‘ಜಿಲ್ಲಾಧಿಕಾರಿ ಆದೇಶದಂತೆ ಖಾತೆ ಮಾಡಿಕೊಡಬೇಕಿತ್ತು. ಈ ಸಂಬಂಧ ಖಾತೆ ಬದಲಾವಣೆ ಮಾಡಿ, ನನ್ನ ಹೆಸರಿಗೆ ಪಹಣಿ (ಆರ್ಟಿಸಿ) ತೋರಿಸಲು ಶಿರಸ್ತೇದಾರ ಜಯರಾಂ ಮೂರ್ತಿ ಎಂಬುವರು ₹ 80 ಸಾವಿರ ಲಂಚ ಪಡೆದು, ಇನ್ನೂ ₹ 20 ಸಾವಿರಕ್ಕೆ ಬೇಡಿಕೆ ಇಟ್ಟಿದ್ದಾರೆ. ಕೆಲಸವನ್ನೂ ಮಾಡಿಕೊಡದೆ ಮೋಸ ಮಾಡಿದ್ದಾರೆ. ತಾಲ್ಲೂಕು ಮತ್ತು ಜಿಲ್ಲಾಡಳಿತ ನ್ಯಾಯ ದೊರಕಿಸಿಕೊಡಬೇಕು. ಜಮೀನು ಕೈತಪ್ಪಿ ಹೋಗುತ್ತಿರುವುದರಿಂದ ಮನನೊಂದು ಆತ್ಮಹತ್ಯೆಗೆ ಸಿದ್ಧನಾಗಿದ್ದು, ರಾಷ್ಟ್ರಪತಿಗೆ ಪತ್ರ ಬರೆದು ದಯಾಮರಣಕ್ಕೆ ಅನುಮತಿ ನೀಡುವಂತೆ ಕೋರಿದ್ದೇನೆ’ ಎಂದು ಸಿದ್ದಯ್ಯ ತಿಳಿಸಿದರು.