<p><strong>ಪಾಂಡವಪುರ</strong>: ಮಹಿಳೆಯೊಬ್ಬರು ಜಮೀನಿಗೆ ತೆರಳುವಾಗ ರೋಡ್ ರೋಲರ್ ಹರಿದು ಸ್ಥಳದಲ್ಲೇ ದಾರುಣವಾಗಿ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನ ಸಣಬ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.</p>.<p>ಗ್ರಾಮದ ನಿವಾಸಿ ಗೌರಮ್ಮ ಬಿನ್ ಪಾಪಣ್ಣ (58) ಮೃತಪಟ್ಟವರು. ಘಟನೆ ನಂತರ ಮಂಡ್ಯ ತಾಲ್ಲೂಕಿನ ಪುರದಕೊಪ್ಪಲು ಗ್ರಾಮದ ಚಾಲಕ ಶ್ರೀಧರ್ ಪರಾರಿಯಾಗಿದ್ದಾನೆ. </p>.<p>ನಾರಾಯಣಪುರದಿಂದ ಕಾಮನಾಯಕನಹಳ್ಳಿ– ಸಣಬ ಗ್ರಾಮದ ಮಾರ್ಗವಾಗಿ ರಾಜ್ಯ ಹೆದ್ದಾರಿಯ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುವ ವೇಳೆ ಶುಕ್ರವಾರ ಮಧ್ಯಾಹ್ನ ಸುಮಾರು 12.30ರ ಸಮಯದಲ್ಲಿ ಜಮೀನಿಗೆ ತೆರಳುತ್ತಿದ್ದ ಮಹಿಳೆ ಗೌರಮ್ಮ ಅವರ ಮೇಲೆ ರೋಡ್ ರೋಲರ್ ಹರಿದಿದೆ.</p>.<p>ಈ ವೇಳೆ ಗೌರಮ್ಮ ಅವರ ದೇಹ ಛಿದ್ರಛಿದ್ರವಾಗಿದೆ. ರೋಡ್ ರೋಲರ್ ಮೂಲಕ ರಸ್ತೆ ಕಾಮಗಾರಿ ಮಾಡುವ ವೇಳೆ ಯಾವುದೇ ಮುಂಜಾಗ್ರತಾ ಕ್ರಮ ಅನುಸರಿಸದೇ ನಿರ್ಲಕ್ಷ್ಯ ವಹಿಸಿದ್ದೇ ಈ ಘಟನೆಗೆ ಕಾರಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದರು.</p>.<p>ಚನ್ನರಾಯಪಟ್ಟಣ ತಾಲ್ಲೂಕಿನ ಸಾರಂಗಿ ಗ್ರಾಮಕ್ಕೆ ಗೌರಮ್ಮ ಅವರನ್ನು ಮದುವೆ ಮಾಡಿಕೊಡಲಾಗಿತ್ತು. ಗಂಡ ಸತ್ತ ಬಳಿಕ ಹಲವಾರು ವರ್ಷಗಳಿಂದ ಸೆಣಬ ಗ್ರಾಮದ ತಂಗಿ ಮನೆಯಲ್ಲೇ ಗೌರಮ್ಮ ವಾಸವಿದ್ದರು ಎನ್ನಲಾಗಿದೆ.</p>.<p class="Subhead">₹3 ಲಕ್ಷ ಪರಿಹಾರ: ಘಟನಾ ಸ್ಥಳಕ್ಕೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೇಟಿ ನೀಡಿ ಮೃತರ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರಲ್ಲದೇ, ಗುತ್ತಿಗೆದಾರ ರವಿ ಬೋಜೇಗೌಡ ಅವರಿಂದ ₹3 ಲಕ್ಷ ಪರಿಹಾರ ಕೊಡಿಸಿದರು.</p>.<p>ಈ ಸಂಬಂಧ ಪಾಂಡವಪುರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಧನಪಾಲ್ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ</strong>: ಮಹಿಳೆಯೊಬ್ಬರು ಜಮೀನಿಗೆ ತೆರಳುವಾಗ ರೋಡ್ ರೋಲರ್ ಹರಿದು ಸ್ಥಳದಲ್ಲೇ ದಾರುಣವಾಗಿ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನ ಸಣಬ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.</p>.<p>ಗ್ರಾಮದ ನಿವಾಸಿ ಗೌರಮ್ಮ ಬಿನ್ ಪಾಪಣ್ಣ (58) ಮೃತಪಟ್ಟವರು. ಘಟನೆ ನಂತರ ಮಂಡ್ಯ ತಾಲ್ಲೂಕಿನ ಪುರದಕೊಪ್ಪಲು ಗ್ರಾಮದ ಚಾಲಕ ಶ್ರೀಧರ್ ಪರಾರಿಯಾಗಿದ್ದಾನೆ. </p>.<p>ನಾರಾಯಣಪುರದಿಂದ ಕಾಮನಾಯಕನಹಳ್ಳಿ– ಸಣಬ ಗ್ರಾಮದ ಮಾರ್ಗವಾಗಿ ರಾಜ್ಯ ಹೆದ್ದಾರಿಯ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುವ ವೇಳೆ ಶುಕ್ರವಾರ ಮಧ್ಯಾಹ್ನ ಸುಮಾರು 12.30ರ ಸಮಯದಲ್ಲಿ ಜಮೀನಿಗೆ ತೆರಳುತ್ತಿದ್ದ ಮಹಿಳೆ ಗೌರಮ್ಮ ಅವರ ಮೇಲೆ ರೋಡ್ ರೋಲರ್ ಹರಿದಿದೆ.</p>.<p>ಈ ವೇಳೆ ಗೌರಮ್ಮ ಅವರ ದೇಹ ಛಿದ್ರಛಿದ್ರವಾಗಿದೆ. ರೋಡ್ ರೋಲರ್ ಮೂಲಕ ರಸ್ತೆ ಕಾಮಗಾರಿ ಮಾಡುವ ವೇಳೆ ಯಾವುದೇ ಮುಂಜಾಗ್ರತಾ ಕ್ರಮ ಅನುಸರಿಸದೇ ನಿರ್ಲಕ್ಷ್ಯ ವಹಿಸಿದ್ದೇ ಈ ಘಟನೆಗೆ ಕಾರಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದರು.</p>.<p>ಚನ್ನರಾಯಪಟ್ಟಣ ತಾಲ್ಲೂಕಿನ ಸಾರಂಗಿ ಗ್ರಾಮಕ್ಕೆ ಗೌರಮ್ಮ ಅವರನ್ನು ಮದುವೆ ಮಾಡಿಕೊಡಲಾಗಿತ್ತು. ಗಂಡ ಸತ್ತ ಬಳಿಕ ಹಲವಾರು ವರ್ಷಗಳಿಂದ ಸೆಣಬ ಗ್ರಾಮದ ತಂಗಿ ಮನೆಯಲ್ಲೇ ಗೌರಮ್ಮ ವಾಸವಿದ್ದರು ಎನ್ನಲಾಗಿದೆ.</p>.<p class="Subhead">₹3 ಲಕ್ಷ ಪರಿಹಾರ: ಘಟನಾ ಸ್ಥಳಕ್ಕೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೇಟಿ ನೀಡಿ ಮೃತರ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರಲ್ಲದೇ, ಗುತ್ತಿಗೆದಾರ ರವಿ ಬೋಜೇಗೌಡ ಅವರಿಂದ ₹3 ಲಕ್ಷ ಪರಿಹಾರ ಕೊಡಿಸಿದರು.</p>.<p>ಈ ಸಂಬಂಧ ಪಾಂಡವಪುರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಧನಪಾಲ್ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>