ಜಾತ್ರಾ ಮಹೋತ್ಸವದ ಅಂಗವಾಗಿ 26ರಂದು ಸಂಜೆ 6.00 ಗಂಟೆಗೆ ಮೂಲದೇವರ ಅನುಜ್ಞೆ, ಭೂಶಾಂತಿ, ಗಣಪತಿ ಪುಜೆ, ಸ್ವಸ್ತಿವಾಚನ, ಪಂಚಗವ್ಯಾರಾಧನೆ, ದೇವನಾಂದಿ, ಮಹಾಮಂಗಳಾರತಿ, ಫೆ. 27 ರಂದು ಶನಿವಾರ ಭರತ ಹುಣ್ಣಿಮೆ ಪ್ರಯುಕ್ತ ಬೆಳಿಗ್ಗೆ ಸುಪ್ರಭಾತ ಸೇವೆ, ಗಣಪತಿ ಪ್ರಾರ್ಥನೆ, ರಕ್ಷಾಬಂಧನ, ಶ್ರೀ ರೇಣುಕಾ ಯಲ್ಲಮ್ಮ ದೇವಿಯವರಿಗೆ ಅಭಿಷೇಕ ಮತ್ತು ಅಲಂಕಾರ ಬೆಳಿಗ್ಗೆ 7.30 ರಿಂದ ದೇವಿಗೆ ಶುಭ ಮೀನ ಲಗ್ನದಲ್ಲಿ ಚಂಡಿಯಾಗ,ಬೆಳಿಗ್ಗೆ 11.30 ಕ್ಕೆ ಮಹಾಪೂರ್ಣಾಹುತಿ, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ, ಮಹಿಳೆಯರಿಂದ ತಂಬಿಟ್ಟಿನ ಆರತಿ ನಡೆಯಲಿದೆ. ನಂತರಮತ್ತು ತೀರ್ಥಪ್ರಸಾದ, ಮಧ್ಯಾಹ್ನ ದೇವಸ್ಥಾನದ ಆವರಣದಲ್ಲಿ ಮಹಾಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ.