<p><strong>ಮಂಡ್ಯ: </strong>ಜಿಲ್ಲೆಯಲ್ಲಿ ಬಹುತೇಕ ಖಾಸಗಿ ಶಾಲೆಗಳು ಒಂದು ವಾರದಿಂದ ತೆರೆದಿದ್ದು, ಸರ್ಕಾರದ ಆದೇಶದ ವಿರುದ್ಧವಾಗಿ ಪಾಠ ಪ್ರವಚನಗಳನ್ನು ನಡೆಸುತ್ತಿವೆ.</p>.<p>ಜೂನ್ 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗುವ ಹಿನ್ನೆಲೆಯಲ್ಲಿ ತರಗತಿಗಳನ್ನು ಆರಂಭಿಸಿ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ.</p>.<p>ಮಂಡ್ಯ ಶಾಸಕ ಎಂ.ಶ್ರೀನಿವಾಸ್ ಒಡೆತನದ ವಿವೇಕ ವಿದ್ಯಾಸಂಸ್ಥೆ, ರೋಟರಿ ಎಜುಕೇಶನ್ ಸೊಸೈಟಿ, ಆದರ್ಶ ಪ್ರೌಢಶಾಲೆ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಲೆಗಳು ತೆರೆದಿವೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ತರಗತಿಗಳು ನಡೆಯುತ್ತಿದೆ. ಕೆಲ ಶಾಲೆಗಳಲ್ಲಿ ಶಿಕ್ಷಕರು ಮಾಸ್ಕ್ ಧರಿಸುತ್ತಿಲ್ಲ.</p>.<p>ಶಾಲೆ ತೆರೆಯಲು ಅನುಮತಿ ಇಲ್ಲದಿದ್ದರೂ ಆಡಳಿತ ಮಂಡಳಿಯವರು ಮಕ್ಕಳನ್ನು ಶಾಲೆಗೆ ಕರೆಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p>ಈ ಬಗ್ಗೆ ಡಿಡಿಪಿಐ ರಘುನಂದನ್ ಪ್ರತಿಕ್ರಿಯಿಸಿ, ‘ಜಿಲ್ಲೆಯಲ್ಲಿ ಯಾರಿಗೂ ಶಾಲೆ ತೆರೆಯಲು ಅನುಮತಿ ನೀಡಿಲ್ಲ. ಯಾವ ಶಾಲೆಯಲ್ಲೂ ಪುನರ್ಮನನ ತರಗತಿಗಳು ನಡೆಯುತ್ತಿಲ್ಲ. ಮಕ್ಕಳು ಪ್ರವೇಶಪತ್ರ ತೆಗೆದುಕೊಳ್ಳಲು ಶಾಲೆಗೆ ಹೋಗುತ್ತಿದ್ದಾರೆ. ಶಾಲೆಗಳನ್ನು ತೆರೆದು ಪಾಠ ಮಾಡಿದರೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ಜಿಲ್ಲೆಯಲ್ಲಿ ಬಹುತೇಕ ಖಾಸಗಿ ಶಾಲೆಗಳು ಒಂದು ವಾರದಿಂದ ತೆರೆದಿದ್ದು, ಸರ್ಕಾರದ ಆದೇಶದ ವಿರುದ್ಧವಾಗಿ ಪಾಠ ಪ್ರವಚನಗಳನ್ನು ನಡೆಸುತ್ತಿವೆ.</p>.<p>ಜೂನ್ 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗುವ ಹಿನ್ನೆಲೆಯಲ್ಲಿ ತರಗತಿಗಳನ್ನು ಆರಂಭಿಸಿ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ.</p>.<p>ಮಂಡ್ಯ ಶಾಸಕ ಎಂ.ಶ್ರೀನಿವಾಸ್ ಒಡೆತನದ ವಿವೇಕ ವಿದ್ಯಾಸಂಸ್ಥೆ, ರೋಟರಿ ಎಜುಕೇಶನ್ ಸೊಸೈಟಿ, ಆದರ್ಶ ಪ್ರೌಢಶಾಲೆ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಲೆಗಳು ತೆರೆದಿವೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ತರಗತಿಗಳು ನಡೆಯುತ್ತಿದೆ. ಕೆಲ ಶಾಲೆಗಳಲ್ಲಿ ಶಿಕ್ಷಕರು ಮಾಸ್ಕ್ ಧರಿಸುತ್ತಿಲ್ಲ.</p>.<p>ಶಾಲೆ ತೆರೆಯಲು ಅನುಮತಿ ಇಲ್ಲದಿದ್ದರೂ ಆಡಳಿತ ಮಂಡಳಿಯವರು ಮಕ್ಕಳನ್ನು ಶಾಲೆಗೆ ಕರೆಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p>ಈ ಬಗ್ಗೆ ಡಿಡಿಪಿಐ ರಘುನಂದನ್ ಪ್ರತಿಕ್ರಿಯಿಸಿ, ‘ಜಿಲ್ಲೆಯಲ್ಲಿ ಯಾರಿಗೂ ಶಾಲೆ ತೆರೆಯಲು ಅನುಮತಿ ನೀಡಿಲ್ಲ. ಯಾವ ಶಾಲೆಯಲ್ಲೂ ಪುನರ್ಮನನ ತರಗತಿಗಳು ನಡೆಯುತ್ತಿಲ್ಲ. ಮಕ್ಕಳು ಪ್ರವೇಶಪತ್ರ ತೆಗೆದುಕೊಳ್ಳಲು ಶಾಲೆಗೆ ಹೋಗುತ್ತಿದ್ದಾರೆ. ಶಾಲೆಗಳನ್ನು ತೆರೆದು ಪಾಠ ಮಾಡಿದರೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>