‘ಪಕ್ಷಿಧಾಮದ ಬಳಿ ನದಿಯ ನೀರಿನ ಮಟ್ಟ ಭಾನುವಾರ ರಾತ್ರಿಯಿಂದ ತುಸು ಏರಿಕೆಯಾಗಿದೆ. ಹಾಗಾಗಿ ಎಲ್ಲ 18 ದೋಣಿಗಳ ವಿಹಾರವನ್ನೂ ನಿಲ್ಲಿಸಲಾಗಿದೆ. ನದಿಯಲ್ಲಿ ಸುಮಾರು 10 ಸಾವಿರ ಕ್ಯುಸೆಕ್ ನೀರು ಹರಿಯುತ್ತಿದ್ದು, ದೋಣಿಗಳನ್ನು ಸುಗಮವಾಗಿ ನಡೆಸಲು ಆಗುವುದಿಲ್ಲ. ಹಾಗಾಗಿ ದೋಣಿಗಳನ್ನು ದಡದಲ್ಲಿ ಕಟ್ಟಿ ಹಾಕಿದ್ದೇವೆ. ನದಿಯಲ್ಲಿ ನೀರಿನ ಮಟ್ಟ ಇಳಿಕೆ ಆಗುವವರೆಗೆ ದೋಣಿ ವಿಹಾರ ಆರಂಭಿಸುವುದಿಲ್ಲ’ ಎಂದು ಪಕ್ಷಿಧಾಮದ ಉಪ ವಲಯ ಅರಣ್ಯಾಧಿಕಾರಿ ಪುಟ್ಟಮಾದೇಗೌಡ ತಿಳಿಸಿದರು.