<p><strong>ಮಂಡ್ಯ: </strong>‘ರಾಜ್ಯದಲ್ಲಿ ಲಾಕ್ಡೌನ್ ಮುಂದುವರಿಸುವ ಕುರಿತು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಕಂದಾಯ ಸಚಿವ ಆರ್.ಅಶೋಕ್ ಬುಧವಾರ ತಿಳಿಸಿದರು.</p>.<p>‘ಲಾಕ್ಡೌನ್ ಬಗ್ಗೆ ನಮ್ಮ ರಾಜ್ಯದ ನಿಲುವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಬೇಕಾಗಿದೆ. ರಾಜ್ಯದಲ್ಲಿರುವ ಪರಿಸ್ಥಿತಿ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಈಗಾಗಲೇ ಹಲವು ರಾಜ್ಯಗಳಲ್ಲಿ ಸರ್ಕಾರಿ ನೌಕರರ ವೇತನ ಕಡಿತ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವನ್ನೂ ಚರ್ಚಿಸಲಾಗುವುದು’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p><strong>2 ತಿಂಗಳ ಪಿಂಚಣಿ:</strong> ‘ಒಂದೇ ಕಂತಿನಲ್ಲಿ 2 ತಿಂಗಳ ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವಿಕಲರ ಪ್ರೋತ್ಸಾಹ ಧನ ವಿತರಣೆ ಮಾಡಲು ಆದೇಶ ನೀಡಿದ್ದೇನೆ. ಒಂದೇ ಬಾರಿ 2 ತಿಂಗಳ ಹಣ ನೀಡಲು ಸಾಧ್ಯವಾಗುವಂತೆ ಕಂದಾಯ ಇಲಾಖೆಯ ಸಾಫ್ಟ್ವೇರ್ ಬದಲಾವಣೆ ಮಾಡಲಾಗಿದೆ’ ಎಂದು ಹೇಳಿದರು.</p>.<p><strong>ಮತ್ತೊಬ್ಬನಿಗೆ ಕೋವಿಡ್ 19:</strong> ದೆಹಲಿ ನಿಜಾಮುದ್ದೀನ್ ಪ್ರದೇಶದಲ್ಲಿರುವ ತಬ್ಲೀಗ್ ಜಮಾತ್ ಧರ್ಮಸಭೆಯಲ್ಲಿ ಪಾಲ್ಗೊಂಡಿದ್ದ ಮಳವಳ್ಳಿಯ ಮತ್ತೊಬ್ಬ ವ್ಯಕ್ತಿಗೆ ಬುಧವಾರ ಕೋವಿಡ್ 19 ದೃಢಪಟ್ಟಿದ್ದು ಜಿಲ್ಲೆಯ ಸೋಂಕಿತರ ಸಂಖ್ಯೆ 4ಕ್ಕೇರಿದೆ.</p>.<p>ಧರ್ಮಸಭೆಯಲ್ಲಿ ಪಾಲ್ಗೊಂಡಿದ್ದ 7 ಮಂದಿಯ ಗಂಟಲು ದ್ರವ, ರಕ್ತ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಮಂಗಳವಾರ ಮೂವರಲ್ಲಿ ಕೋವಿಡ್ 19 ಪತ್ತೆಯಾಗಿತ್ತು. ಇಬ್ಬರ ವರದಿ ಸಮರ್ಪಕವಾಗಿ ಇರಲಿಲ್ಲವಾದ್ದರಿಂದ ಮತ್ತೊಮ್ಮೆ ಅವರ ಮಾದರಿಯನ್ನು ಕಳುಹಿಸಲಾಗಿತ್ತು. ಅವರಲ್ಲಿ ಒಬ್ಬರಿಗೆ ಕೋವಿಡ್ 19 ಪಾಸಿಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>‘ರಾಜ್ಯದಲ್ಲಿ ಲಾಕ್ಡೌನ್ ಮುಂದುವರಿಸುವ ಕುರಿತು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಕಂದಾಯ ಸಚಿವ ಆರ್.ಅಶೋಕ್ ಬುಧವಾರ ತಿಳಿಸಿದರು.</p>.<p>‘ಲಾಕ್ಡೌನ್ ಬಗ್ಗೆ ನಮ್ಮ ರಾಜ್ಯದ ನಿಲುವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಬೇಕಾಗಿದೆ. ರಾಜ್ಯದಲ್ಲಿರುವ ಪರಿಸ್ಥಿತಿ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಈಗಾಗಲೇ ಹಲವು ರಾಜ್ಯಗಳಲ್ಲಿ ಸರ್ಕಾರಿ ನೌಕರರ ವೇತನ ಕಡಿತ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವನ್ನೂ ಚರ್ಚಿಸಲಾಗುವುದು’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p><strong>2 ತಿಂಗಳ ಪಿಂಚಣಿ:</strong> ‘ಒಂದೇ ಕಂತಿನಲ್ಲಿ 2 ತಿಂಗಳ ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವಿಕಲರ ಪ್ರೋತ್ಸಾಹ ಧನ ವಿತರಣೆ ಮಾಡಲು ಆದೇಶ ನೀಡಿದ್ದೇನೆ. ಒಂದೇ ಬಾರಿ 2 ತಿಂಗಳ ಹಣ ನೀಡಲು ಸಾಧ್ಯವಾಗುವಂತೆ ಕಂದಾಯ ಇಲಾಖೆಯ ಸಾಫ್ಟ್ವೇರ್ ಬದಲಾವಣೆ ಮಾಡಲಾಗಿದೆ’ ಎಂದು ಹೇಳಿದರು.</p>.<p><strong>ಮತ್ತೊಬ್ಬನಿಗೆ ಕೋವಿಡ್ 19:</strong> ದೆಹಲಿ ನಿಜಾಮುದ್ದೀನ್ ಪ್ರದೇಶದಲ್ಲಿರುವ ತಬ್ಲೀಗ್ ಜಮಾತ್ ಧರ್ಮಸಭೆಯಲ್ಲಿ ಪಾಲ್ಗೊಂಡಿದ್ದ ಮಳವಳ್ಳಿಯ ಮತ್ತೊಬ್ಬ ವ್ಯಕ್ತಿಗೆ ಬುಧವಾರ ಕೋವಿಡ್ 19 ದೃಢಪಟ್ಟಿದ್ದು ಜಿಲ್ಲೆಯ ಸೋಂಕಿತರ ಸಂಖ್ಯೆ 4ಕ್ಕೇರಿದೆ.</p>.<p>ಧರ್ಮಸಭೆಯಲ್ಲಿ ಪಾಲ್ಗೊಂಡಿದ್ದ 7 ಮಂದಿಯ ಗಂಟಲು ದ್ರವ, ರಕ್ತ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಮಂಗಳವಾರ ಮೂವರಲ್ಲಿ ಕೋವಿಡ್ 19 ಪತ್ತೆಯಾಗಿತ್ತು. ಇಬ್ಬರ ವರದಿ ಸಮರ್ಪಕವಾಗಿ ಇರಲಿಲ್ಲವಾದ್ದರಿಂದ ಮತ್ತೊಮ್ಮೆ ಅವರ ಮಾದರಿಯನ್ನು ಕಳುಹಿಸಲಾಗಿತ್ತು. ಅವರಲ್ಲಿ ಒಬ್ಬರಿಗೆ ಕೋವಿಡ್ 19 ಪಾಸಿಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>