<p><strong>ಪಾಂಡವಪುರ:</strong> ಪಟ್ಟಣದಲ್ಲಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಒಳಚರಂಡಿಯ ಮಲತ್ಯಾಜ್ಯ ನೀರು ಸಂಸ್ಕರಣಾ ಘಟಕ (ಎಸ್ಎಸ್ಟಿಪಿ) ನಿರ್ಮಾಣ ಕಾಮಗಾರಿಗೆ ಪಟ್ಟಣದ ಮೈಸೂರು ರಸ್ತೆಯ ರಿಲಾಯನ್ಸ್ ಪೆಟ್ರೋಲ್ ಬಂಕ್ ಹಿಂಭಾಗದ ಜಮೀನಿನಲ್ಲಿ ಸೋಮವಾರ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿ ಪೂಜೆ ನೆರವೇರಿಸಿದರು.</p>.<p>ಬಳಿಕ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಪಟ್ಟಣದ ನೈರ್ಮಲ್ಯ ಮತ್ತು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಈ ಯೋಜನೆ ಅತ್ಯಂತ ಮಹತ್ವದ್ದಾಗಿದ್ದು, ಈ ಹಿಂದೆ ಶಾಸಕರಾಗಿದ್ದ ಕೆ.ಎಸ್.ಪುಟ್ಟಣ್ಣಯ್ಯ ಮತ್ತು ಸಿ.ಎಸ್.ಪುಟ್ಟರಾಜು ಅವರ ಪ್ರಯತ್ನದಿಂದಾಗಿ ಈಗ ಕಾರ್ಯರೂಪಕ್ಕೆ ಬರುತ್ತಿದೆ. ₹20 ಕೋಟಿ ವೆಚ್ಚದಲ್ಲಿ ಈಗ ಎಸ್ಎಸ್ಟಿಪಿ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ. ಇಷ್ಟರಲ್ಲಿಯೇ ₹2.5ಕೋಟಿ ವೆಚ್ಚದಲ್ಲಿ ಮಲಿನ ನೀರು ಸಂಸ್ಕರಣಾ ಘಟಕ ಎಫ್ಎಸ್ಟಿಪಿ ನಿರ್ಮಾಣಕ್ಕೂ ಚಾಲನೆ ನೀಡಲಾಗುವುದು. ಅಲ್ಲದೆ ಘಟಕಗಳ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡಿರುವ ರೈತ ಕುಟುಂಬದ ಮಕ್ಕಳಿಗೆ ಉದ್ಯೋಗ ದೊರಕಿಸಿಕೊಡುವುದಾಗಿ ಭರವಸೆ ನೀಡಿದರು.</p>.<p>ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್ ಮಾತನಾಡಿ, ಎಫ್ಎಸ್ಟಿಪಿ ನಿರ್ಮಾಣ ಕಾರ್ಯವು ಮೂರು ತಿಂಗಳ ಒಳಗಾಗಿ ಮುಗಿಯಲಿದೆ. ಜತೆಗೆ ಎಸ್ಟಿಪಿ ನಿರ್ಮಾಣ ಕಾರ್ಯವನ್ನು ಶೀಘ್ರದಲ್ಲಿಯೇ ಪ್ರಾರಂಭಿಸಿ ಒಂದು ವರ್ಷದ ಒಳಗಾಗಿ ಪೂರ್ಣಗೊಳಿಸಲಾಗುವುದು. ಈ ಎರಡು ಘಟಕಗಳಿಂದ ಪಟ್ಟಣದಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.</p>.<p>ತಹಶೀಲ್ದಾರ್ ಬಸವರಡ್ಡೆಪ್ಪ ರೋಣದ, ಪುರಸಭೆ ಎಂಜಿನಿಯರ್ ಚೌಡಪ್ಪ, ಗುತ್ತಿಗೆದಾರ ಗೌರೀಶ್, ಪುರಸಭೆ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು ಹಾಗೂ ರೈತ ಸಂಘದ ಮುಖಂಡರು ಸಮಾರಂಭದಲ್ಲಿ ಇದ್ದರು.</p>.<p><strong>ರೈತರಿಗೆ ವೈಜ್ಞಾನಿಕ ಪರಿಹಾರ</strong><br>ಎಫ್ಎಸ್ಟಿಪಿ ಮತ್ತು ಎಸ್ಟಿಪಿ ಘಟಕ ನಿರ್ಮಾಣಕ್ಕೆ ಸರ್ಕಾರವು ಗುಂಟೆಗೆ ಕೇವಲ ₹7 ಸಾವಿರ ಪರಿಹಾರ ನೀಡಿ 13 ಮಂದಿ ರೈತರ 5.20 ಎಕರೆ ನೀರಾವರಿ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸಿತ್ತು. ಈ ವೇಳೆ ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯ ಪ್ರತಿರೋಧ ವ್ಯಕ್ತಪಡಿಸಿ, ರೈತರ ಜಮೀನಿಗೆ ವೈಜ್ಞಾನಿಕ ಬೆಲೆ ನೀಡಲು ಪ್ರತಿಭಟನೆ ನಡೆಸಿದ್ದರು. ಜತೆಗೆ ರೈತರಿಂದ ಲೋಕ ಅದಾಲತ್ಗೆ ಅರ್ಜಿ ಸಲ್ಲಸಿದ್ದರು. ಇದರ ಫಲವಾಗಿ ಜಮೀನು ಕಳೆದುಕೊಂಡ ರೈತರಿಗೆ ಗುಂಟೆಗೆ ₹10ಲಕ್ಷ ಪರಿಹಾರ ದೊರೆತಿದೆ ಎಂದು ತಿಳಿಸಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಜಮೀನು ಕಳೆದುಕೊಂಡ ರೈತರನ್ನು ಸನ್ಮಾನಿಸಿದರು.</p>.<p><strong>ಪ್ರತಿರೋಧ</strong><br>ಪಟ್ಟಣದಲ್ಲಿ ಯುಜಿಡಿ ಯೋಜನೆಯ 20 ವರ್ಷಗಳ ಬಳಿಕ ಎಫ್ಎಸ್ಟಿಪಿ ಮತ್ತು ಎಸ್ಟಿಪಿ ಘಟಕಗಳು ನಿರ್ಮಾಣಕ್ಕೆ ಚಾಲನೆ ದೊರೆತಿದೆ. ಇದಕ್ಕೆ ರೈತರ ಬೇಡಿಕೆಗಳೇ ಕಾರಣ ಎಂದು ಪುರಸಭೆ ಮಾಜಿ ಸದಸ್ಯ ಎಂ.ಗಿರೀಶ್ ಸಭೆಯಲ್ಲಿ ಹೇಳಿದಾಗ, ರೈತ ಸಂಘದ ಕಾರ್ಯಕರ್ತರು ಆಕ್ಷೇಪಣೆ ವ್ಯಕ್ತಪಡಿಸಿದರು.<br> ಬಳಿಕ ಮಾತನಾಡಿದ ಪುರಸಭೆ ಮಾಜಿ ಅಧ್ಯಕ್ಷ ಹಾರೋಹಳ್ಳಿ ಸತೀಶ್ ಕುಮಾರ್, ಜೀವನಕ್ಕೆ ಆಧಾರವಾಗಿದ್ದ ಜಮೀನನ್ನು ಕಳೆದುಕೊಂಡಿರುವ ರೈತರ ಹಿತಕ್ಕಾಗಿ ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯ ಹೋರಾಟ ನಡೆಸಿದ್ದರು. ಈ ವೇಳೆ ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಇದನ್ನು ವಿರೋಧಿಸಿದ್ದರು. ಇದನ್ನು ಅರಿಯದ ಎಂ.ಗಿರೀಶ್ ಅವರು ಸಿ.ಎಸ್.ಪುಟ್ಟರಾಜು ಪರ ವಕಾಲತ್ತು ವಹಿಸುತ್ತಿರುವುದು ಸರಿಯಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ:</strong> ಪಟ್ಟಣದಲ್ಲಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಒಳಚರಂಡಿಯ ಮಲತ್ಯಾಜ್ಯ ನೀರು ಸಂಸ್ಕರಣಾ ಘಟಕ (ಎಸ್ಎಸ್ಟಿಪಿ) ನಿರ್ಮಾಣ ಕಾಮಗಾರಿಗೆ ಪಟ್ಟಣದ ಮೈಸೂರು ರಸ್ತೆಯ ರಿಲಾಯನ್ಸ್ ಪೆಟ್ರೋಲ್ ಬಂಕ್ ಹಿಂಭಾಗದ ಜಮೀನಿನಲ್ಲಿ ಸೋಮವಾರ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿ ಪೂಜೆ ನೆರವೇರಿಸಿದರು.</p>.<p>ಬಳಿಕ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಪಟ್ಟಣದ ನೈರ್ಮಲ್ಯ ಮತ್ತು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಈ ಯೋಜನೆ ಅತ್ಯಂತ ಮಹತ್ವದ್ದಾಗಿದ್ದು, ಈ ಹಿಂದೆ ಶಾಸಕರಾಗಿದ್ದ ಕೆ.ಎಸ್.ಪುಟ್ಟಣ್ಣಯ್ಯ ಮತ್ತು ಸಿ.ಎಸ್.ಪುಟ್ಟರಾಜು ಅವರ ಪ್ರಯತ್ನದಿಂದಾಗಿ ಈಗ ಕಾರ್ಯರೂಪಕ್ಕೆ ಬರುತ್ತಿದೆ. ₹20 ಕೋಟಿ ವೆಚ್ಚದಲ್ಲಿ ಈಗ ಎಸ್ಎಸ್ಟಿಪಿ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ. ಇಷ್ಟರಲ್ಲಿಯೇ ₹2.5ಕೋಟಿ ವೆಚ್ಚದಲ್ಲಿ ಮಲಿನ ನೀರು ಸಂಸ್ಕರಣಾ ಘಟಕ ಎಫ್ಎಸ್ಟಿಪಿ ನಿರ್ಮಾಣಕ್ಕೂ ಚಾಲನೆ ನೀಡಲಾಗುವುದು. ಅಲ್ಲದೆ ಘಟಕಗಳ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡಿರುವ ರೈತ ಕುಟುಂಬದ ಮಕ್ಕಳಿಗೆ ಉದ್ಯೋಗ ದೊರಕಿಸಿಕೊಡುವುದಾಗಿ ಭರವಸೆ ನೀಡಿದರು.</p>.<p>ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್ ಮಾತನಾಡಿ, ಎಫ್ಎಸ್ಟಿಪಿ ನಿರ್ಮಾಣ ಕಾರ್ಯವು ಮೂರು ತಿಂಗಳ ಒಳಗಾಗಿ ಮುಗಿಯಲಿದೆ. ಜತೆಗೆ ಎಸ್ಟಿಪಿ ನಿರ್ಮಾಣ ಕಾರ್ಯವನ್ನು ಶೀಘ್ರದಲ್ಲಿಯೇ ಪ್ರಾರಂಭಿಸಿ ಒಂದು ವರ್ಷದ ಒಳಗಾಗಿ ಪೂರ್ಣಗೊಳಿಸಲಾಗುವುದು. ಈ ಎರಡು ಘಟಕಗಳಿಂದ ಪಟ್ಟಣದಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.</p>.<p>ತಹಶೀಲ್ದಾರ್ ಬಸವರಡ್ಡೆಪ್ಪ ರೋಣದ, ಪುರಸಭೆ ಎಂಜಿನಿಯರ್ ಚೌಡಪ್ಪ, ಗುತ್ತಿಗೆದಾರ ಗೌರೀಶ್, ಪುರಸಭೆ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು ಹಾಗೂ ರೈತ ಸಂಘದ ಮುಖಂಡರು ಸಮಾರಂಭದಲ್ಲಿ ಇದ್ದರು.</p>.<p><strong>ರೈತರಿಗೆ ವೈಜ್ಞಾನಿಕ ಪರಿಹಾರ</strong><br>ಎಫ್ಎಸ್ಟಿಪಿ ಮತ್ತು ಎಸ್ಟಿಪಿ ಘಟಕ ನಿರ್ಮಾಣಕ್ಕೆ ಸರ್ಕಾರವು ಗುಂಟೆಗೆ ಕೇವಲ ₹7 ಸಾವಿರ ಪರಿಹಾರ ನೀಡಿ 13 ಮಂದಿ ರೈತರ 5.20 ಎಕರೆ ನೀರಾವರಿ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸಿತ್ತು. ಈ ವೇಳೆ ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯ ಪ್ರತಿರೋಧ ವ್ಯಕ್ತಪಡಿಸಿ, ರೈತರ ಜಮೀನಿಗೆ ವೈಜ್ಞಾನಿಕ ಬೆಲೆ ನೀಡಲು ಪ್ರತಿಭಟನೆ ನಡೆಸಿದ್ದರು. ಜತೆಗೆ ರೈತರಿಂದ ಲೋಕ ಅದಾಲತ್ಗೆ ಅರ್ಜಿ ಸಲ್ಲಸಿದ್ದರು. ಇದರ ಫಲವಾಗಿ ಜಮೀನು ಕಳೆದುಕೊಂಡ ರೈತರಿಗೆ ಗುಂಟೆಗೆ ₹10ಲಕ್ಷ ಪರಿಹಾರ ದೊರೆತಿದೆ ಎಂದು ತಿಳಿಸಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಜಮೀನು ಕಳೆದುಕೊಂಡ ರೈತರನ್ನು ಸನ್ಮಾನಿಸಿದರು.</p>.<p><strong>ಪ್ರತಿರೋಧ</strong><br>ಪಟ್ಟಣದಲ್ಲಿ ಯುಜಿಡಿ ಯೋಜನೆಯ 20 ವರ್ಷಗಳ ಬಳಿಕ ಎಫ್ಎಸ್ಟಿಪಿ ಮತ್ತು ಎಸ್ಟಿಪಿ ಘಟಕಗಳು ನಿರ್ಮಾಣಕ್ಕೆ ಚಾಲನೆ ದೊರೆತಿದೆ. ಇದಕ್ಕೆ ರೈತರ ಬೇಡಿಕೆಗಳೇ ಕಾರಣ ಎಂದು ಪುರಸಭೆ ಮಾಜಿ ಸದಸ್ಯ ಎಂ.ಗಿರೀಶ್ ಸಭೆಯಲ್ಲಿ ಹೇಳಿದಾಗ, ರೈತ ಸಂಘದ ಕಾರ್ಯಕರ್ತರು ಆಕ್ಷೇಪಣೆ ವ್ಯಕ್ತಪಡಿಸಿದರು.<br> ಬಳಿಕ ಮಾತನಾಡಿದ ಪುರಸಭೆ ಮಾಜಿ ಅಧ್ಯಕ್ಷ ಹಾರೋಹಳ್ಳಿ ಸತೀಶ್ ಕುಮಾರ್, ಜೀವನಕ್ಕೆ ಆಧಾರವಾಗಿದ್ದ ಜಮೀನನ್ನು ಕಳೆದುಕೊಂಡಿರುವ ರೈತರ ಹಿತಕ್ಕಾಗಿ ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯ ಹೋರಾಟ ನಡೆಸಿದ್ದರು. ಈ ವೇಳೆ ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಇದನ್ನು ವಿರೋಧಿಸಿದ್ದರು. ಇದನ್ನು ಅರಿಯದ ಎಂ.ಗಿರೀಶ್ ಅವರು ಸಿ.ಎಸ್.ಪುಟ್ಟರಾಜು ಪರ ವಕಾಲತ್ತು ವಹಿಸುತ್ತಿರುವುದು ಸರಿಯಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>