<p><strong>ಮಂಡ್ಯ: </strong>ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶುಕ್ರವಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಪರಿಸರ ಪ್ರೇಮಿಗಳು, ವಿವಿಧ ಸಂಘಟನೆಗಳ ಕಾರ್ಯಕರ್ತರು ಗಿಡ ನೆಟ್ಟು ಸಂಭ್ರಮಿಸಿದರು. ಕೆಲವೆಡೆ ಕೊರೊನಾ ವಾರಿಯರ್ಸ್ಗಳನ್ನು ಸನ್ಮಾನಿಸುವ ಮೂಲಕ ಪರಿಸರ ದಿನ ಆಚರಿಸಲಾಯಿತು.</p>.<p>ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ಕೈಗಾರಿಕಾ ಕ್ರಾಂತಿ ಮತ್ತು ಪರಿಸರ ವಿರೋಧಿ ಕೆಲಸಗಳಿಂದ ಸಾಕಷ್ಟು ದುಷ್ಪರಿಣಾಮ ಬೀರುತ್ತಿದೆ. ಪ್ರಕೃತಿ ಶಿಶುವಾಗಿರುವ ಮನುಷ್ಯ ಪ್ರಕೃತಿ ಸಂರಕ್ಷಣೆಗೆ ಸದಾ ಸಂವೇದನಾಶೀಲತೆಯಿಂದ ಕೆಲಸ ಮಾಡಬೇಕು’ ಎಂದು ಹೇಳಿದರು.</p>.<p>‘ಜಿಲ್ಲೆಯಲ್ಲಿ ಒಟ್ಟು 10 ಲಕ್ಷ ಸಸಿ ನೆಡುವ ಯೋಜನೆ ರೂಪಿಸಲಾಗಿದೆ. ಸಾಮಾಜಿಕ ಅರಣ್ಯ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಮತ್ತು ನಗರಸಭೆಯ ಸಹಯೋಗದೊಂದಿಗೆ 1 ಲಕ್ಷ ಸಸಿಗಳನ್ನು ನೆಡಲು ಬಜೆಟ್ ಅನುಮೋದನೆ ಆಗಿದೆ. ಸಸಿ ನೆಡುವ ಕಾರ್ಯವು ಕೇವಲ ಒಂದು ದಿನಕ್ಕೆ ಸೀಮಿತವಾಗದೆ ನಿರಂತರವಾಗಿರಬೇಕು’ ಎಂದು ಹೇಳಿದರು.</p>.<p>ಜಿ.ಪಂ ಸಿಇಒ ಕೆ.ಯಾಲಕ್ಕಿಗೌಡ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಪಿ. ಮಂಚೇಗೌಡ ಇದ್ದರು.</p>.<p><br />ನೆಲದನಿ ಬಳಗ: ನೆಲದನಿ ಬಳಗದ ಸದಸ್ಯರು ನಗರದ ನೆಹರೂ ಯುವ ಕೇಂದ್ರದಲ್ಲಿ ಪರಿಸರ ದಿನಾಚರಣೆ ಆಚರಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಾದ ಅನಂತಪ್ಪ, ವೆಂಕಟೇಶ್, ಬಸವರಾಜು, ಹರ್ಷ, ರಶ್ಮಿ, ನೆಲದನಿ ಬಳಗದ ಅಧ್ಯಕ್ಷ ಮಂಗಲ ಲಂಕೇಶ್, ಚಲನಚಿತ್ರ ನಿರ್ದೇಶಕ ಸೂನಗಹಳ್ಳಿ ರಾಜು ಇದ್ದರು.</p>.<p>ನಗರದ ಮಹಿಳಾ ಸರ್ಕಾರಿ ಕಾಲೇಜಿನ ವನರಂಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸ್ಯೋತ್ಸವ ಕಾರ್ಯಕ್ರಮಕ್ಕೆ ಪ್ರಾಂಶುಪಾಲ ಪ್ರೊ.ಕೆ.ಬಿ.ನಾರಾಯಣ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು, ಸ್ಕೌಟ್ಸ್ ಮತ್ತು ಗೈಡ್ಸ್ ಪದಾಧಿಕಾರಿಗಳು ಇದ್ದರು.</p>.<p>ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ವಿಭಜಕದ ಜಾಗದಲ್ಲಿ ಕಾಯಕಯೋಗಿ ಸಮೂಹ ಸಂಸ್ಥೆಯಿಂದ ಸಸಿ ನೆಡಲಾಯಿತು. ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಚಾಲನೆ ನೀಡಿದರು. ಕಾಯಕಯೋಗಿ ಸಂಸ್ಥೆಯ ಎಂ.ಶಿವಕುಮಾರ್ ಇದ್ದರು.</p>.<p>ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಆವರಣದಲ್ಲಿ ಸಂಸ್ಥೆಯ ಟಿ.ವರಪ್ರಸಾದ್ ಗಿಡ ನೆಟ್ಟು ನೀರೆರೆದರು. ಪದಾಧಿಕಾರಿಗಳಾದ ಎಲ್.ತುಳಸೀಧರ್, ಜಯಶಂಕರ್, ಅಶೋಕ್ ಇದ್ದರು.</p>.<p>ಮಂಡ್ಯ ಜಿಲ್ಲಾ ಗಾಣಿಗರ ಸಮಾಜ ಸೇವಾ ಸಂಘ, ಸ್ಕೂಲ್ ಮಾಸ್ಟರ್ ದಿ. ಮಾಯಿಗಶೆಟ್ಟಿ ಸೇವಾ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅಂಗನವಾಡಿ ವಾರಿಯರ್ಸ್ಗಳನ್ನು ಸನ್ಮಾನಿಸಲಾಯಿತು.</p>.<p>ನಗರಸಭಾ ಸದಸ್ಯೆ ಪವಿತ್ರಾ ಬೋರೇಗೌಡ, ಲಯನ್ಸ್ ಸಂಸ್ಥೆಯ ಬಿ.ಎಂ. ಅಪ್ಪಾಜಪ್ಪ, ಜಿಲ್ಲಾ ಗಾಣಿಗರ ಸಮಾಜ ಸೇವಾ ಸಂಘದ ಅಧ್ಯಕ್ಷ ಎಂ. ಲೋಕೇಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಯೋಗೇಶ್, ಸಮಾಜ ಸೇವಕ ಶೇಖರ್ ಮುಖ್ಯ ಶಿಕ್ಷಕ, ಅಂಗನವಾಡಿ ಲಕ್ಷ್ಮಿ, ಸೌಭಾಗ್ಯ ಇತರರಿದ್ದರು.</p>.<p>ಬಿಜೆಪಿ ಗ್ರಾಮಾಂತರ ಘಟಕದ ವತಿಯಿಂದ ತಾಲ್ಲೂಕಿನ ಕೀಲಾರ ಗ್ರಾಮದಲ್ಲಿ ಕೆ.ವಿ. ಶಂಕರಗೌಡರ ಸ್ಮಾರಕ ರಸ್ತೆ ಪಕ್ಕದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡಲಾಯಿತು.</p>.<p>ಬಿಜೆಪಿ ಮಂಡ್ಯ ಗ್ರಾಮಾಂತರ ಘಟಕದ ಅಧ್ಯಕ್ಷೆ ಸುಜಾತಾ ರಮೇಶ್, ಗ್ರಾಮ ಪಂಚಾಯಿತಿ ಪಿಡಿಒ ರಾಮಕೃಷ್ಣ, ಬಿಜೆಪಿ ಮುಖಂಡರಾದ ಚಂದ್ರಶೇಖರ್, ಯೋಗೇಶ್, ಕೃಷ್ಣ ಅಂಕಪ್ಪ, ಶಿವಕುಮಾರ್ ಆರಾಧ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶುಕ್ರವಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಪರಿಸರ ಪ್ರೇಮಿಗಳು, ವಿವಿಧ ಸಂಘಟನೆಗಳ ಕಾರ್ಯಕರ್ತರು ಗಿಡ ನೆಟ್ಟು ಸಂಭ್ರಮಿಸಿದರು. ಕೆಲವೆಡೆ ಕೊರೊನಾ ವಾರಿಯರ್ಸ್ಗಳನ್ನು ಸನ್ಮಾನಿಸುವ ಮೂಲಕ ಪರಿಸರ ದಿನ ಆಚರಿಸಲಾಯಿತು.</p>.<p>ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ಕೈಗಾರಿಕಾ ಕ್ರಾಂತಿ ಮತ್ತು ಪರಿಸರ ವಿರೋಧಿ ಕೆಲಸಗಳಿಂದ ಸಾಕಷ್ಟು ದುಷ್ಪರಿಣಾಮ ಬೀರುತ್ತಿದೆ. ಪ್ರಕೃತಿ ಶಿಶುವಾಗಿರುವ ಮನುಷ್ಯ ಪ್ರಕೃತಿ ಸಂರಕ್ಷಣೆಗೆ ಸದಾ ಸಂವೇದನಾಶೀಲತೆಯಿಂದ ಕೆಲಸ ಮಾಡಬೇಕು’ ಎಂದು ಹೇಳಿದರು.</p>.<p>‘ಜಿಲ್ಲೆಯಲ್ಲಿ ಒಟ್ಟು 10 ಲಕ್ಷ ಸಸಿ ನೆಡುವ ಯೋಜನೆ ರೂಪಿಸಲಾಗಿದೆ. ಸಾಮಾಜಿಕ ಅರಣ್ಯ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಮತ್ತು ನಗರಸಭೆಯ ಸಹಯೋಗದೊಂದಿಗೆ 1 ಲಕ್ಷ ಸಸಿಗಳನ್ನು ನೆಡಲು ಬಜೆಟ್ ಅನುಮೋದನೆ ಆಗಿದೆ. ಸಸಿ ನೆಡುವ ಕಾರ್ಯವು ಕೇವಲ ಒಂದು ದಿನಕ್ಕೆ ಸೀಮಿತವಾಗದೆ ನಿರಂತರವಾಗಿರಬೇಕು’ ಎಂದು ಹೇಳಿದರು.</p>.<p>ಜಿ.ಪಂ ಸಿಇಒ ಕೆ.ಯಾಲಕ್ಕಿಗೌಡ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಪಿ. ಮಂಚೇಗೌಡ ಇದ್ದರು.</p>.<p><br />ನೆಲದನಿ ಬಳಗ: ನೆಲದನಿ ಬಳಗದ ಸದಸ್ಯರು ನಗರದ ನೆಹರೂ ಯುವ ಕೇಂದ್ರದಲ್ಲಿ ಪರಿಸರ ದಿನಾಚರಣೆ ಆಚರಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಾದ ಅನಂತಪ್ಪ, ವೆಂಕಟೇಶ್, ಬಸವರಾಜು, ಹರ್ಷ, ರಶ್ಮಿ, ನೆಲದನಿ ಬಳಗದ ಅಧ್ಯಕ್ಷ ಮಂಗಲ ಲಂಕೇಶ್, ಚಲನಚಿತ್ರ ನಿರ್ದೇಶಕ ಸೂನಗಹಳ್ಳಿ ರಾಜು ಇದ್ದರು.</p>.<p>ನಗರದ ಮಹಿಳಾ ಸರ್ಕಾರಿ ಕಾಲೇಜಿನ ವನರಂಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸ್ಯೋತ್ಸವ ಕಾರ್ಯಕ್ರಮಕ್ಕೆ ಪ್ರಾಂಶುಪಾಲ ಪ್ರೊ.ಕೆ.ಬಿ.ನಾರಾಯಣ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು, ಸ್ಕೌಟ್ಸ್ ಮತ್ತು ಗೈಡ್ಸ್ ಪದಾಧಿಕಾರಿಗಳು ಇದ್ದರು.</p>.<p>ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ವಿಭಜಕದ ಜಾಗದಲ್ಲಿ ಕಾಯಕಯೋಗಿ ಸಮೂಹ ಸಂಸ್ಥೆಯಿಂದ ಸಸಿ ನೆಡಲಾಯಿತು. ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಚಾಲನೆ ನೀಡಿದರು. ಕಾಯಕಯೋಗಿ ಸಂಸ್ಥೆಯ ಎಂ.ಶಿವಕುಮಾರ್ ಇದ್ದರು.</p>.<p>ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಆವರಣದಲ್ಲಿ ಸಂಸ್ಥೆಯ ಟಿ.ವರಪ್ರಸಾದ್ ಗಿಡ ನೆಟ್ಟು ನೀರೆರೆದರು. ಪದಾಧಿಕಾರಿಗಳಾದ ಎಲ್.ತುಳಸೀಧರ್, ಜಯಶಂಕರ್, ಅಶೋಕ್ ಇದ್ದರು.</p>.<p>ಮಂಡ್ಯ ಜಿಲ್ಲಾ ಗಾಣಿಗರ ಸಮಾಜ ಸೇವಾ ಸಂಘ, ಸ್ಕೂಲ್ ಮಾಸ್ಟರ್ ದಿ. ಮಾಯಿಗಶೆಟ್ಟಿ ಸೇವಾ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅಂಗನವಾಡಿ ವಾರಿಯರ್ಸ್ಗಳನ್ನು ಸನ್ಮಾನಿಸಲಾಯಿತು.</p>.<p>ನಗರಸಭಾ ಸದಸ್ಯೆ ಪವಿತ್ರಾ ಬೋರೇಗೌಡ, ಲಯನ್ಸ್ ಸಂಸ್ಥೆಯ ಬಿ.ಎಂ. ಅಪ್ಪಾಜಪ್ಪ, ಜಿಲ್ಲಾ ಗಾಣಿಗರ ಸಮಾಜ ಸೇವಾ ಸಂಘದ ಅಧ್ಯಕ್ಷ ಎಂ. ಲೋಕೇಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಯೋಗೇಶ್, ಸಮಾಜ ಸೇವಕ ಶೇಖರ್ ಮುಖ್ಯ ಶಿಕ್ಷಕ, ಅಂಗನವಾಡಿ ಲಕ್ಷ್ಮಿ, ಸೌಭಾಗ್ಯ ಇತರರಿದ್ದರು.</p>.<p>ಬಿಜೆಪಿ ಗ್ರಾಮಾಂತರ ಘಟಕದ ವತಿಯಿಂದ ತಾಲ್ಲೂಕಿನ ಕೀಲಾರ ಗ್ರಾಮದಲ್ಲಿ ಕೆ.ವಿ. ಶಂಕರಗೌಡರ ಸ್ಮಾರಕ ರಸ್ತೆ ಪಕ್ಕದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡಲಾಯಿತು.</p>.<p>ಬಿಜೆಪಿ ಮಂಡ್ಯ ಗ್ರಾಮಾಂತರ ಘಟಕದ ಅಧ್ಯಕ್ಷೆ ಸುಜಾತಾ ರಮೇಶ್, ಗ್ರಾಮ ಪಂಚಾಯಿತಿ ಪಿಡಿಒ ರಾಮಕೃಷ್ಣ, ಬಿಜೆಪಿ ಮುಖಂಡರಾದ ಚಂದ್ರಶೇಖರ್, ಯೋಗೇಶ್, ಕೃಷ್ಣ ಅಂಕಪ್ಪ, ಶಿವಕುಮಾರ್ ಆರಾಧ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>