ಹೊಂಡ –ಗುಂಡಿಗಳಿಂದ ತುಂಬಿದ್ದ ರಸ್ತೆಗೆ ಮಣ್ಣು ತುಂಬಿಸುವ ಮೂಲಕ ರಸ್ತೆಗೆ ಹೊಸ ರೂಪ ಕೊಟ್ಟಿದ್ದಾರೆ. ಕಾರ್ಖಾನೆಯ ಆಡಳಿತ ಮಂಡಳಿ, ಜನಪ್ರತಿನಿಧಿಗಳು ಹಾಗೂ ತಾಲ್ಲೂಕು ಆಡಳಿತಕ್ಕೆ ಎಷ್ಟೇ ಬಾರಿ ಮನವಿ ಕೊಟ್ಟರೂ ರಸ್ತೆ ದುರಸ್ತಿಗೆ ಮನಸ್ಸು ಮಾಡಲಿಲ್ಲ. ರಸ್ತೆ ಹದಗೆಟ್ಟ ಕಾರಣ ಟ್ರಾಕ್ಟರ್ ಓಡಿಸಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ತಾವೇ ರಸ್ತೆ ದುರಸ್ತಿ ಮಾಡುವ ನಿರ್ಧಾರಕ್ಕೆ
ಬಂದರು.