<p><strong>ಮಂಡ್ಯ</strong>: ‘ನಮ್ಮ ಬ್ರದರ್ಗೆ ನಮ್ಮ ಸರ್ಕಾರದ ಸಾಧನೆ ನೋಡಲು ಆಗುತ್ತಿಲ್ಲ. ಸರ್ಕಾರ ರಚನೆಯಾದ ನಂತರ ನಮ್ಮ ಬ್ರದರ್ ಸಂಕಟ ಪಡುತ್ತಿದ್ದಾರೆ. ಅವರಿಗೆ ಯಾರಾದರೂ ಸಮಾಧಾನ ಹೇಳುವವರು ಇದ್ದರೇ ಹೇಳಿ’ ಎಂದು ಸಚಿವ ಚಲುವರಾಯಸ್ವಾಮಿ ಅವರು ಎಚ್.ಡಿ.ಕುಮಾರಸ್ವಾಮಿ ಬಗ್ಗೆ ವ್ಯಂಗ್ಯವಾಡಿದರು.</p>.<p>‘ಸರ್ಕಾರ ಬೀಳುತ್ತೆ, ತೆಗೆಯುತ್ತೇವೆ ಎನ್ನುವುದು ಒಳ್ಳೆಯದಲ್ಲ. ಇನ್ನು ಮೂರೂವರೆ ವರ್ಷ ಸರ್ಕಾರ ಇದೇ ರೀತಿ ಇರುತ್ತದೆ. ನಮ್ಮನ್ನು ನೋಡಿ ಅವರಿಗೆ ಸಂಕಟ ಬರುತ್ತದೆ. ಇದಕ್ಕೆ ನಮ್ಮ ಬಳಿ ಮೆಡಿಸಿನ್ ಇಲ್ಲ’ ಎಂದರು. </p><p>‘ಬ್ರದರ್ ವಿರುದ್ಧ ನಾವು ಯಾವತ್ತು ಮಾತನಾಡಿಲ್ಲ. ಅವರು ಇನ್ನೊಬ್ಬರನ್ನು ನೋಡಿ ಅಸೂಯೆ ಪಡಬಾರದು. ನಾನು ಎಂದಿಗೂ ಅವರನ್ನ ನನ್ನ ಸ್ನೇಹಿತ, ಬ್ರದರ್ ಅಂತಾನೇ ಹೇಳುತ್ತೇನೆ’ ಎಂದು ಮರ್ಮಿಕವಾಗಿ ನುಡಿದರು.</p><p>‘ರಾಜ್ಯದಲ್ಲಿ ಸಿಎಂ ಆಗಿದ್ದರು. ಈಗ ಕೇಂದ್ರದಲ್ಲಿ ಮಂತ್ರಿ ಆಗಿದ್ದರೂ ಅವರಿಗೆ ಸಮಾಧಾನವಿಲ್ಲ. ಚನ್ನಪಟ್ಟಣ ಉಪಚುನಾವಣೆ ಮಗನ ಪರ ಮತ ಕೇಳಲಿಲ್ಲ. ಬರೀ ರಾಜ್ಯ ಸರ್ಕಾರದ ವಿರುದ್ಧ ಮಾತನಾಡಿದರು. ಈಗಲೂ ಚನ್ನಪಟ್ಟಣದಲ್ಲಿ ಇದನ್ನು ಅವರ ಪಕ್ಷದವರೇ ಆಡಿಕೊಳ್ಳುತ್ತಿದ್ದಾರೆ’ ಎಂದು ಕುಟುಕಿದರು.</p>.<h2>‘ನರೇಂದ್ರಸ್ವಾಮಿಗೆ ಸಚಿವ ಸ್ಥಾನ ನೀಡಲಿ’</h2>.<p>ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರನ್ನ ಸಚಿವರಾಗಿ ಮಾಡಲಿ ಎಂಬುದು ಜಿಲ್ಲೆಯ ಆರು ಶಾಸಕರ ಬಯಕೆ. ಆದರೆ ಸಚಿವ ಸ್ಥಾನ ಬದಲಾವಣೆ ಸಿಎಂ ಹಾಗೂ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಉತ್ತರ ನೀಡಿದರು.</p><p>ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಮುಂದೆ ತೀರ್ಮಾನ ಮಾಡುವವರೆಗೂ ಮುಂದುವರೆಯಿರಿ ಎಂದು ಹೈಕಮಾಂಡ್ ಹೇಳಿದ್ದು, ಮುಂದೆ ಎಐಸಿಸಿ ಏನು ತೀರ್ಮಾನ ಮಾಡುತ್ತದೆ ಎಂದು ನೋಡಬೇಕಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ನಮ್ಮ ಬ್ರದರ್ಗೆ ನಮ್ಮ ಸರ್ಕಾರದ ಸಾಧನೆ ನೋಡಲು ಆಗುತ್ತಿಲ್ಲ. ಸರ್ಕಾರ ರಚನೆಯಾದ ನಂತರ ನಮ್ಮ ಬ್ರದರ್ ಸಂಕಟ ಪಡುತ್ತಿದ್ದಾರೆ. ಅವರಿಗೆ ಯಾರಾದರೂ ಸಮಾಧಾನ ಹೇಳುವವರು ಇದ್ದರೇ ಹೇಳಿ’ ಎಂದು ಸಚಿವ ಚಲುವರಾಯಸ್ವಾಮಿ ಅವರು ಎಚ್.ಡಿ.ಕುಮಾರಸ್ವಾಮಿ ಬಗ್ಗೆ ವ್ಯಂಗ್ಯವಾಡಿದರು.</p>.<p>‘ಸರ್ಕಾರ ಬೀಳುತ್ತೆ, ತೆಗೆಯುತ್ತೇವೆ ಎನ್ನುವುದು ಒಳ್ಳೆಯದಲ್ಲ. ಇನ್ನು ಮೂರೂವರೆ ವರ್ಷ ಸರ್ಕಾರ ಇದೇ ರೀತಿ ಇರುತ್ತದೆ. ನಮ್ಮನ್ನು ನೋಡಿ ಅವರಿಗೆ ಸಂಕಟ ಬರುತ್ತದೆ. ಇದಕ್ಕೆ ನಮ್ಮ ಬಳಿ ಮೆಡಿಸಿನ್ ಇಲ್ಲ’ ಎಂದರು. </p><p>‘ಬ್ರದರ್ ವಿರುದ್ಧ ನಾವು ಯಾವತ್ತು ಮಾತನಾಡಿಲ್ಲ. ಅವರು ಇನ್ನೊಬ್ಬರನ್ನು ನೋಡಿ ಅಸೂಯೆ ಪಡಬಾರದು. ನಾನು ಎಂದಿಗೂ ಅವರನ್ನ ನನ್ನ ಸ್ನೇಹಿತ, ಬ್ರದರ್ ಅಂತಾನೇ ಹೇಳುತ್ತೇನೆ’ ಎಂದು ಮರ್ಮಿಕವಾಗಿ ನುಡಿದರು.</p><p>‘ರಾಜ್ಯದಲ್ಲಿ ಸಿಎಂ ಆಗಿದ್ದರು. ಈಗ ಕೇಂದ್ರದಲ್ಲಿ ಮಂತ್ರಿ ಆಗಿದ್ದರೂ ಅವರಿಗೆ ಸಮಾಧಾನವಿಲ್ಲ. ಚನ್ನಪಟ್ಟಣ ಉಪಚುನಾವಣೆ ಮಗನ ಪರ ಮತ ಕೇಳಲಿಲ್ಲ. ಬರೀ ರಾಜ್ಯ ಸರ್ಕಾರದ ವಿರುದ್ಧ ಮಾತನಾಡಿದರು. ಈಗಲೂ ಚನ್ನಪಟ್ಟಣದಲ್ಲಿ ಇದನ್ನು ಅವರ ಪಕ್ಷದವರೇ ಆಡಿಕೊಳ್ಳುತ್ತಿದ್ದಾರೆ’ ಎಂದು ಕುಟುಕಿದರು.</p>.<h2>‘ನರೇಂದ್ರಸ್ವಾಮಿಗೆ ಸಚಿವ ಸ್ಥಾನ ನೀಡಲಿ’</h2>.<p>ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರನ್ನ ಸಚಿವರಾಗಿ ಮಾಡಲಿ ಎಂಬುದು ಜಿಲ್ಲೆಯ ಆರು ಶಾಸಕರ ಬಯಕೆ. ಆದರೆ ಸಚಿವ ಸ್ಥಾನ ಬದಲಾವಣೆ ಸಿಎಂ ಹಾಗೂ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಉತ್ತರ ನೀಡಿದರು.</p><p>ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಮುಂದೆ ತೀರ್ಮಾನ ಮಾಡುವವರೆಗೂ ಮುಂದುವರೆಯಿರಿ ಎಂದು ಹೈಕಮಾಂಡ್ ಹೇಳಿದ್ದು, ಮುಂದೆ ಎಐಸಿಸಿ ಏನು ತೀರ್ಮಾನ ಮಾಡುತ್ತದೆ ಎಂದು ನೋಡಬೇಕಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>