<p><strong>ನಾಗಮಂಗಲ</strong>: ನಮ್ಮ ಸುತ್ತಮುತ್ತಲಿನ ಕೆರೆ–ಕಟ್ಟೆಗಳನ್ನು ಅಭಿವೃದ್ಧಿಪಡಿಸಿ ಅಧಿಕ ಪ್ರಮಾಣದ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚುವಂತೆ ಮಾಡಿದರೆ ಅಂತರ್ಜಲ ಮಟ್ಟವು ವೃದ್ಧಿಸಲು ಸಾಧ್ಯವಾಗುತ್ತದೆ ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಮೈಸೂರು ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ ತಿಳಿಸಿದರು.</p>.<p>ತಾಲ್ಲೂಕಿನ ದೇವಲಾಪುರ ಹೋಬಳಿಯ ಭೀಮನಹಳ್ಳಿ ಗ್ರಾಮ ಪಂಚಾಯಿತಿಯ ಸಂಪನಹಳ್ಳಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಯೋಜಿಸಿದ್ದ ನಮ್ಮೂರು ನಮ್ಮ ಕೆರೆ ಪುನಶ್ಚೇತನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಗ್ರಾಮೀಣ ಪ್ರದೇಶಗಳಲ್ಲಿ ಕೆರೆಗಳು ನಾಶವಾಗುತ್ತಿರುವುದರಿಂದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನಮ್ಮೂರು ನಮ್ಮ ಕೆರೆ ಯೋಜನೆ ಅಡಿ ಅವುಗಳ ಪುನಶ್ಚೇತನ ಕಾರ್ಯವನ್ನು ನಡೆಸಿಕೊಂಡು ಬರುತ್ತಿದೆ. ಈ ವಿಶೇಷ ಯೋಜನೆಯಡಿ 488ನೇ ಕೆರೆಯ ಅಭಿವೃದ್ಧಿ ಕಾರ್ಯ ನೆರವೇರುತ್ತಿದೆ ಎಂದರು.</p>.<p>ತಾ.ಪಂ ಇಒ ಚಂದ್ರಮೌಳಿ ಮಾತನಾಡಿ, ರಾಜ–ಮಹಾರಾಜರು ಕೆರೆಕಟ್ಟೆ, ದೇವಸ್ಥಾನಗಳನ್ನು ಕಟ್ಟಿಸುವ ಮೂಲಕ ಸಮಾಜದ ಏಳಿಗೆಗೆ ಕಾರಣೀಭೂತರಾಗಿದ್ದರು. ಜಲ ಮೂಲಗಳ ಬಗ್ಗೆ ಅವರು ಆದ್ಯತೆ ನೀಡಿದ್ದರು. ಈಗ ಸರ್ಕಾರವೂ ಅಂಥ ಜನೋಪಯೋಗಿ ಕೆಲಸಗಳನ್ನು ಮಾಡು ತ್ತಿದ್ದು, ಅವುಗಳನ್ನು ರಕ್ಷಿಸುವಂತೆ ಜಾಗೃತಗೊಳಿಸಲು ಈ ಯೋಜನೆ ರೂಪಿ ಸಿರುವುದು ಸ್ವಾಗತಾರ್ಹ ಎಂದರು.</p>.<p>ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನಿರ್ದೇಶಕಿ ಚೇತನಾ, ಜಿಲ್ಲಾ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಕೆ.ಹನುಮಂತಯ್ಯ, ಲೋಕೇಶ್, ಗ್ರಾ.ಪಂ.ಅಧ್ಯಕ್ಷೆ ಅಶ್ವಿನಿ ನಾಗೇಶ್, ಯೋಜನಾಧಿಕಾರಿ ದಿವಾಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ</strong>: ನಮ್ಮ ಸುತ್ತಮುತ್ತಲಿನ ಕೆರೆ–ಕಟ್ಟೆಗಳನ್ನು ಅಭಿವೃದ್ಧಿಪಡಿಸಿ ಅಧಿಕ ಪ್ರಮಾಣದ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚುವಂತೆ ಮಾಡಿದರೆ ಅಂತರ್ಜಲ ಮಟ್ಟವು ವೃದ್ಧಿಸಲು ಸಾಧ್ಯವಾಗುತ್ತದೆ ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಮೈಸೂರು ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ ತಿಳಿಸಿದರು.</p>.<p>ತಾಲ್ಲೂಕಿನ ದೇವಲಾಪುರ ಹೋಬಳಿಯ ಭೀಮನಹಳ್ಳಿ ಗ್ರಾಮ ಪಂಚಾಯಿತಿಯ ಸಂಪನಹಳ್ಳಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಯೋಜಿಸಿದ್ದ ನಮ್ಮೂರು ನಮ್ಮ ಕೆರೆ ಪುನಶ್ಚೇತನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಗ್ರಾಮೀಣ ಪ್ರದೇಶಗಳಲ್ಲಿ ಕೆರೆಗಳು ನಾಶವಾಗುತ್ತಿರುವುದರಿಂದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನಮ್ಮೂರು ನಮ್ಮ ಕೆರೆ ಯೋಜನೆ ಅಡಿ ಅವುಗಳ ಪುನಶ್ಚೇತನ ಕಾರ್ಯವನ್ನು ನಡೆಸಿಕೊಂಡು ಬರುತ್ತಿದೆ. ಈ ವಿಶೇಷ ಯೋಜನೆಯಡಿ 488ನೇ ಕೆರೆಯ ಅಭಿವೃದ್ಧಿ ಕಾರ್ಯ ನೆರವೇರುತ್ತಿದೆ ಎಂದರು.</p>.<p>ತಾ.ಪಂ ಇಒ ಚಂದ್ರಮೌಳಿ ಮಾತನಾಡಿ, ರಾಜ–ಮಹಾರಾಜರು ಕೆರೆಕಟ್ಟೆ, ದೇವಸ್ಥಾನಗಳನ್ನು ಕಟ್ಟಿಸುವ ಮೂಲಕ ಸಮಾಜದ ಏಳಿಗೆಗೆ ಕಾರಣೀಭೂತರಾಗಿದ್ದರು. ಜಲ ಮೂಲಗಳ ಬಗ್ಗೆ ಅವರು ಆದ್ಯತೆ ನೀಡಿದ್ದರು. ಈಗ ಸರ್ಕಾರವೂ ಅಂಥ ಜನೋಪಯೋಗಿ ಕೆಲಸಗಳನ್ನು ಮಾಡು ತ್ತಿದ್ದು, ಅವುಗಳನ್ನು ರಕ್ಷಿಸುವಂತೆ ಜಾಗೃತಗೊಳಿಸಲು ಈ ಯೋಜನೆ ರೂಪಿ ಸಿರುವುದು ಸ್ವಾಗತಾರ್ಹ ಎಂದರು.</p>.<p>ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನಿರ್ದೇಶಕಿ ಚೇತನಾ, ಜಿಲ್ಲಾ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಕೆ.ಹನುಮಂತಯ್ಯ, ಲೋಕೇಶ್, ಗ್ರಾ.ಪಂ.ಅಧ್ಯಕ್ಷೆ ಅಶ್ವಿನಿ ನಾಗೇಶ್, ಯೋಜನಾಧಿಕಾರಿ ದಿವಾಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>