<p><strong>ಮಂಡ್ಯ</strong>: ರಾಜು ಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ನಗರದ ಗೂಬೆಹಳ್ಳದ ಪೌರಕಾರ್ಮಿಕರಾದ ಏಳು ಮಂದಿ ಕೊಲೆ ಆರೋಪದಿಂದ ಮುಕ್ತರಾಗಿದ್ದಾರೆ. </p>.<p>2015 ಆಗಸ್ಟ್ 15ರಂದು ಗೂಬೆಹಳ್ಳದ ಕಿರಾಣಿ ಅಂಗಡಿ ಬಳಿ ರಾಜುವಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದರು. ಗಾಯಗೊಂಡ ರಾಜುವನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. </p>.<p>ಈ ಆರೋಪಕ್ಕೆ ಸಂಬಂಧಪಟ್ಟಂತೆ ರಘು, ಕಾರ್ತಿಕ್, ಸತೀಶ್, ರಾಜು, ಗುರು, ಶಂಕರ, ನಾಗರಾಜು ಅವರ ಮೇಲೆ ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.</p>.<p>ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಹತ್ತು ವರ್ಷಗಳಿಂದ ಸುದೀರ್ಘ ವಿಚಾರಣೆ ನಡೆದಿತ್ತು. ನ್ಯಾಯಾಧೀಶರಾದ ಜೆ.ಎನ್. ಸುಬ್ರಹ್ಮಣ್ಯ ಅವರು ಏಳು ಮಂದಿಯನ್ನು ಆರೋಪದಿಂದ ಮುಕ್ತಗೊಳಿಸಿ ಆದೇಶಿಸಿದ್ದಾರೆ. </p>.<p>ವಕೀಲ ಬಿ.ಟಿ. ವಿಶ್ವನಾಥ್ ಅವರು ಏಳು ಜನರ ಪರವಾಗಿ ವಾದ ಮಂಡಿಸಿದ್ದರು. ಅವರೊಂದಿಗೆ ಕಿರಿಯ ಸಹೋದ್ಯೋಗಿಗಳಾದ ಪಲ್ಲವಿ, ಕಿಶೋರ್, ಚೇತನ್, ಆಕಾಶ್ ಅವರು ಸಹಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ರಾಜು ಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ನಗರದ ಗೂಬೆಹಳ್ಳದ ಪೌರಕಾರ್ಮಿಕರಾದ ಏಳು ಮಂದಿ ಕೊಲೆ ಆರೋಪದಿಂದ ಮುಕ್ತರಾಗಿದ್ದಾರೆ. </p>.<p>2015 ಆಗಸ್ಟ್ 15ರಂದು ಗೂಬೆಹಳ್ಳದ ಕಿರಾಣಿ ಅಂಗಡಿ ಬಳಿ ರಾಜುವಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದರು. ಗಾಯಗೊಂಡ ರಾಜುವನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. </p>.<p>ಈ ಆರೋಪಕ್ಕೆ ಸಂಬಂಧಪಟ್ಟಂತೆ ರಘು, ಕಾರ್ತಿಕ್, ಸತೀಶ್, ರಾಜು, ಗುರು, ಶಂಕರ, ನಾಗರಾಜು ಅವರ ಮೇಲೆ ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.</p>.<p>ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಹತ್ತು ವರ್ಷಗಳಿಂದ ಸುದೀರ್ಘ ವಿಚಾರಣೆ ನಡೆದಿತ್ತು. ನ್ಯಾಯಾಧೀಶರಾದ ಜೆ.ಎನ್. ಸುಬ್ರಹ್ಮಣ್ಯ ಅವರು ಏಳು ಮಂದಿಯನ್ನು ಆರೋಪದಿಂದ ಮುಕ್ತಗೊಳಿಸಿ ಆದೇಶಿಸಿದ್ದಾರೆ. </p>.<p>ವಕೀಲ ಬಿ.ಟಿ. ವಿಶ್ವನಾಥ್ ಅವರು ಏಳು ಜನರ ಪರವಾಗಿ ವಾದ ಮಂಡಿಸಿದ್ದರು. ಅವರೊಂದಿಗೆ ಕಿರಿಯ ಸಹೋದ್ಯೋಗಿಗಳಾದ ಪಲ್ಲವಿ, ಕಿಶೋರ್, ಚೇತನ್, ಆಕಾಶ್ ಅವರು ಸಹಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>