<p><strong>ಮದ್ದೂರು:</strong> ಸಿಗರೇಟ್ ಕೊಡಲಿಲ್ಲ ಎಂಬ ಕ್ಷುಲ್ಲಕ ವಿಷಯಕ್ಕೆ ಎರಡು ಯುವಕರ ಗುಂಪಿನ ನಡುವೆ ನಡೆದ ಮಾರಾಮಾರಿಯಲ್ಲಿ ರೌಡಿ ಶೀಟರ್ ಹಿನ್ನೆಲೆಯುಳ್ಳ ಯುವಕನೊಬ್ಬ ಕೊಲೆಯಾಗಿ, ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.</p><p>ನಗರದ ಸೋಮೇಗೌಡರ ಬೀದಿಯ ನಿವಾಸಿ ಯಶವಂತ್ ಆಲಿಯಾಸ್ ಕಚ್ಚಿ (21) ಕೊಲೆಯಾದ ಯುವಕ. ಗೊರವನಹಳ್ಳಿಯ ದರ್ಶನ್ ಹಾಗೂ ಸಚಿನ್ ಎಂಬುವರು ತೀವ್ರವಾಗಿ ಗಾಯಗೊಂಡು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.</p><h2>ಘಟನೆ ವಿವರ...</h2><p>ಯಶವಂತ್ ಹಾಗೂ ದರ್ಶನ್, ಸಚಿನ್ ನಡುವೆ ಭಾನುವಾರ ಸಂಜೆ ಸಿಗರೇಟ್ ನೀಡಲಿಲ್ಲ ಎಂಬ ವಿಷಯಕ್ಕೆ ಜಗಳವಾಗಿತ್ತು ಎನ್ನಲಾಗಿದೆ. ಆ ಬಳಿಕ ರಾತ್ರಿ ಯಶವಂತ್ ಹಾಗೂ ದರ್ಶನ್, ಸಚಿನ್ ಕಡೆಯ ಒಂದಷ್ಟು ಯುವಕರು ನಗರದ ಹೊಳೆ ಆಂಜನೇಯಸ್ವಾಮಿ ದೇವಸ್ಥಾನದ ರಸ್ತೆಯ ಆರಂಭದಲ್ಲಿರುವ ಸಾಮಿಲ್ ಒಂದರ ಬಳಿ ಜಮಾಯಿಸಿ ಸಿಗರೇಟ್ ಜಗಳವನ್ನು ಕೆದಕಿದ್ದಾರೆ. ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿದೆ.</p><p>ಬಳಿಕ ಸಾಮಿಲ್ ಬಳಿಯಿದ್ದ ಮರದ ಹಲಗೆಗಳಿಂದ ಯುವಕರು ಹೊಡೆದಾಡಿಕೊಂಡಿದ್ದು ಯಶವಂತ್ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ದರ್ಶನ್ ಹಾಗೂ ಸಚಿನ್ ಗಂಭೀರವಾಗಿ ಗಾಯಗೊಂಡರು.</p><p>ಮದ್ದೂರಿನಲ್ಲಿ ನಡೆದ ಗ್ಯಾಂಗ್ ವಾರ್ ಘಟನೆಯಿಂದ ಜನತೆ ಅತಂಕಕ್ಕೆ ಒಳಾಗಿದ್ದು, ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ, ಡಿವೈಎಸ್ಪಿ ಯಶವಂತ್ ಕುಮಾರ್, ಸಿಪಿಐಗಳಾದ ನವೀನ್ ಕುಮಾರ್, ನಾರಾಯಣ್ ಅವರು ಆಗಮಿಸಿ ಸ್ಥಳ ಮಹಜರು ಮಾಡಿದರು.</p><p>ಕೊಲೆಯಾದ ಯುವಕನ ತಾಯಿ ಪ್ರೇಮಾ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಮದ್ದೂರು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ಸಿಗರೇಟ್ ಕೊಡಲಿಲ್ಲ ಎಂಬ ಕ್ಷುಲ್ಲಕ ವಿಷಯಕ್ಕೆ ಎರಡು ಯುವಕರ ಗುಂಪಿನ ನಡುವೆ ನಡೆದ ಮಾರಾಮಾರಿಯಲ್ಲಿ ರೌಡಿ ಶೀಟರ್ ಹಿನ್ನೆಲೆಯುಳ್ಳ ಯುವಕನೊಬ್ಬ ಕೊಲೆಯಾಗಿ, ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.</p><p>ನಗರದ ಸೋಮೇಗೌಡರ ಬೀದಿಯ ನಿವಾಸಿ ಯಶವಂತ್ ಆಲಿಯಾಸ್ ಕಚ್ಚಿ (21) ಕೊಲೆಯಾದ ಯುವಕ. ಗೊರವನಹಳ್ಳಿಯ ದರ್ಶನ್ ಹಾಗೂ ಸಚಿನ್ ಎಂಬುವರು ತೀವ್ರವಾಗಿ ಗಾಯಗೊಂಡು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.</p><h2>ಘಟನೆ ವಿವರ...</h2><p>ಯಶವಂತ್ ಹಾಗೂ ದರ್ಶನ್, ಸಚಿನ್ ನಡುವೆ ಭಾನುವಾರ ಸಂಜೆ ಸಿಗರೇಟ್ ನೀಡಲಿಲ್ಲ ಎಂಬ ವಿಷಯಕ್ಕೆ ಜಗಳವಾಗಿತ್ತು ಎನ್ನಲಾಗಿದೆ. ಆ ಬಳಿಕ ರಾತ್ರಿ ಯಶವಂತ್ ಹಾಗೂ ದರ್ಶನ್, ಸಚಿನ್ ಕಡೆಯ ಒಂದಷ್ಟು ಯುವಕರು ನಗರದ ಹೊಳೆ ಆಂಜನೇಯಸ್ವಾಮಿ ದೇವಸ್ಥಾನದ ರಸ್ತೆಯ ಆರಂಭದಲ್ಲಿರುವ ಸಾಮಿಲ್ ಒಂದರ ಬಳಿ ಜಮಾಯಿಸಿ ಸಿಗರೇಟ್ ಜಗಳವನ್ನು ಕೆದಕಿದ್ದಾರೆ. ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿದೆ.</p><p>ಬಳಿಕ ಸಾಮಿಲ್ ಬಳಿಯಿದ್ದ ಮರದ ಹಲಗೆಗಳಿಂದ ಯುವಕರು ಹೊಡೆದಾಡಿಕೊಂಡಿದ್ದು ಯಶವಂತ್ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ದರ್ಶನ್ ಹಾಗೂ ಸಚಿನ್ ಗಂಭೀರವಾಗಿ ಗಾಯಗೊಂಡರು.</p><p>ಮದ್ದೂರಿನಲ್ಲಿ ನಡೆದ ಗ್ಯಾಂಗ್ ವಾರ್ ಘಟನೆಯಿಂದ ಜನತೆ ಅತಂಕಕ್ಕೆ ಒಳಾಗಿದ್ದು, ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ, ಡಿವೈಎಸ್ಪಿ ಯಶವಂತ್ ಕುಮಾರ್, ಸಿಪಿಐಗಳಾದ ನವೀನ್ ಕುಮಾರ್, ನಾರಾಯಣ್ ಅವರು ಆಗಮಿಸಿ ಸ್ಥಳ ಮಹಜರು ಮಾಡಿದರು.</p><p>ಕೊಲೆಯಾದ ಯುವಕನ ತಾಯಿ ಪ್ರೇಮಾ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಮದ್ದೂರು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>