ನಿಮಿಷಾಂಬಾ ದೇವಿಗೆ ಸೀರೆ ಸಮರ್ಪಿಸಿದರು. ದೇವಾಲಯದ ಅರ್ಚಕರು ಶಶಿಕಲಾ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿದರು. ಬಳಿಕ ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯದಲ್ಲಿ ದೇವರು ದರ್ಶನ ಪಡೆದರು. ಅರ್ಚಕರೊಬ್ಬರ ಸಲಹೆಯಂತೆ ತಾಲ್ಲೂಕಿನ ಆರತಿ ಉಕ್ಕಡದ ಅಹಲ್ಯಾದೇವಿ ಮಾರಮ್ಮನ ದೇವಾಲಯಕ್ಕೂ ಶಶಿಕಲಾ ಭೇಟಿ ನೀಡಿದ್ದರು. ಕಂಟಕ ನಿವಾರಣೆಗಾಗಿ ಅಲ್ಲಿ ‘ತಡೆ’ ಒಡೆಸಿದರು.