<p><strong>ಮಂಡ್ಯ: </strong>ಜಿಲ್ಲೆಯ ವಿವಿಧೆಡೆ ಮಂಗಳವಾರ ಭಾರಿ ಮಳೆ ಸುರಿದಿದ್ದು ಜನಜೀವನ ಅಸ್ತವ್ಯಸ್ತಗೊಂಡಿತ್ತು. ನಗರದ ಬೀಡಿ ಕಾರ್ಮಿಕರ ಕಾಲೊನಿಯ 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು ನಿವಾಸಿಗಳು ಪರದಾಡಿದರು.</p>.<p>ಬೆಳಿಗ್ಗೆಯಿಂದಲೂ ಬಿಸಿಲಿನ ವಾತಾವರಣವಿದ್ದು ಮಧ್ಯಾಹ್ನವೇ ಕೆಲಕಾಲ ಮಳೆ ಸುರಿಯಿತು. ಸಂಜೆ 6 ಗಂಟೆಗೆ ಆರಂಭಗೊಂಡ ಮಳೆ 7.30ರವರೆಗೂ ಧಾರಾಕಾರವಾಗಿ ಸುರಿಯುತ್ತಿತ್ತು. ಇಳಿಜಾರಿನ ಪ್ರದೇಶದಲ್ಲಿರುವ ಬೀಡಿಕಾರ್ಮಿಕರ ಕಾಲೊನಿಯ ಜನರು ಮಳೆಯಿಂದ ಸಂಕಷ್ಟಕ್ಕೀಡಾಗಿದ್ದರು.</p>.<p>ಬಡಾವಣೆಯಲ್ಲಿ ಚರಂಡಿ ವ್ಯವಸ್ಥೆ ಅಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೀರು ಮನೆಗಳಿಗೆ ನುಗ್ಗಿತು. ಅಪಾರ ಪ್ರಮಾಣದ ನೀರು ಹರಿದು ಬಂದ ಕಾರಣ ಮನೆಯಗಳ ಒಳಗೆ ಮಂಡಿಯುದ್ದ ನೀರು ನಿಂತಿತ್ತು. ನಿವಾಸಿಗಳು ನೀರು ಹೊರಹಾಕಲು ಹರಸಾಹಸಪಟ್ಟರು. ಹಲವು ಮನೆಗಳಲ್ಲಿ ಬಟ್ಟೆ, ಧಾನ್ಯಗಳು ಜಲಾವೃತಗೊಂಡಿದ್ದರು.</p>.<p>ನಿರಂತರ ಮಳೆಯಿಂದಾಗಿ ರಸ್ತೆಗಳ ತುಂಬೆಲ್ಲಾ ನೀರು ಹರಿಯಿತು. ನಗರದ ಅಂಚೆ ಕಚೇರಿ, ನಗರಸಭೆ ಕಚೇರಿ ಬಳಿ ಅಪಾರ ಪ್ರಮಾಣದ ನೀರು ನಿಂತಿತ್ತು. ವಿವಿಧೆಡೆ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿ ಕೆರೆಯಂತಾಗಿತ್ತು. ವಾಹನಗಳಲ್ಲಿ ಓಡಾಡುವ ಜನರು ಹರಸಾಹಸಪಟ್ಟರು. ಕಾರ್ಖಾನೆ ವೃತ್ತ, ನಂದಾ ವೃತ್ತ, ಮಹಾವೀರ ವೃತ್ತ, ಜಯಚಾಮರಾಜ ವೃತ್ತಗಳು ಕೆರೆಯಂತಾಗಿದ್ದವು. ಮದ್ದೂರು, ನಾಗಮಂಗಲ, ಶ್ರೀರಂಗಪಟ್ಟಣ ತಾಲ್ಲೂಕಿನಲ್ಲೂ ಧಾರಾಕಾರ ಮಳೆ ಸುರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ಜಿಲ್ಲೆಯ ವಿವಿಧೆಡೆ ಮಂಗಳವಾರ ಭಾರಿ ಮಳೆ ಸುರಿದಿದ್ದು ಜನಜೀವನ ಅಸ್ತವ್ಯಸ್ತಗೊಂಡಿತ್ತು. ನಗರದ ಬೀಡಿ ಕಾರ್ಮಿಕರ ಕಾಲೊನಿಯ 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು ನಿವಾಸಿಗಳು ಪರದಾಡಿದರು.</p>.<p>ಬೆಳಿಗ್ಗೆಯಿಂದಲೂ ಬಿಸಿಲಿನ ವಾತಾವರಣವಿದ್ದು ಮಧ್ಯಾಹ್ನವೇ ಕೆಲಕಾಲ ಮಳೆ ಸುರಿಯಿತು. ಸಂಜೆ 6 ಗಂಟೆಗೆ ಆರಂಭಗೊಂಡ ಮಳೆ 7.30ರವರೆಗೂ ಧಾರಾಕಾರವಾಗಿ ಸುರಿಯುತ್ತಿತ್ತು. ಇಳಿಜಾರಿನ ಪ್ರದೇಶದಲ್ಲಿರುವ ಬೀಡಿಕಾರ್ಮಿಕರ ಕಾಲೊನಿಯ ಜನರು ಮಳೆಯಿಂದ ಸಂಕಷ್ಟಕ್ಕೀಡಾಗಿದ್ದರು.</p>.<p>ಬಡಾವಣೆಯಲ್ಲಿ ಚರಂಡಿ ವ್ಯವಸ್ಥೆ ಅಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೀರು ಮನೆಗಳಿಗೆ ನುಗ್ಗಿತು. ಅಪಾರ ಪ್ರಮಾಣದ ನೀರು ಹರಿದು ಬಂದ ಕಾರಣ ಮನೆಯಗಳ ಒಳಗೆ ಮಂಡಿಯುದ್ದ ನೀರು ನಿಂತಿತ್ತು. ನಿವಾಸಿಗಳು ನೀರು ಹೊರಹಾಕಲು ಹರಸಾಹಸಪಟ್ಟರು. ಹಲವು ಮನೆಗಳಲ್ಲಿ ಬಟ್ಟೆ, ಧಾನ್ಯಗಳು ಜಲಾವೃತಗೊಂಡಿದ್ದರು.</p>.<p>ನಿರಂತರ ಮಳೆಯಿಂದಾಗಿ ರಸ್ತೆಗಳ ತುಂಬೆಲ್ಲಾ ನೀರು ಹರಿಯಿತು. ನಗರದ ಅಂಚೆ ಕಚೇರಿ, ನಗರಸಭೆ ಕಚೇರಿ ಬಳಿ ಅಪಾರ ಪ್ರಮಾಣದ ನೀರು ನಿಂತಿತ್ತು. ವಿವಿಧೆಡೆ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿ ಕೆರೆಯಂತಾಗಿತ್ತು. ವಾಹನಗಳಲ್ಲಿ ಓಡಾಡುವ ಜನರು ಹರಸಾಹಸಪಟ್ಟರು. ಕಾರ್ಖಾನೆ ವೃತ್ತ, ನಂದಾ ವೃತ್ತ, ಮಹಾವೀರ ವೃತ್ತ, ಜಯಚಾಮರಾಜ ವೃತ್ತಗಳು ಕೆರೆಯಂತಾಗಿದ್ದವು. ಮದ್ದೂರು, ನಾಗಮಂಗಲ, ಶ್ರೀರಂಗಪಟ್ಟಣ ತಾಲ್ಲೂಕಿನಲ್ಲೂ ಧಾರಾಕಾರ ಮಳೆ ಸುರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>