<p><strong>ಮದ್ದೂರು</strong>: ಪಟ್ಟಣದ ಹೊರವಲಯದ ತಿಮ್ಮದಾಸ್ ಹೋಟೆಲ್ ಬಳಿ ಜು.28 ರಂದು ಸಾಧನಾ ಸಮಾವೇಶವು ನಡೆಯುವ ಹಿನ್ನೆಲೆಯಲ್ಲಿ ಶಾಸಕ ಕೆ.ಎಂ.ಉದಯ್ ಹಾಗೂ ಜಿಲ್ಲಾಧಿಕಾರಿ ಕುಮಾರ ನೇತೃತ್ವದಲ್ಲಿ ಶನಿವಾರ ಸ್ಥಳ ಪರಿಶೀಲನೆ ನಡೆಸಿದರು.</p>.<p>ಶಾಸಕ ಕೆ.ಎಂ.ಉದಯ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಸಾಧನೆ ಕುರಿತು ಸಾಧನಾ ಸಮಾವೇಶ ಹಾಗೂ ತಾಲ್ಲೂಕಿನಲ್ಲಿ ನಡೆದಿರುವ ₹1,300 ಕೋಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಕಾಮಗಾರಿ ಪೂರ್ಣಗೊಂಡಿರುವ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸುವರು ಎಂದರು.</p>.<p>ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಹಲವು ಸಚಿವರು ಸಮಾವೇಶದಲ್ಲಿ ಭಾಗವಹಿಸುವರು. ಈ ಸಮಾವೇಶದ ಬಗ್ಗೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸಮಾವೇಶದ ರೂಪುರೇಷೆ ಸಿದ್ಧಪಡಿಸಲಾಗುವುದು. ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ₹1,300 ಕೋಟಿಗೂ ಅಧಿಕ ಅನುದಾನ ನೀಡಿರುವುದರಿಂದ ಅಭಿನಂದಿಸಲಾಗುವುದು ಎಂದರು.</p>.<p>ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಕೃಷ್ಣಪ್ಪ, ಉಪ ವಿಭಾಗಧಿಕಾರಿ ಶಿವಾನಂದ, ತಹಶೀಲ್ದಾರ್ ಡಾ.ಸ್ಮಿತಾರಾಮು, ಪುರಸಭಾಧ್ಯಕ್ಷೆ ಕೋಕಿಲ ಅರುಣ್, ಮುಖ್ಯಾಧಿಕಾರಿ ಮೀನಾಕ್ಷಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮನ್ಮುಲ್ ನಿರ್ದೇಶಕ ಹರೀಶ್ ಬಾಬು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು</strong>: ಪಟ್ಟಣದ ಹೊರವಲಯದ ತಿಮ್ಮದಾಸ್ ಹೋಟೆಲ್ ಬಳಿ ಜು.28 ರಂದು ಸಾಧನಾ ಸಮಾವೇಶವು ನಡೆಯುವ ಹಿನ್ನೆಲೆಯಲ್ಲಿ ಶಾಸಕ ಕೆ.ಎಂ.ಉದಯ್ ಹಾಗೂ ಜಿಲ್ಲಾಧಿಕಾರಿ ಕುಮಾರ ನೇತೃತ್ವದಲ್ಲಿ ಶನಿವಾರ ಸ್ಥಳ ಪರಿಶೀಲನೆ ನಡೆಸಿದರು.</p>.<p>ಶಾಸಕ ಕೆ.ಎಂ.ಉದಯ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಸಾಧನೆ ಕುರಿತು ಸಾಧನಾ ಸಮಾವೇಶ ಹಾಗೂ ತಾಲ್ಲೂಕಿನಲ್ಲಿ ನಡೆದಿರುವ ₹1,300 ಕೋಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಕಾಮಗಾರಿ ಪೂರ್ಣಗೊಂಡಿರುವ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸುವರು ಎಂದರು.</p>.<p>ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಹಲವು ಸಚಿವರು ಸಮಾವೇಶದಲ್ಲಿ ಭಾಗವಹಿಸುವರು. ಈ ಸಮಾವೇಶದ ಬಗ್ಗೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸಮಾವೇಶದ ರೂಪುರೇಷೆ ಸಿದ್ಧಪಡಿಸಲಾಗುವುದು. ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ₹1,300 ಕೋಟಿಗೂ ಅಧಿಕ ಅನುದಾನ ನೀಡಿರುವುದರಿಂದ ಅಭಿನಂದಿಸಲಾಗುವುದು ಎಂದರು.</p>.<p>ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಕೃಷ್ಣಪ್ಪ, ಉಪ ವಿಭಾಗಧಿಕಾರಿ ಶಿವಾನಂದ, ತಹಶೀಲ್ದಾರ್ ಡಾ.ಸ್ಮಿತಾರಾಮು, ಪುರಸಭಾಧ್ಯಕ್ಷೆ ಕೋಕಿಲ ಅರುಣ್, ಮುಖ್ಯಾಧಿಕಾರಿ ಮೀನಾಕ್ಷಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮನ್ಮುಲ್ ನಿರ್ದೇಶಕ ಹರೀಶ್ ಬಾಬು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>