ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಂಗಪಟ್ಟಣ: ಹರಕೆ ತೀರಿಸಿದ ಜಯಲಲಿತಾ ಆಪ್ತೆ ಶಶಿಕಲಾ

Last Updated 11 ಮಾರ್ಚ್ 2022, 13:54 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್‌ ಹಾಗೂ ಅವರ ಬೆಂಬಲಿಗರು ಶುಕ್ರವಾರ ಗಂಜಾಂ ನಿಮಿಷಾಂಬಾ ಸೇರಿದಂತೆ ಇತರ ದೇಗುಲಗಳಿಗೆ ಭೇಟಿ ನೀಡಿ ಹರಕೆ ತೀರಿಸಿದರು.

ನಿಮಿಷಾಂಬಾ ದೇವಿಗೆ ಸೀರೆ ಸಮರ್ಪಿಸಿದರು. ದೇವಾಲಯದ ಅರ್ಚಕರು ಶಶಿಕಲಾ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿದರು. ಬಳಿಕ ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯದಲ್ಲಿ ದೇವರು ದರ್ಶನ ಪಡೆದರು. ಅರ್ಚಕರೊಬ್ಬರ ಸಲಹೆಯಂತೆ ತಾಲ್ಲೂಕಿನ ಆರತಿ ಉಕ್ಕಡದ ಅಹಲ್ಯಾದೇವಿ ಮಾರಮ್ಮನ ದೇವಾಲಯಕ್ಕೂ ಶಶಿಕಲಾ ಭೇಟಿ ನೀಡಿದ್ದರು. ಕಂಟಕ ನಿವಾರಣೆಗಾಗಿ ಅಲ್ಲಿ ‘ತಡೆ’ ಒಡೆಸಿದರು.

‘ಶಶಿಕಲಾ ಅವರು ಜೈಲಿನಲ್ಲಿದ್ದಾಗ ಅವರ ಬಿಡುಗಡೆಗೆ ಪ್ರಾರ್ಥಿಸಿ ಅವರ ಬೆಂಬಲಿಗರು ನಿಮಿಷಾಂಬಾ ದೇವಿಗೆ ಹರಕೆ ಹೊತ್ತಿದ್ದರು. ಶಶಿಕಲಾ ಅವರು ಶುಕ್ರವಾರ ಬಂದು ಹರಕೆ ತೀರಿಸಿದ್ದಾರೆ’ ಎಂದು ನಿಮಿಷಾಂಬಾ ದೇವಾಲಯದ ಅರ್ಚಕ ಸೂರ್ಯನಾರಾಯಣಭಟ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT