<p><strong>ಬೆಳಕವಾಡಿ</strong>: ಗ್ರಾಮದ ಕೊಳ್ಳೇಗಾಲ ಮುಖ್ಯರಸ್ತೆಯ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. </p>.<p>ಗ್ರಾಮದ ಕೊಳ್ಳೇಗಾಲ ಮುಖ್ಯರಸ್ತೆಯ ತುಂಬೆಲ್ಲಾ ನೂರಾರು ಗುಂಡಿಗಳು ಬಿದ್ದಿರುವ ಕುರಿತು ‘ಪ್ರಜಾವಾಣಿ’ ಆ.14ರಂದು ಮುಖ್ಯರಸ್ತೆಯ ಗುಂಡಿ ಮುಚ್ಚಿಸಿ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು.</p>.<p>ಇದಕ್ಕೆ ಸ್ಪಂದಿಸಿರುವ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆ ಗುಂಡಿ ಮುಚ್ಚಿಸಲು ಮುಂದಾಗಿದ್ದಾರೆ. ವರದಿ ಪ್ರಕಟವಾದ 8 ದಿನಗಳ ನಂತರ ದುರಸ್ತಿ ಮಾಡುತ್ತಿದ್ದು, ಬೇಕಾಬಿಟ್ಟಿಯಾಗಿ ಗುಂಡಿಗೆ ಕಲ್ಲು ಹಾಕಿ ಮುಚ್ಚದೆ ಗುಣಮಟ್ಟದ ಡಾಂಬರೀಕರಣದಿಂದ ರಸ್ತೆ ದುರಸ್ತಿ ಮಾಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.</p>.<p>ಹಲವಾರು ತಿಂಗಳುಗಳಿಂದ ರಸ್ತೆ ಗುಂಡಿ ಬಿದ್ದಿದ್ದರಿಂದ ವಾಹನ ಸವಾರರು, ಪಾದಚಾರಿಗಳು ಸಂಬಂಧ ಪಟ್ಟ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದರು.</p>.<p>ಕಳೆದ ವರ್ಷ ಗಗನ ಚುಕ್ಕಿ ಜಲಪಾತೋತ್ಸವದ ಸಂದರ್ಭದಲ್ಲಿ ತರಾತುರಿಯಲ್ಲಿ ಈ ರಸ್ತೆ ಗುಂಡಿಗೆ ಜೆಲ್ಲಿ ಕಲ್ಲು, ಡಸ್ಟ್ ಹಾಕಿ ಮುಚ್ಚಲಾಗಿತ್ತು. ಆದರೆ ಅದು ಕೆಲವೇ ತಿಂಗಳುಗಳಲ್ಲಿ ಕಿತ್ತು ಹೋಗಿ ಗುಂಡಿಗಳಾಗಿ ವಾಹನ ಸವಾರರು ನರಕಯಾತನೆ ಪಡುವಂತಾಗಿತ್ತು. ಈಗ ರಸ್ತೆ ಗುಂಡಿ ಮುಚ್ಚುತ್ತಿರುವುದು ಜನರ ಮೊಗದಲ್ಲಿ ಸಂತಸ ತಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಕವಾಡಿ</strong>: ಗ್ರಾಮದ ಕೊಳ್ಳೇಗಾಲ ಮುಖ್ಯರಸ್ತೆಯ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. </p>.<p>ಗ್ರಾಮದ ಕೊಳ್ಳೇಗಾಲ ಮುಖ್ಯರಸ್ತೆಯ ತುಂಬೆಲ್ಲಾ ನೂರಾರು ಗುಂಡಿಗಳು ಬಿದ್ದಿರುವ ಕುರಿತು ‘ಪ್ರಜಾವಾಣಿ’ ಆ.14ರಂದು ಮುಖ್ಯರಸ್ತೆಯ ಗುಂಡಿ ಮುಚ್ಚಿಸಿ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು.</p>.<p>ಇದಕ್ಕೆ ಸ್ಪಂದಿಸಿರುವ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆ ಗುಂಡಿ ಮುಚ್ಚಿಸಲು ಮುಂದಾಗಿದ್ದಾರೆ. ವರದಿ ಪ್ರಕಟವಾದ 8 ದಿನಗಳ ನಂತರ ದುರಸ್ತಿ ಮಾಡುತ್ತಿದ್ದು, ಬೇಕಾಬಿಟ್ಟಿಯಾಗಿ ಗುಂಡಿಗೆ ಕಲ್ಲು ಹಾಕಿ ಮುಚ್ಚದೆ ಗುಣಮಟ್ಟದ ಡಾಂಬರೀಕರಣದಿಂದ ರಸ್ತೆ ದುರಸ್ತಿ ಮಾಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.</p>.<p>ಹಲವಾರು ತಿಂಗಳುಗಳಿಂದ ರಸ್ತೆ ಗುಂಡಿ ಬಿದ್ದಿದ್ದರಿಂದ ವಾಹನ ಸವಾರರು, ಪಾದಚಾರಿಗಳು ಸಂಬಂಧ ಪಟ್ಟ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದರು.</p>.<p>ಕಳೆದ ವರ್ಷ ಗಗನ ಚುಕ್ಕಿ ಜಲಪಾತೋತ್ಸವದ ಸಂದರ್ಭದಲ್ಲಿ ತರಾತುರಿಯಲ್ಲಿ ಈ ರಸ್ತೆ ಗುಂಡಿಗೆ ಜೆಲ್ಲಿ ಕಲ್ಲು, ಡಸ್ಟ್ ಹಾಕಿ ಮುಚ್ಚಲಾಗಿತ್ತು. ಆದರೆ ಅದು ಕೆಲವೇ ತಿಂಗಳುಗಳಲ್ಲಿ ಕಿತ್ತು ಹೋಗಿ ಗುಂಡಿಗಳಾಗಿ ವಾಹನ ಸವಾರರು ನರಕಯಾತನೆ ಪಡುವಂತಾಗಿತ್ತು. ಈಗ ರಸ್ತೆ ಗುಂಡಿ ಮುಚ್ಚುತ್ತಿರುವುದು ಜನರ ಮೊಗದಲ್ಲಿ ಸಂತಸ ತಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>