<p><strong>ಪಾಂಡವಪುರ:</strong> ಮನುಷ್ಯ ಎಷ್ಟೇ ದೊಡ್ಡ ವ್ಯಕ್ತಿಯಾದರೂ ಹುಟ್ಟಿ ಬೆಳೆದಂತಹ ನೆಲದಲ್ಲಿ ಮಾತ್ರ ಮನಸ್ಸಿನ ಭಾವನೆಗಳನ್ನು ಹಂಚಿಕೊಳ್ಳಲು ಸಾಧ್ಯ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ಮಂಗಳವಾರ ಸಂಜೆ ಪಾಂಡವ ಬಳಗದ ವತಿಯಿಂದ ಆಯೋಜಿಸಿದ್ದ ತಾಲ್ಲೂಕಿನ ಸೀತಾಪುರ ಗ್ರಾಮದವರಾದ ನಿವೃತ್ತ ಐಎಎಸ್ ಅಧಿಕಾರಿ ಎಸ್.ಆರ್.ಉಮಾಶಂಕರ್ ಅವರಿಗೆ ಉತ್ತಮ ಪಾಂಡವ ಉಮಾಶಂಕರ್ ಎಂಬ ಬಿರುದು ಹಾಗೂ ತವರಿನ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಎಸ್.ಆರ್.ಉಮಾಶಂಕರ್ ಅವರು ಅಧಿಕಾರಿಯಾಗಿ ದೊಡ್ಡಮಟ್ಟದಲ್ಲಿ ಬೆಳೆದರೂ ಎಲ್ಲೂ ಅವರು ಮುಕ್ತವಾಗಿ ತಮ್ಮ ಮನದಾಳದ ಮಾತು ಹಂಚಿಕೊಳ್ಳಲು ಸಾಧ್ಯವಿಲ್ಲ. ತವರಿನಲ್ಲಿ ತಮ್ಮ ಮನಸ್ಸಿನೊಳಗಿರುವ ಭಾವನೆಗಳನ್ನು ಹಂಚಿಕೊಳ್ಳಬಹುದಾಗಿದೆ’ ಎಂದರು.</p>.<p>ಅಭಿನಂದನೆ ಸ್ವೀಕರಿಸಿ ಮಾತನಾಡಿದ ನಿವೃತ್ತ ಐಎಎಸ್ ಅಧಿಕಾರಿ ಎಸ್.ಆರ್.ಉಮಾಶಂಕರ್, ‘ನನ್ನ ಅಧಿಕಾರದ ಅವಧಿಯಲ್ಲಿ ನನಗೆ ಸಿಕ್ಕಂತ ಅವಕಾಶದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ನನ್ನ ಕೆಲಸ ನನಗೆ ಆತ್ಮತೃಪ್ತಿ ತಂದಿದೆ. ಆತ್ಮ ಸಾಕ್ಷಿಗೆ ವಿರುದ್ಧವಾಗಿ ನಾನೆಂದು ಕೆಲಸ ಮಾಡಿಲ್ಲ’ ಎಂದು ತಿಳಿಸಿದರು.</p>.<p>ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್ ಗೌಡ, ಪ್ರೊ.ಎಂ.ಕೃಷ್ಣೇಗೌಡ ಮಾತನಾಡಿದರು. ತ್ರಿವೇಣಿ ಉಮಾಶಂಕರ್, ಪಾಂಡವ ಬಳಗದ ಎಂ.ಎಸ್.ಮರಿಸ್ವಾಮಿಗೌಡ, ಎಚ್.ಆರ್.ತಿಮ್ಮೇಗೌಡ, ಬಿ.ಎಸ್.ಜಯರಾಮು, ಎಸ್.ನಾರಾಯಣಗೌಡ, ರಾಮಕೃಷ್ಣೇಗೌಡ, ಎಂ.ರಮೇಶ್, ಎಚ್.ಆರ್.ಧನ್ಯಕುಮಾರ್, ಮೇನಾಗರ ಪ್ರಕಾಶ್, ಚಂದ್ರಶೇಖರಯ್ಯ, ನಾಗಲಿಂಗೇಗೌಡ ಪಾಲ್ಗೊಂಡಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ:</strong> ಮನುಷ್ಯ ಎಷ್ಟೇ ದೊಡ್ಡ ವ್ಯಕ್ತಿಯಾದರೂ ಹುಟ್ಟಿ ಬೆಳೆದಂತಹ ನೆಲದಲ್ಲಿ ಮಾತ್ರ ಮನಸ್ಸಿನ ಭಾವನೆಗಳನ್ನು ಹಂಚಿಕೊಳ್ಳಲು ಸಾಧ್ಯ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ಮಂಗಳವಾರ ಸಂಜೆ ಪಾಂಡವ ಬಳಗದ ವತಿಯಿಂದ ಆಯೋಜಿಸಿದ್ದ ತಾಲ್ಲೂಕಿನ ಸೀತಾಪುರ ಗ್ರಾಮದವರಾದ ನಿವೃತ್ತ ಐಎಎಸ್ ಅಧಿಕಾರಿ ಎಸ್.ಆರ್.ಉಮಾಶಂಕರ್ ಅವರಿಗೆ ಉತ್ತಮ ಪಾಂಡವ ಉಮಾಶಂಕರ್ ಎಂಬ ಬಿರುದು ಹಾಗೂ ತವರಿನ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಎಸ್.ಆರ್.ಉಮಾಶಂಕರ್ ಅವರು ಅಧಿಕಾರಿಯಾಗಿ ದೊಡ್ಡಮಟ್ಟದಲ್ಲಿ ಬೆಳೆದರೂ ಎಲ್ಲೂ ಅವರು ಮುಕ್ತವಾಗಿ ತಮ್ಮ ಮನದಾಳದ ಮಾತು ಹಂಚಿಕೊಳ್ಳಲು ಸಾಧ್ಯವಿಲ್ಲ. ತವರಿನಲ್ಲಿ ತಮ್ಮ ಮನಸ್ಸಿನೊಳಗಿರುವ ಭಾವನೆಗಳನ್ನು ಹಂಚಿಕೊಳ್ಳಬಹುದಾಗಿದೆ’ ಎಂದರು.</p>.<p>ಅಭಿನಂದನೆ ಸ್ವೀಕರಿಸಿ ಮಾತನಾಡಿದ ನಿವೃತ್ತ ಐಎಎಸ್ ಅಧಿಕಾರಿ ಎಸ್.ಆರ್.ಉಮಾಶಂಕರ್, ‘ನನ್ನ ಅಧಿಕಾರದ ಅವಧಿಯಲ್ಲಿ ನನಗೆ ಸಿಕ್ಕಂತ ಅವಕಾಶದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ನನ್ನ ಕೆಲಸ ನನಗೆ ಆತ್ಮತೃಪ್ತಿ ತಂದಿದೆ. ಆತ್ಮ ಸಾಕ್ಷಿಗೆ ವಿರುದ್ಧವಾಗಿ ನಾನೆಂದು ಕೆಲಸ ಮಾಡಿಲ್ಲ’ ಎಂದು ತಿಳಿಸಿದರು.</p>.<p>ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್ ಗೌಡ, ಪ್ರೊ.ಎಂ.ಕೃಷ್ಣೇಗೌಡ ಮಾತನಾಡಿದರು. ತ್ರಿವೇಣಿ ಉಮಾಶಂಕರ್, ಪಾಂಡವ ಬಳಗದ ಎಂ.ಎಸ್.ಮರಿಸ್ವಾಮಿಗೌಡ, ಎಚ್.ಆರ್.ತಿಮ್ಮೇಗೌಡ, ಬಿ.ಎಸ್.ಜಯರಾಮು, ಎಸ್.ನಾರಾಯಣಗೌಡ, ರಾಮಕೃಷ್ಣೇಗೌಡ, ಎಂ.ರಮೇಶ್, ಎಚ್.ಆರ್.ಧನ್ಯಕುಮಾರ್, ಮೇನಾಗರ ಪ್ರಕಾಶ್, ಚಂದ್ರಶೇಖರಯ್ಯ, ನಾಗಲಿಂಗೇಗೌಡ ಪಾಲ್ಗೊಂಡಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>