<p><strong>ಮದ್ದೂರು</strong>: ತಾಲ್ಲೂಕು ಕೆಸ್ತೂರು ಬಳಿಯ ಅಡಗನಹಳ್ಳಿ ಗ್ರಾಮದ ವಿವಿಧ ದೇವಾಲಯಗಳಲ್ಲಿ ಗುರುವಾರ ರಾತ್ರಿ ಸರಣಿಗಳ್ಳತನವಾಗಿದೆ.</p>.<p>ಗ್ರಾಮದ ಮಹದೇವಮ್ಮ ಹಾಗೂ ಗುಡ್ಡೆ ನಿಂಗೇಶ್ವರ ದೇವಸ್ಥಾನಗಳಲ್ಲಿ ಹುಂಡಿಯನ್ನು ಕದ್ದು ಸಮೀಪದ ನಾಲೆಗೆ ಹುಂಡಿಯನ್ನು ಎಸೆದು ಕಳ್ಳರು ಪರಾರಿಯಾಗಿದ್ದಾರೆ. ಅಷ್ಟೇ ಅಲ್ಲದೇ ಗುಂಜಮ್ಮ ದೇಗುಲದಲ್ಲಿ ಚಿನ್ನದ ತಾಳಿ ಹಾಗೂ ಬೆಳ್ಳಿ ದೇವರ ಪದಾರ್ಥಗಳನ್ನ ಕದ್ದು ಪರಾರಿ ಆಗಿದ್ದಾರೆ.</p>.<p>ಕಳೆದ ಮೂರು ದಿನಗಳಿಂದ ಗ್ರಾಮದಲ್ಲಿ ಮಂಚಮ್ಮ ದೇವಿ ನೂತನ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಇದ್ದ ಕಾರಣ ಹುಂಡಿಯಲ್ಲಿ ಹೆಚ್ಚಿನ ಹಣ ಸಂಗ್ರಹವಾಗಿತ್ತು, ಇದನ್ನು ಗಮನಿಸಿ ಕಳ್ಳರು ಕಳ್ಳತನ ಮಾಡಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ಸ್ಥಳಕ್ಕೆ ಕೆಸ್ತೂರು ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು</strong>: ತಾಲ್ಲೂಕು ಕೆಸ್ತೂರು ಬಳಿಯ ಅಡಗನಹಳ್ಳಿ ಗ್ರಾಮದ ವಿವಿಧ ದೇವಾಲಯಗಳಲ್ಲಿ ಗುರುವಾರ ರಾತ್ರಿ ಸರಣಿಗಳ್ಳತನವಾಗಿದೆ.</p>.<p>ಗ್ರಾಮದ ಮಹದೇವಮ್ಮ ಹಾಗೂ ಗುಡ್ಡೆ ನಿಂಗೇಶ್ವರ ದೇವಸ್ಥಾನಗಳಲ್ಲಿ ಹುಂಡಿಯನ್ನು ಕದ್ದು ಸಮೀಪದ ನಾಲೆಗೆ ಹುಂಡಿಯನ್ನು ಎಸೆದು ಕಳ್ಳರು ಪರಾರಿಯಾಗಿದ್ದಾರೆ. ಅಷ್ಟೇ ಅಲ್ಲದೇ ಗುಂಜಮ್ಮ ದೇಗುಲದಲ್ಲಿ ಚಿನ್ನದ ತಾಳಿ ಹಾಗೂ ಬೆಳ್ಳಿ ದೇವರ ಪದಾರ್ಥಗಳನ್ನ ಕದ್ದು ಪರಾರಿ ಆಗಿದ್ದಾರೆ.</p>.<p>ಕಳೆದ ಮೂರು ದಿನಗಳಿಂದ ಗ್ರಾಮದಲ್ಲಿ ಮಂಚಮ್ಮ ದೇವಿ ನೂತನ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಇದ್ದ ಕಾರಣ ಹುಂಡಿಯಲ್ಲಿ ಹೆಚ್ಚಿನ ಹಣ ಸಂಗ್ರಹವಾಗಿತ್ತು, ಇದನ್ನು ಗಮನಿಸಿ ಕಳ್ಳರು ಕಳ್ಳತನ ಮಾಡಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ಸ್ಥಳಕ್ಕೆ ಕೆಸ್ತೂರು ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>