ಕಲ್ಯಾಣಿ ಹತ್ತಿರಕ್ಕೆ ಹೋದರೆ ಗಬ್ಬು ವಾಸನೆ ಬರುತ್ತದೆ. ನೀರಿನಲ್ಲಿ ಹುಳುಗಳಾಗಿವೆ, ಅಲ್ಲಲ್ಲಿ ಪ್ಲಾಸ್ಟಿಕ್ ಬಾಟಲಿಗಳು, ಚೀಲಗಳು, ಡಬ್ಬಿಗಳು ತೇಲುತ್ತಿವೆ. ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ. ಈ ಅವ್ಯವಸ್ಥೆಯಿಂದ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವವರು, ಪಾಠ ಕಲಿಯುವ ವಿದ್ಯಾರ್ಥಿಗಳು ಹಾಗೂ ಪ್ರವಾಸಿಗರು ಮುಜುಗರ ಅನುಭವಿಸುತ್ತಿದ್ದಾರೆ.