<p><strong>ಕಿಕ್ಕೇರಿ:</strong> ಹೋಬಳಿಯ ಸಾಸಲು ಗ್ರಾಮದಲ್ಲಿ ಸಗಣಿ ಓಕುಳಿ ಹಬ್ಬವನ್ನು ಈಚೆಗೆ ಸಡಗರದಿಂದ ಆಚರಿಸಲಾಯಿತು.</p>.<p>ಜಂಗಮ ಹಾಗೂ ಸೋಮೇಶ್ವರನಿಗೆ ಭಕ್ತಿಯ ವಿಷಯದಲ್ಲಿ ಪಂಥವೇರ್ಪಟ್ಟು ಶಿವನಿಗೆ ಸೋಲಾಗಿ ಜಂಗಮನಿಗೆ ಜಯವಾದ ಸಲುವಾಗಿ ಈ ಹಬ್ಬವನ್ನು ವರ್ಷಕ್ಕೊಮ್ಮೆ ಆಚರಿಸುವುದು ರೂಢಿ. ಶಿವಭಕ್ತರಾದ ಜಂಗಮರಾಗಿ ಸಾಸಲುಕೊಪ್ಪಲುವಿನ ಹಾಲುಮತಸ್ಥ ಯುವಕರು, ಶಿವನ ಪರವಾಗಿ ಸಾಸಲು ಗ್ರಾಮದ ವೀರಶೈವ ಪಂಗಡದ ಯುವಕರು ಸಗಣಿ ಕಾಳಗದಲ್ಲಿ ಭಾಗವಹಿಸಿದ್ದರು.</p>.<p>ಎರಡು ಗುಂಪಿನ ಯುವಕರು ರಾಶಿ ರಾಶಿಯಾಗಿ ಬಿದ್ದಿದ್ದ ಸಗಣಿಯನ್ನು ಉಂಡೆಗಳಾಗಿ ಕಟ್ಟಿಕೊಂಡು ಹೋರಾಟಕ್ಕೆ ಸಜ್ಜಾದರು. ಪರಸ್ಪರ ಸಗಣಿಯ ಉಂಡೆಯನ್ನು ಬಿರುಸಿನಿಂದ ಎದುರಾಳಿಗಳಿಗೆ ಬೀಸಿದರು. ಅಂತಿಮವಾಗಿ ಭಕ್ತ ಜಂಗಮರ ಗುಂಪಾದ ಸಾಸಲುಕೊಪ್ಪಲು ಗುಂಪಿನ ಯುವಕರು ವಿಜೇತರಾದರು.</p>.<p>ಎರಡು ಗುಂಪಿನವರು ಪುಷ್ಕರಿಣಿ ಯಲ್ಲಿ ಮಿಂದು ಸೋಮೇಶ್ವರ, ಶಂಭುಲಿಂಗೇಶ್ವರ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆದು ಪೂಜಿಸಿದರು. ಜಿಲ್ಲೆಯ ವಿವಿಧೆಡೆಯಿಂದ ಹೆಚ್ಚಿನ ಭಕ್ತರು ಆಗಮಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಿಕ್ಕೇರಿ:</strong> ಹೋಬಳಿಯ ಸಾಸಲು ಗ್ರಾಮದಲ್ಲಿ ಸಗಣಿ ಓಕುಳಿ ಹಬ್ಬವನ್ನು ಈಚೆಗೆ ಸಡಗರದಿಂದ ಆಚರಿಸಲಾಯಿತು.</p>.<p>ಜಂಗಮ ಹಾಗೂ ಸೋಮೇಶ್ವರನಿಗೆ ಭಕ್ತಿಯ ವಿಷಯದಲ್ಲಿ ಪಂಥವೇರ್ಪಟ್ಟು ಶಿವನಿಗೆ ಸೋಲಾಗಿ ಜಂಗಮನಿಗೆ ಜಯವಾದ ಸಲುವಾಗಿ ಈ ಹಬ್ಬವನ್ನು ವರ್ಷಕ್ಕೊಮ್ಮೆ ಆಚರಿಸುವುದು ರೂಢಿ. ಶಿವಭಕ್ತರಾದ ಜಂಗಮರಾಗಿ ಸಾಸಲುಕೊಪ್ಪಲುವಿನ ಹಾಲುಮತಸ್ಥ ಯುವಕರು, ಶಿವನ ಪರವಾಗಿ ಸಾಸಲು ಗ್ರಾಮದ ವೀರಶೈವ ಪಂಗಡದ ಯುವಕರು ಸಗಣಿ ಕಾಳಗದಲ್ಲಿ ಭಾಗವಹಿಸಿದ್ದರು.</p>.<p>ಎರಡು ಗುಂಪಿನ ಯುವಕರು ರಾಶಿ ರಾಶಿಯಾಗಿ ಬಿದ್ದಿದ್ದ ಸಗಣಿಯನ್ನು ಉಂಡೆಗಳಾಗಿ ಕಟ್ಟಿಕೊಂಡು ಹೋರಾಟಕ್ಕೆ ಸಜ್ಜಾದರು. ಪರಸ್ಪರ ಸಗಣಿಯ ಉಂಡೆಯನ್ನು ಬಿರುಸಿನಿಂದ ಎದುರಾಳಿಗಳಿಗೆ ಬೀಸಿದರು. ಅಂತಿಮವಾಗಿ ಭಕ್ತ ಜಂಗಮರ ಗುಂಪಾದ ಸಾಸಲುಕೊಪ್ಪಲು ಗುಂಪಿನ ಯುವಕರು ವಿಜೇತರಾದರು.</p>.<p>ಎರಡು ಗುಂಪಿನವರು ಪುಷ್ಕರಿಣಿ ಯಲ್ಲಿ ಮಿಂದು ಸೋಮೇಶ್ವರ, ಶಂಭುಲಿಂಗೇಶ್ವರ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆದು ಪೂಜಿಸಿದರು. ಜಿಲ್ಲೆಯ ವಿವಿಧೆಡೆಯಿಂದ ಹೆಚ್ಚಿನ ಭಕ್ತರು ಆಗಮಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>