<p><strong>ಮಂಡ್ಯ:</strong> ‘87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಿರುವುದನ್ನು ವಿರೋಧಿಸಿ ‘ಮನೆಗೊಂದು ಕೋಳಿ ಮತ್ತು ಊರಿಗೊಂದು ಕುರಿ ಸಂಗ್ರಹ’ ಅಭಿಯಾನಕ್ಕೆ ಚಾಲನೆ ನೀಡಿ, ಸಮ್ಮೇಳನದಲ್ಲಿ ಮಾಂಸಪ್ರಿಯರಿಗೆ ಅಡುಗೆ ಮಾಡಿಸುತ್ತೇವೆ’ ಎಂದು ಸಾಹಿತಿ ರಾಜೇಂದ್ರ ಪ್ರಸಾದ್ ಹೇಳಿದರು.</p><p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ಪ್ರಾತಿನಿಧ್ಯವಿರುಬೇಕೆಂಬುದು ನಮ್ಮ ಉದ್ದೇಶ. ತಂಬಾಕು, ಮದ್ಯಪಾನ ಹಾಗೂ ಮಾಂಸಾಹಾರ ನಿಷೇಧಿಸಲಾಗಿದೆ ಎಂಬ ನಿಬಂಧನೆಯನ್ನು ಖಂಡಿಸಿಯೇ ಇದು ಪ್ರಾರಂಭವಾಗಿದ್ದು ಎಂಬುದನ್ನು ಅರಿತುಕೊಳ್ಳಬೇಕು’ ಎಂದರು.</p><p>‘ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ನಿಷೇಧವಿಲ್ಲ. ಆದರೂ ಅದನ್ನು ಕೀಳಾಗಿ ಕಾಣುತ್ತಿರುವುದನ್ನು ಹೋಗಲಾಡಿಸುವ ಹಾಗೂ ಆಹಾರದಲ್ಲಿ ಸಮಾನತೆ ತರುವ ಪ್ರಯತ್ನ ನಮ್ಮದು. ಸಾರ್ವಜನಿಕರ ಹಣವನ್ನು ಸಮ್ಮೇಳನದಲ್ಲಿ ಬಳಸುತ್ತಿದ್ದು, ಒಂದು ಮೊಟ್ಟೆ ಹಾಗೂ ಒಂದು ತುಂಡು ಮಾಂಸ ನೀಡಲು ಸಮಸ್ಯೆ ಏನಿದೆ’ ಎಂದು ಪ್ರಶ್ನಿಸಿದರು. </p><p>ಕರುನಾಡು ಸೇವಕರ ಸಂಘಟನೆಯ ಎಂ.ಬಿ.ನಾಗಣ್ಣಗೌಡ, ‘ಸಮ್ಮೇಳನಕ್ಕೆ ಹಾಕಿರುವ ಬ್ರಾಹ್ಮಣ್ಯದ ಜನಿವಾರವನ್ನು ಬಾಡೂಟದ ಮೂಲಕ ತೆರವುಗೊಳಿಸುವ ಪ್ರಯತ್ನ ಮಾಡುತ್ತೇವೆ’ ಎಂದರು.</p><p>ಸಾಮಾಜಿಕ ಕಾರ್ಯಕರ್ತ ಸಂತೋಷ್ ಮಾತನಾಡಿದರು. ಲಕ್ಷ್ಮಣ್ ಚೀರನಹಳ್ಳಿ, ಸಿ. ಕುಮಾರಿ, ಶಿವಶಂಕರ್, ಧನುಷ್, ಮನು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಿರುವುದನ್ನು ವಿರೋಧಿಸಿ ‘ಮನೆಗೊಂದು ಕೋಳಿ ಮತ್ತು ಊರಿಗೊಂದು ಕುರಿ ಸಂಗ್ರಹ’ ಅಭಿಯಾನಕ್ಕೆ ಚಾಲನೆ ನೀಡಿ, ಸಮ್ಮೇಳನದಲ್ಲಿ ಮಾಂಸಪ್ರಿಯರಿಗೆ ಅಡುಗೆ ಮಾಡಿಸುತ್ತೇವೆ’ ಎಂದು ಸಾಹಿತಿ ರಾಜೇಂದ್ರ ಪ್ರಸಾದ್ ಹೇಳಿದರು.</p><p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ಪ್ರಾತಿನಿಧ್ಯವಿರುಬೇಕೆಂಬುದು ನಮ್ಮ ಉದ್ದೇಶ. ತಂಬಾಕು, ಮದ್ಯಪಾನ ಹಾಗೂ ಮಾಂಸಾಹಾರ ನಿಷೇಧಿಸಲಾಗಿದೆ ಎಂಬ ನಿಬಂಧನೆಯನ್ನು ಖಂಡಿಸಿಯೇ ಇದು ಪ್ರಾರಂಭವಾಗಿದ್ದು ಎಂಬುದನ್ನು ಅರಿತುಕೊಳ್ಳಬೇಕು’ ಎಂದರು.</p><p>‘ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ನಿಷೇಧವಿಲ್ಲ. ಆದರೂ ಅದನ್ನು ಕೀಳಾಗಿ ಕಾಣುತ್ತಿರುವುದನ್ನು ಹೋಗಲಾಡಿಸುವ ಹಾಗೂ ಆಹಾರದಲ್ಲಿ ಸಮಾನತೆ ತರುವ ಪ್ರಯತ್ನ ನಮ್ಮದು. ಸಾರ್ವಜನಿಕರ ಹಣವನ್ನು ಸಮ್ಮೇಳನದಲ್ಲಿ ಬಳಸುತ್ತಿದ್ದು, ಒಂದು ಮೊಟ್ಟೆ ಹಾಗೂ ಒಂದು ತುಂಡು ಮಾಂಸ ನೀಡಲು ಸಮಸ್ಯೆ ಏನಿದೆ’ ಎಂದು ಪ್ರಶ್ನಿಸಿದರು. </p><p>ಕರುನಾಡು ಸೇವಕರ ಸಂಘಟನೆಯ ಎಂ.ಬಿ.ನಾಗಣ್ಣಗೌಡ, ‘ಸಮ್ಮೇಳನಕ್ಕೆ ಹಾಕಿರುವ ಬ್ರಾಹ್ಮಣ್ಯದ ಜನಿವಾರವನ್ನು ಬಾಡೂಟದ ಮೂಲಕ ತೆರವುಗೊಳಿಸುವ ಪ್ರಯತ್ನ ಮಾಡುತ್ತೇವೆ’ ಎಂದರು.</p><p>ಸಾಮಾಜಿಕ ಕಾರ್ಯಕರ್ತ ಸಂತೋಷ್ ಮಾತನಾಡಿದರು. ಲಕ್ಷ್ಮಣ್ ಚೀರನಹಳ್ಳಿ, ಸಿ. ಕುಮಾರಿ, ಶಿವಶಂಕರ್, ಧನುಷ್, ಮನು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>