<p><strong>ಪಾಂಡವಪುರ:</strong>ಶಾಸಕ ಮುರುಗೇಶ ನಿರಾಣಿ ಗುತ್ತಿಗೆ ಪಡೆದಿರುವ ಇಲ್ಲಿನ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ (ಪಿಎಸ್ಎಸ್ಕೆ) ಈ ಸಾಲಿನ ಕಬ್ಬು ಅರೆಯುವ ಸಿದ್ಧತೆಗಾಗಿ ಬಾಯ್ಲರ್ಗೆ ಅಗ್ನಿಸ್ಪರ್ಶ ಮಾಡಿ ಮಂಗಳವಾರ ಚಾಲನೆ ನೀಡಲಾಯಿತು.</p>.<p>ಕಾರ್ಖಾನೆಯಲ್ಲಿ 5 ಸಾವಿರ ಟಿಸಿಡಿ ಕಬ್ಬು ಅರೆಯುವ ಸಾಮರ್ಥ್ಯದ ವಿಸ್ತರಣೆಗೆ ಭೂಮಿಪೂಜೆಯನ್ನೂ ನೆರವೇರಿಸಲಾಯಿತು. ಆ ಮೂಲಕ ಕಳೆದ 4 ವರ್ಷಗಳಿಂದ ಸ್ಥಗಿತಗೊಂಡಿದ್ದ ಕಾರ್ಖಾನೆಗೆ ಚಾಲನೆ ಸಿಕ್ಕಂತಾಯಿತು.</p>.<p>ಮುರುಗೇಶ್ ಆರ್.ನಿರಾಣಿ ಮಾತನಾಡಿ ‘ಪಿಎಸ್ಎಸ್ಕೆಯುನ್ನು ಕಾನೂನುಬದ್ದವಾಗಿ ಪಾರದರ್ಶಕ ಇ–ಟೆಂಡರ್ ಮೂಲಕ ₹ 405 ಕೋಟಿಗೆ 40 ವರ್ಷಗಳ ಅವಧಿಗೆ ಗುತ್ತಿಗೆಗೆ ಪಡೆಯಲಾಗಿದೆ. ಮುಂದಿನ 5 ವರ್ಷಗಳಲ್ಲಿ 40 ಮೆಗಾವಾಟ್ ವಿದ್ಯುತ್ ಉತ್ಪಾದನೆ, ಎಥನಾಲ್, ಸ್ಪಿರಿಟ್, ರಸಗೊಬ್ಬರ, ಸ್ಯಾನಿಟೈಸರ್ ಸೇರಿ ಇತರ ಉಪ ಉತ್ಪನ್ನಗಳ ಘಟಕ ಸ್ಥಾಪಿಸಲಾಗುವುದು’ ಎಂದರು.</p>.<p>ಸುತ್ತೂರು ಶಿವರಾತ್ರಿ ದೇಶಿಕೇಂದ್ರಸ್ವಾಮೀಜಿ, ಅದಿಚುಂಚನಗಿರಿ ನಿರ್ಮಲಾನಂದನಾಥಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ದಲಿಂಗಸ್ವಾಮೀಜಿ, ಸಂಸದೆ ಸುಮಲತಾ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಇದ್ದರು. ಇದೇ ವೇಳೆ ಮುರುಗೇಶ್ ಆರ್. ನಿರಾಣಿ ಅವರ 54ನೇ ಜನ್ಮದಿನ ಆಚರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ:</strong>ಶಾಸಕ ಮುರುಗೇಶ ನಿರಾಣಿ ಗುತ್ತಿಗೆ ಪಡೆದಿರುವ ಇಲ್ಲಿನ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ (ಪಿಎಸ್ಎಸ್ಕೆ) ಈ ಸಾಲಿನ ಕಬ್ಬು ಅರೆಯುವ ಸಿದ್ಧತೆಗಾಗಿ ಬಾಯ್ಲರ್ಗೆ ಅಗ್ನಿಸ್ಪರ್ಶ ಮಾಡಿ ಮಂಗಳವಾರ ಚಾಲನೆ ನೀಡಲಾಯಿತು.</p>.<p>ಕಾರ್ಖಾನೆಯಲ್ಲಿ 5 ಸಾವಿರ ಟಿಸಿಡಿ ಕಬ್ಬು ಅರೆಯುವ ಸಾಮರ್ಥ್ಯದ ವಿಸ್ತರಣೆಗೆ ಭೂಮಿಪೂಜೆಯನ್ನೂ ನೆರವೇರಿಸಲಾಯಿತು. ಆ ಮೂಲಕ ಕಳೆದ 4 ವರ್ಷಗಳಿಂದ ಸ್ಥಗಿತಗೊಂಡಿದ್ದ ಕಾರ್ಖಾನೆಗೆ ಚಾಲನೆ ಸಿಕ್ಕಂತಾಯಿತು.</p>.<p>ಮುರುಗೇಶ್ ಆರ್.ನಿರಾಣಿ ಮಾತನಾಡಿ ‘ಪಿಎಸ್ಎಸ್ಕೆಯುನ್ನು ಕಾನೂನುಬದ್ದವಾಗಿ ಪಾರದರ್ಶಕ ಇ–ಟೆಂಡರ್ ಮೂಲಕ ₹ 405 ಕೋಟಿಗೆ 40 ವರ್ಷಗಳ ಅವಧಿಗೆ ಗುತ್ತಿಗೆಗೆ ಪಡೆಯಲಾಗಿದೆ. ಮುಂದಿನ 5 ವರ್ಷಗಳಲ್ಲಿ 40 ಮೆಗಾವಾಟ್ ವಿದ್ಯುತ್ ಉತ್ಪಾದನೆ, ಎಥನಾಲ್, ಸ್ಪಿರಿಟ್, ರಸಗೊಬ್ಬರ, ಸ್ಯಾನಿಟೈಸರ್ ಸೇರಿ ಇತರ ಉಪ ಉತ್ಪನ್ನಗಳ ಘಟಕ ಸ್ಥಾಪಿಸಲಾಗುವುದು’ ಎಂದರು.</p>.<p>ಸುತ್ತೂರು ಶಿವರಾತ್ರಿ ದೇಶಿಕೇಂದ್ರಸ್ವಾಮೀಜಿ, ಅದಿಚುಂಚನಗಿರಿ ನಿರ್ಮಲಾನಂದನಾಥಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ದಲಿಂಗಸ್ವಾಮೀಜಿ, ಸಂಸದೆ ಸುಮಲತಾ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಇದ್ದರು. ಇದೇ ವೇಳೆ ಮುರುಗೇಶ್ ಆರ್. ನಿರಾಣಿ ಅವರ 54ನೇ ಜನ್ಮದಿನ ಆಚರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>