<p><strong>ಮಂಡ್ಯ:</strong> ‘ದೇಶ ಅಭಿವೃದ್ಧಿ ಹೊಂದಲು ಮಾನವ ಸಂಪನ್ಮೂಲ ಬಹಳ ಮುಖ್ಯ. ಅದರಲ್ಲೂ ದೇಶದ ಯುವ ಜನತೆ ದೇಶದ ಶಕ್ತಿ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅಭಿಪ್ರಾಯಪಟ್ಟರು.</p>.<p>ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 150ನೇ ಜನ್ಮದಿನೋತ್ಸವದ ಪ್ರಯುಕ್ತ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ ನಡೆದ ಮಂಡ್ಯ ಜಿಲ್ಲಾ ಮಟ್ಟದ ‘ಏಕತಾ ನಡಿಗೆ’(ಯುನಿಟಿ ಮಾರ್ಚ್) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ದೇಶದ ಯುವ ಜನತೆ ಸನ್ಮಾರ್ಗದಲ್ಲಿ ನಡೆಯದಿದ್ದರೆ ದೇಶದ ಪ್ರಗತಿ ಸಾಧ್ಯವಿಲ್ಲ. ಇಡೀ ದೇಶದ ಶಕ್ತಿಯಾಗಿರುವ ಯುವ ಜನತೆ ಸಕಾರಾತ್ಮಕ ಚಿಂತನೆಯೊಂದಿಗೆ ಉತ್ತಮ ಹಾದಿಯಲ್ಲಿ ಸಾಗಬೇಕು ಮತ್ತು ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹೇಳಿದರು.</p>.<p>ಸ್ವತಂತ್ರ ಪೂರ್ವದಲ್ಲಿ ದೇಶದ ಏಕತೆಗಾಗಿ ಶ್ರಮಿಸಿದ ಗಣ್ಯರಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ಒಬ್ಬರು. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ದೇಶಾಭಿಮಾನ ಮತ್ತು ದೇಶಭಕ್ತಿ ಇಂದಿನ ಯುವ ಪೀಳಿಗೆಗೆ ಸ್ಫೂರ್ತಿದಾಯಕ ಎಂದರು. </p>.<p>ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಉಪನಿರ್ದೇಶಕ ಓಂಪ್ರಕಾಶ್, ಮಂಡ್ಯ ವಿವಿ ಕುಲಸಚಿವರಾದ ಕೃಷ್ಣಕುಮಾರ್, ಪ್ರೊ.ಯೋಗನರಸಿಂಹಾಚಾರಿ, ಪ್ರಾಧ್ಯಾಪಕಿ ಡಾ.ಪ್ರಮೀಳಾ ಎಂ.ಬಿ. ಇತರರು ಪಾಲ್ಗೊಂಡಿದ್ದರು </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ದೇಶ ಅಭಿವೃದ್ಧಿ ಹೊಂದಲು ಮಾನವ ಸಂಪನ್ಮೂಲ ಬಹಳ ಮುಖ್ಯ. ಅದರಲ್ಲೂ ದೇಶದ ಯುವ ಜನತೆ ದೇಶದ ಶಕ್ತಿ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅಭಿಪ್ರಾಯಪಟ್ಟರು.</p>.<p>ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 150ನೇ ಜನ್ಮದಿನೋತ್ಸವದ ಪ್ರಯುಕ್ತ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ ನಡೆದ ಮಂಡ್ಯ ಜಿಲ್ಲಾ ಮಟ್ಟದ ‘ಏಕತಾ ನಡಿಗೆ’(ಯುನಿಟಿ ಮಾರ್ಚ್) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ದೇಶದ ಯುವ ಜನತೆ ಸನ್ಮಾರ್ಗದಲ್ಲಿ ನಡೆಯದಿದ್ದರೆ ದೇಶದ ಪ್ರಗತಿ ಸಾಧ್ಯವಿಲ್ಲ. ಇಡೀ ದೇಶದ ಶಕ್ತಿಯಾಗಿರುವ ಯುವ ಜನತೆ ಸಕಾರಾತ್ಮಕ ಚಿಂತನೆಯೊಂದಿಗೆ ಉತ್ತಮ ಹಾದಿಯಲ್ಲಿ ಸಾಗಬೇಕು ಮತ್ತು ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹೇಳಿದರು.</p>.<p>ಸ್ವತಂತ್ರ ಪೂರ್ವದಲ್ಲಿ ದೇಶದ ಏಕತೆಗಾಗಿ ಶ್ರಮಿಸಿದ ಗಣ್ಯರಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ಒಬ್ಬರು. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ದೇಶಾಭಿಮಾನ ಮತ್ತು ದೇಶಭಕ್ತಿ ಇಂದಿನ ಯುವ ಪೀಳಿಗೆಗೆ ಸ್ಫೂರ್ತಿದಾಯಕ ಎಂದರು. </p>.<p>ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಉಪನಿರ್ದೇಶಕ ಓಂಪ್ರಕಾಶ್, ಮಂಡ್ಯ ವಿವಿ ಕುಲಸಚಿವರಾದ ಕೃಷ್ಣಕುಮಾರ್, ಪ್ರೊ.ಯೋಗನರಸಿಂಹಾಚಾರಿ, ಪ್ರಾಧ್ಯಾಪಕಿ ಡಾ.ಪ್ರಮೀಳಾ ಎಂ.ಬಿ. ಇತರರು ಪಾಲ್ಗೊಂಡಿದ್ದರು </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>