<p><strong>ಮದ್ದೂರು (ಮಂಡ್ಯ ಜಿಲ್ಲೆ):</strong> ಪಟ್ಟಣದ ಹೊಳೆ ಬೀದಿಯಲ್ಲಿರುವ ರೇಣುಕಾ ಎಲ್ಲಮ್ಮದೇವಿ 54ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ 27ನೇ ವರ್ಷದ ಮಹಾಚಂಡಿಕಾ ಯಾಗದ ಕಾರ್ಯಕ್ರಮಗಳು ಜ.31ರಿಂದ ಫೆ.2ರವರೆಗೆ ನಡೆಯಲಿವೆ.</p>.<p>31ರಂದು ಗಣಪತಿ ಪೂಜೆ, ಕಳಶ ಸ್ಥಾಪನೆ ಸೇರಿ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿವೆ. ಫೆ.1ರಂದು ಬೆಳಿಗ್ಗೆ 8.30ಕ್ಕೆ ಮಹಾಚಂಡಿಕಾ ಯಾಗ ಆರಂಭ<br>ವಾಗಲಿದ್ದು, ಬೆಳಿಗ್ಗೆ 11.30ಕ್ಕೆ ಮಹಾಪೂರ್ಣಾಹುತಿ ನಂತರ ಸುಹಾಸಿನಿ ಆರಾಧನೆ ಹಾಗೂ ಕನ್ನಿಕಾ ಆರಾಧನೆ ನಡೆಯಲಿದೆ. </p>.<p>ಮಧ್ಯಾಹ್ನ 12.30ಕ್ಕೆ ಮಹಾ ಮಂಗಳಾರತಿ, ಮಹಿಳೆಯರಿಂದ ತಂಬಿಟ್ಟಿನ ಆರತಿ ನಡೆಯಲಿದೆ. ಮಧ್ಯಾಹ್ನ 1ರಿಂದ ದೇವಸ್ಥಾನದ ಆವರಣದಲ್ಲಿ ‘ಅನ್ನ ಸಂತರ್ಪಣೆ’ ಏರ್ಪಡಿಸಲಾಗಿದೆ. </p>.<p>ಸಂಜೆ 4.15ರಿಂದ ನಿಂಬೆಹಣ್ಣಿನ ದೀಪದ ಆರತಿ ಮತ್ತು ಉಯ್ಯಾಲೋತ್ಸವ ನಡೆಯಲಿದೆ. ಸಂಜೆ 6.30ಕ್ಕೆ ಮುತ್ತಿನ ಪಲ್ಲಕ್ಕಿಯಲ್ಲಿ ಪುಷ್ಪಮಾಲೆಗಳಿಂದ ಅಲಂಕೃತವಾದ ದೇವಿಯ ಮೆರವಣಿಗೆಯನ್ನು ಏರ್ಪಡಿಸಲಾಗಿದೆ. </p>.<p>‘ಮುತ್ತಿನ ಪಲ್ಲಕ್ಕಿ’ ಮೆರವಣಿಗೆಯಲ್ಲಿ ತಿರುಪತಿಯ ಮಂಜು ಬಾಲಾಜಿ ಅವರ ವಾದ್ಯಗೋಷ್ಠಿ, ಮಂಗಳೂರಿನ ಯಕ್ಷಗಾನ, ಕೇರಳದ ಚಂಡೆ ಮೇಳ, ತಮಿಳುನಾಡಿನ ಬ್ಯಾಂಡ್ ಸೆಟ್, ಪೂಜಾ ಕುಣಿತ, ತಮಟೆ, ನಗಾರಿ ಸೇರಿ ಹಲವು ಜಾನಪದ ಕಲಾತಂಡಗಳು ಭಾಗವಹಿಸಲಿವೆ.</p>.<p>ಫೆ.2ರಂದು ಬೆಳಿಗ್ಗೆ 6ಕ್ಕೆ ದೇವಿಯನ್ನು ದೇವಸ್ಥಾನದ ಮೂಲಸ್ಥಾನಕ್ಕೆ ಆಹ್ವಾನಿಸಿ, ಬೆಳಿಗ್ಗೆ 8.30ಕ್ಕೆ ಕ್ಷೀರಾಭಿಷೇಕ, ಅಲಂಕಾರ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗವಾಗಲಿದೆ ಎಂದು ಧರ್ಮದರ್ಶಿ ಶ್ರೀನಿವಾಸ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು (ಮಂಡ್ಯ ಜಿಲ್ಲೆ):</strong> ಪಟ್ಟಣದ ಹೊಳೆ ಬೀದಿಯಲ್ಲಿರುವ ರೇಣುಕಾ ಎಲ್ಲಮ್ಮದೇವಿ 54ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ 27ನೇ ವರ್ಷದ ಮಹಾಚಂಡಿಕಾ ಯಾಗದ ಕಾರ್ಯಕ್ರಮಗಳು ಜ.31ರಿಂದ ಫೆ.2ರವರೆಗೆ ನಡೆಯಲಿವೆ.</p>.<p>31ರಂದು ಗಣಪತಿ ಪೂಜೆ, ಕಳಶ ಸ್ಥಾಪನೆ ಸೇರಿ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿವೆ. ಫೆ.1ರಂದು ಬೆಳಿಗ್ಗೆ 8.30ಕ್ಕೆ ಮಹಾಚಂಡಿಕಾ ಯಾಗ ಆರಂಭ<br>ವಾಗಲಿದ್ದು, ಬೆಳಿಗ್ಗೆ 11.30ಕ್ಕೆ ಮಹಾಪೂರ್ಣಾಹುತಿ ನಂತರ ಸುಹಾಸಿನಿ ಆರಾಧನೆ ಹಾಗೂ ಕನ್ನಿಕಾ ಆರಾಧನೆ ನಡೆಯಲಿದೆ. </p>.<p>ಮಧ್ಯಾಹ್ನ 12.30ಕ್ಕೆ ಮಹಾ ಮಂಗಳಾರತಿ, ಮಹಿಳೆಯರಿಂದ ತಂಬಿಟ್ಟಿನ ಆರತಿ ನಡೆಯಲಿದೆ. ಮಧ್ಯಾಹ್ನ 1ರಿಂದ ದೇವಸ್ಥಾನದ ಆವರಣದಲ್ಲಿ ‘ಅನ್ನ ಸಂತರ್ಪಣೆ’ ಏರ್ಪಡಿಸಲಾಗಿದೆ. </p>.<p>ಸಂಜೆ 4.15ರಿಂದ ನಿಂಬೆಹಣ್ಣಿನ ದೀಪದ ಆರತಿ ಮತ್ತು ಉಯ್ಯಾಲೋತ್ಸವ ನಡೆಯಲಿದೆ. ಸಂಜೆ 6.30ಕ್ಕೆ ಮುತ್ತಿನ ಪಲ್ಲಕ್ಕಿಯಲ್ಲಿ ಪುಷ್ಪಮಾಲೆಗಳಿಂದ ಅಲಂಕೃತವಾದ ದೇವಿಯ ಮೆರವಣಿಗೆಯನ್ನು ಏರ್ಪಡಿಸಲಾಗಿದೆ. </p>.<p>‘ಮುತ್ತಿನ ಪಲ್ಲಕ್ಕಿ’ ಮೆರವಣಿಗೆಯಲ್ಲಿ ತಿರುಪತಿಯ ಮಂಜು ಬಾಲಾಜಿ ಅವರ ವಾದ್ಯಗೋಷ್ಠಿ, ಮಂಗಳೂರಿನ ಯಕ್ಷಗಾನ, ಕೇರಳದ ಚಂಡೆ ಮೇಳ, ತಮಿಳುನಾಡಿನ ಬ್ಯಾಂಡ್ ಸೆಟ್, ಪೂಜಾ ಕುಣಿತ, ತಮಟೆ, ನಗಾರಿ ಸೇರಿ ಹಲವು ಜಾನಪದ ಕಲಾತಂಡಗಳು ಭಾಗವಹಿಸಲಿವೆ.</p>.<p>ಫೆ.2ರಂದು ಬೆಳಿಗ್ಗೆ 6ಕ್ಕೆ ದೇವಿಯನ್ನು ದೇವಸ್ಥಾನದ ಮೂಲಸ್ಥಾನಕ್ಕೆ ಆಹ್ವಾನಿಸಿ, ಬೆಳಿಗ್ಗೆ 8.30ಕ್ಕೆ ಕ್ಷೀರಾಭಿಷೇಕ, ಅಲಂಕಾರ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗವಾಗಲಿದೆ ಎಂದು ಧರ್ಮದರ್ಶಿ ಶ್ರೀನಿವಾಸ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>