ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ: ಒಂದು ದಿನ ಮುನ್ನವೇ ತಟ್ಟಿದ ಮುಷ್ಕರ ಬಿಸಿ

ಮಂಗಳವಾರ ಸಂಜೆಯ ನಂತರ ಬಸ್‌ಗಳಿಲ್ಲದೆ ಪರದಾಡಿದ ಪ್ರಯಾಣಿಕರು
Last Updated 7 ಏಪ್ರಿಲ್ 2021, 3:28 IST
ಅಕ್ಷರ ಗಾತ್ರ

ಮಂಡ್ಯ: ಆರನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಏ. 7 ರಂದು ಕರೆ ನೀಡಿದ್ದ ಸಾರಿಗೆ ನೌಕರರ ಮುಷ್ಕರದ ಬಿಸಿ ಮಂಗಳವಾರವೇ ಪ್ರಯಾಣಿಕರಿಗೆ ತಟ್ಟಿದ್ದು, ಮಧ್ಯಾಹ್ನದ ನಂತರ ಬಸ್‌ಗಳ ಸಂಖ್ಯೆ ಕಡಿಮೆ ಇದ್ದುದರಿಂದ ಊರಿಗೆ ತೆರಳಲು
ಪರದಾಡಿದರು.

ಮಂಡ್ಯ ವಿಭಾಗದಲ್ಲಿ ಮಂಗಳವಾರ ಶೇ 60 ರಷ್ಟು ಬಸ್‌ಗಳು ಮಾತ್ರ ರಸ್ತೆಗಳಿದಿದ್ದು, ಮಧ್ಯಾಹ್ನದ ನಂತರದ ಎಬಿ ಮಾರ್ಗಗಳು, ಹಾಲ್ಟಿಂಗ್‌ ಬಸ್‌ಗಳು ಘಟಕಗಳಿಂದ ತೆರಳಲಿಲ್ಲ. ಮಧ್ಯಾಹ್ನದ ನಂತರ ಕರ್ತವ್ಯಕ್ಕೆ ಹಾಜರಾದರೆ ಬುಧವಾರವೂ ಕೆಲಸ ಮಾಡಬೇಕಾಗುತ್ತದೆ. ಇದರಿಂದ ಮುಷ್ಕರಕ್ಕೆ ಹಿನ್ನೆಡೆಯಾಗುತ್ತದೆ ಎಂಬ ಕಾರಣಕ್ಕೆ
ಮಂಗಳವಾರವೇ ಕರ್ತವ್ಯಕ್ಕೆ ಗೈರಾಗುವ ಮೂಲಕ ಸಿಬ್ಬಂದಿ ಮುಷ್ಕರ ಆರಂಭಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ನಿತ್ಯ 345 ಬಸ್‌ಗಳು ವಿವಿಧ ಮಾರ್ಗಗಳಲ್ಲಿ ಸಂಚರಿಸುತ್ತಿದ್ದವು. ಆದರೆ, ಮಂಗಳವಾರ 262 ಬಸ್‌ಗಳಷ್ಟೇ ರಸ್ತೆಗಿಳಿದಿದ್ದು, ಎಲ್ಲಾ ಬಸ್‌ಗಳು ಮಂಗಳವಾರ ರಾತ್ರಿ ಘಟಕಗಳಿಗೆ ಹಿಂದಿರುಗಿದವು. ಸಂಜೆ ನಂತರ ಬಸ್‌ಗಳಿಲ್ಲದೆ ಪ್ರಯಾಣಿಕರು ಖಾಸಗಿ ಬಸ್‌, ಆಟೋಗಳನ್ನು ಹಿಡಿಯಬೇಕಾಯಿತು.

ಮಳವಳ್ಳಿಗೆ ಅರ್ಧ ಗಂಟೆಗೆ ಒಂದರಂತೆ ಬಸ್‌ಗಳು ಇದ್ದವು. ಆದರೆ ಸಂಜೆ 4.45ಕ್ಕೆ ಮಳವಳ್ಳಿಗೆ ಒಂದು ಬಸ್‌ ಹೋಯಿತು. ನಂತರ 6.15 ರವರೆಗೆ ಯಾವುದೇ ಬಸ್‌ಗಳಿಲ್ಲದೆ ಪರದಾಡಬೇಕಾಯಿತು ಎಂದು ಪ್ರಯಾಣಿಕರೊಬ್ಬರು
ದೂರಿದರು.

‘ಸಾರ್ವಜನಿಕರಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಈಗಾಗಲೇ ಸಿಬ್ಬಂದಿ ಜೊತೆಗೆ ನಿರಂತರವಾಗಿ ಮನವೊಲಿಕೆ ಮಾಡಲಾಗುತ್ತಿದೆ. ಎಷ್ಟು ಮಂದಿ ಸಿಬ್ಬಂದಿ ಹಾಜರಾಗುತ್ತಾರೋ ಅದರ ಮೇಲೆ ಸಂಚಾರ ನಿರ್ಧಾರವಾಗಲಿದೆ’ ಎಂದು ಕೆಎಸ್‌ಆರ್‌ಟಿಸಿ ಮಂಡ್ಯ ವಿಭಾಗೀಯ ನಿಯಂತ್ರಣಾಧಿಕಾರಿ ಕಿರಣ್‌ಕುಮಾರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT