<p><strong>ಮಂಡ್ಯ:</strong> ‘ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸೋಲುತ್ತೇವೆ ಎಂದು ಕಾಂಗ್ರೆಸ್ನವರಿಗೆ ಮೊದಲೇ ಗೊತ್ತಿತ್ತು. ಅದಕ್ಕಾಗಿಯೇ ಮತಕಳವು ಆರೋಪ ಮಾಡುತ್ತಿದ್ದರು’ ಎಂದು ನಿವೃತ್ತ ಲೋಕಾಯುಕ್ತ ನ್ಯಾ. ಎನ್.ಸಂತೋಷ್ ಹೆಗ್ಡೆ ದೂರಿದರು.</p>.<p>ಶನಿವಾರ ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮತಕಳವು ಅಷ್ಟು ಸುಲಭವಿಲ್ಲ, ವಿಚಾರಣೆ ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಸೋತಿದ್ದಕ್ಕೆ ಕಾರಣ ಕೊಡುತ್ತಾರಷ್ಟೆ; ಬಾಯಿಗೆ ಬಂದಂತೆ ಹೇಳ್ತಾರಷ್ಟೆ’ ಎಂದರು.</p>.<p><strong>ಈ ಸರ್ಕಾರಲ್ಲೂ ಭ್ರಷ್ಟಾಚಾರ:</strong> ‘ಬಿಜೆಪಿ, ಜೆಡಿಎಸ್ ಸರ್ಕಾರದಲ್ಲಿ ಇದ್ದಂತೆ ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ’ ಎಂದು ಆರೋಪಿಸಿದರು.</p>.<p>‘ಹಣ ಕೊಟ್ಟು ಹುದ್ದೆಗೆ ಹೋದವರಿಗೆ ಹಣ ಮಾಡುವುದೇ ಕೆಲಸವಾಗಿದೆ. ಶೇ 40ರಷ್ಟು ಕಮಿಷನ್ ಕೊಟ್ಟರೆ ಉಳಿದ ಹಣದಲ್ಲಿ ರಸ್ತೆ ಗುಂಡಿ ಮುಚ್ಚೋದು ಹೇಗೆ?’ ಎಂದರು. </p>.<p>‘ಲಂಚ ಪಡೆದು ಸಿಕ್ಕಿ ಹಾಕಿಕೊಂಡರೆ ನ್ಯಾಯಾಲಯದಿಂದ ಶಿಕ್ಷೆಯಾಗಲು 30 ವರ್ಷಗಳಾಗುತ್ತವೆ. ಅದಕ್ಕಾಗಿಯೇ ಯಾರೂ ಕಾನೂನಿಗೆ ಹೆದರುತ್ತಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸೋಲುತ್ತೇವೆ ಎಂದು ಕಾಂಗ್ರೆಸ್ನವರಿಗೆ ಮೊದಲೇ ಗೊತ್ತಿತ್ತು. ಅದಕ್ಕಾಗಿಯೇ ಮತಕಳವು ಆರೋಪ ಮಾಡುತ್ತಿದ್ದರು’ ಎಂದು ನಿವೃತ್ತ ಲೋಕಾಯುಕ್ತ ನ್ಯಾ. ಎನ್.ಸಂತೋಷ್ ಹೆಗ್ಡೆ ದೂರಿದರು.</p>.<p>ಶನಿವಾರ ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮತಕಳವು ಅಷ್ಟು ಸುಲಭವಿಲ್ಲ, ವಿಚಾರಣೆ ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಸೋತಿದ್ದಕ್ಕೆ ಕಾರಣ ಕೊಡುತ್ತಾರಷ್ಟೆ; ಬಾಯಿಗೆ ಬಂದಂತೆ ಹೇಳ್ತಾರಷ್ಟೆ’ ಎಂದರು.</p>.<p><strong>ಈ ಸರ್ಕಾರಲ್ಲೂ ಭ್ರಷ್ಟಾಚಾರ:</strong> ‘ಬಿಜೆಪಿ, ಜೆಡಿಎಸ್ ಸರ್ಕಾರದಲ್ಲಿ ಇದ್ದಂತೆ ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ’ ಎಂದು ಆರೋಪಿಸಿದರು.</p>.<p>‘ಹಣ ಕೊಟ್ಟು ಹುದ್ದೆಗೆ ಹೋದವರಿಗೆ ಹಣ ಮಾಡುವುದೇ ಕೆಲಸವಾಗಿದೆ. ಶೇ 40ರಷ್ಟು ಕಮಿಷನ್ ಕೊಟ್ಟರೆ ಉಳಿದ ಹಣದಲ್ಲಿ ರಸ್ತೆ ಗುಂಡಿ ಮುಚ್ಚೋದು ಹೇಗೆ?’ ಎಂದರು. </p>.<p>‘ಲಂಚ ಪಡೆದು ಸಿಕ್ಕಿ ಹಾಕಿಕೊಂಡರೆ ನ್ಯಾಯಾಲಯದಿಂದ ಶಿಕ್ಷೆಯಾಗಲು 30 ವರ್ಷಗಳಾಗುತ್ತವೆ. ಅದಕ್ಕಾಗಿಯೇ ಯಾರೂ ಕಾನೂನಿಗೆ ಹೆದರುತ್ತಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>