<p><strong>ಮಂಡ್ಯ:</strong> ‘ಜಗತ್ತಿನಲ್ಲಿ ಬೇಕಾದಷ್ಟು ಕ್ರಾಂತಿಗಳಾಗಿವೆ. ಆದರೆ, ನಮ್ಮ ದೇಶದಲ್ಲಿ ಆಗಿರುವ ಕ್ರಾಂತಿ ಎಂದರೆ ಇವತ್ತಿಗೂ ನಮ್ಮನ್ನ ಗುಲಾಮಗಿರಿಯಲ್ಲಿ ಬಾಳಿಸುತ್ತಿರುವಂತಹ ಚಾತುರ್ವಣ್ಯ ವ್ಯವಸ್ಥೆಯ ಮತ ಮೌಢ್ಯ’ ಎಂದು ಸಾಂಸ್ಕೃತಿಕ ಚಿಂತಕ ಪ್ರೊ.ಎಸ್.ಜಿ.ಸಿದ್ದರಾಮಯ್ಯ ವಿಷಾದಿಸಿದರು.</p>.<p>ನಗರದ ಸ್ವಾಮಿ ವಿವೇಕಾನಂದ ರಂಗಮಂದಿರದಲ್ಲಿ ಭಾನುವಾರ ನಡೆದ ಕುವೆಂಪು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ವಿಚಾರ ಕ್ರಾಂತಿಗೆ ಆಹ್ವಾನದ ಹಿನ್ನೆಲೆಯಲ್ಲಿ ‘ನಿರಂಕುಶ ಮತಿತ್ವ’ ಕುರಿತು ಅವರು ಮಾತನಾಡಿದರು.</p>.<p>‘ಕುವೆಂಪು ಅವರ ಎಲ್ಲಾ ವಿಚಾರಗಳು ಹಾಗೂ ವೈಚಾರಿಕ ಲೇಖನಗಳನ್ನು ನೋಡಿಕೊಂಡು ಬಂದಾಗ, ನೇರವಾಗಿ ನಿರ್ದೇಶಿಸಿದಂತೆ ಹೇಳುತ್ತಿರುವ ವಿಷಯಗಳೆಲ್ಲವೂ ಆ ಮೌಢ್ಯವನ್ನೇ ಕುರಿತಾಗಿವೆ. ಬಿತ್ತುತ್ತಿರುವ ಮೌಢ್ಯದಿಂದ ಬಿಡಿಸಿಕೊಳ್ಳಲು ಬೇಕಾಗಿರುವಂತಹದ್ದೇ ವೈಚಾರಿಕತೆ ಅಥವಾ ವೈಜ್ಞಾನಿಕ ದೃಷ್ಟಿ’ ಎಂದು ತಿಳಿಸಿದರು.</p>.<p>‘ಕುವೆಂಪು ಸಾಹಿತ್ಯ ಪ್ರವೇಶಕ್ಕೆ ಭೂಮಿಕೆ’ ವಿಷಯ ಕುರಿತು ವಿಮರ್ಶಕ ಪ್ರೊ.ಚಂದ್ರಶೇಖರ ನಂಗಲಿ ಮಾತನಾಡಿ, ಕನ್ನಡ ಸಾಹಿತ್ಯಕ್ಕೆ ಅಪರಿಚಿತವಾದ ಎಷ್ಟೋ ವಿಷಯಗಳನ್ನ ತಿಳಿಸಿಕೊಟ್ಟ ಮಹನೀಯರಾದ ಕುವೆಂಪು ಅವರ ಸಾಹಿತ್ಯವೇ ಸಾಕ್ಷಿಯಾಗಿದೆ ಎಂದರು.</p>.<p>ಆಂಧ್ರಪ್ರದೇಶದ ಆದಾಯ ತೆರಿಗೆ ಇಲಾಖೆಯ ಮುಖ್ಯ ಆಯುಕ್ತ ಜಯರಾಮ್ ರಾಯಪುರ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಜಗತ್ತಿನಲ್ಲಿ ಬೇಕಾದಷ್ಟು ಕ್ರಾಂತಿಗಳಾಗಿವೆ. ಆದರೆ, ನಮ್ಮ ದೇಶದಲ್ಲಿ ಆಗಿರುವ ಕ್ರಾಂತಿ ಎಂದರೆ ಇವತ್ತಿಗೂ ನಮ್ಮನ್ನ ಗುಲಾಮಗಿರಿಯಲ್ಲಿ ಬಾಳಿಸುತ್ತಿರುವಂತಹ ಚಾತುರ್ವಣ್ಯ ವ್ಯವಸ್ಥೆಯ ಮತ ಮೌಢ್ಯ’ ಎಂದು ಸಾಂಸ್ಕೃತಿಕ ಚಿಂತಕ ಪ್ರೊ.ಎಸ್.ಜಿ.ಸಿದ್ದರಾಮಯ್ಯ ವಿಷಾದಿಸಿದರು.</p>.<p>ನಗರದ ಸ್ವಾಮಿ ವಿವೇಕಾನಂದ ರಂಗಮಂದಿರದಲ್ಲಿ ಭಾನುವಾರ ನಡೆದ ಕುವೆಂಪು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ವಿಚಾರ ಕ್ರಾಂತಿಗೆ ಆಹ್ವಾನದ ಹಿನ್ನೆಲೆಯಲ್ಲಿ ‘ನಿರಂಕುಶ ಮತಿತ್ವ’ ಕುರಿತು ಅವರು ಮಾತನಾಡಿದರು.</p>.<p>‘ಕುವೆಂಪು ಅವರ ಎಲ್ಲಾ ವಿಚಾರಗಳು ಹಾಗೂ ವೈಚಾರಿಕ ಲೇಖನಗಳನ್ನು ನೋಡಿಕೊಂಡು ಬಂದಾಗ, ನೇರವಾಗಿ ನಿರ್ದೇಶಿಸಿದಂತೆ ಹೇಳುತ್ತಿರುವ ವಿಷಯಗಳೆಲ್ಲವೂ ಆ ಮೌಢ್ಯವನ್ನೇ ಕುರಿತಾಗಿವೆ. ಬಿತ್ತುತ್ತಿರುವ ಮೌಢ್ಯದಿಂದ ಬಿಡಿಸಿಕೊಳ್ಳಲು ಬೇಕಾಗಿರುವಂತಹದ್ದೇ ವೈಚಾರಿಕತೆ ಅಥವಾ ವೈಜ್ಞಾನಿಕ ದೃಷ್ಟಿ’ ಎಂದು ತಿಳಿಸಿದರು.</p>.<p>‘ಕುವೆಂಪು ಸಾಹಿತ್ಯ ಪ್ರವೇಶಕ್ಕೆ ಭೂಮಿಕೆ’ ವಿಷಯ ಕುರಿತು ವಿಮರ್ಶಕ ಪ್ರೊ.ಚಂದ್ರಶೇಖರ ನಂಗಲಿ ಮಾತನಾಡಿ, ಕನ್ನಡ ಸಾಹಿತ್ಯಕ್ಕೆ ಅಪರಿಚಿತವಾದ ಎಷ್ಟೋ ವಿಷಯಗಳನ್ನ ತಿಳಿಸಿಕೊಟ್ಟ ಮಹನೀಯರಾದ ಕುವೆಂಪು ಅವರ ಸಾಹಿತ್ಯವೇ ಸಾಕ್ಷಿಯಾಗಿದೆ ಎಂದರು.</p>.<p>ಆಂಧ್ರಪ್ರದೇಶದ ಆದಾಯ ತೆರಿಗೆ ಇಲಾಖೆಯ ಮುಖ್ಯ ಆಯುಕ್ತ ಜಯರಾಮ್ ರಾಯಪುರ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>