ್ರೆಸ್ ಕಚೇರಿ, ಕಾಂಗ್ರೆಸ್ ಮುಖಂಡ ಎನ್.ಚಲುವರಾಯಸ್ವಾಮಿ ಅವರ ಕಚೇರಿ ಇವೆ. ಪಿಎಸ್ಐ ನೇಮಕಾತಿ ಪ್ರಕರಣದಲ್ಲಿ ಭಾಗಿಯಾಗಿ ಹಾಸನ ಜಿಲ್ಲೆ, ಶ್ರವಣಬೆಳಗೊಳ ಮೂಲದ ವ್ಯಕ್ತಿಯೊಬ್ಬರಿಂದ ₹ 40 ಲಕ್ಷ ಹಣ ಪಡೆದ ಆರೋಪವಿದ್ದು ಅದರ ಆಧಾರದ ಮೇಲೆ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಿಐಡಿ ಪೊಲೀಸರು ಆರೋಪಿಯನ್ನು ಬೆಂಗಳೂರಿಗೆ ಕರೆದೊಯ್ದಿದ್ದಾರೆ.