‘ರಸ್ತೆ ವಿಸ್ತರಣೆಯಿಂದ ಪರಿಶಿಷ್ಟ ಸಮುದಾಯದ ಸಾಕಷ್ಟು ಜನ ಮನೆ ಕಳೆದುಕೊಳ್ಳಲಿದ್ದಾರೆ. ಅಧಿಕಾರಿಗಳು ಪರಿಹಾರ ಕೊಡದೆ ಮನೆ, ಅಂಗಡಿ ಒಡೆಯುವ ಕೆಲಸ ಮಾಡುತ್ತಿದ್ದಾರೆ, ಅವರನ್ನು ಬೀದಿಪಾಲು ಮಾಡುತ್ತಿದ್ದಾರೆ. ಜನಪ್ರತಿನಿಧಿಗಳು ಪ್ರತಿಷ್ಠೆಗಾಗಿ ತಿಕ್ಕಾಟ ನಡೆಸುತ್ತಿದ್ದು, ಜನ ಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಆಸ್ತಿ ಪಾಸ್ತಿ ಕಳೆದುಕೊಳ್ಳುವವರಿಗೆ ಪರಿಹಾರ ಕೊಡದ ಹೊರತು ಕಾಮಗಾರಿ ಮುಂದುವರೆಸಲು ಅವಕಾಶ ನೀಡುವುದಿಲ್ಲ’ ಎಂದು ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಕುಬೇರಪ್ಪ ಎಚ್ಚರಿಸಿದರು.