<p><strong>ಮಂಡ್ಯ</strong>: ಪರಿಚಯ ಪ್ರಕಾಶನವು ಪ್ರತಿ ತಿಂಗಳ 2ನೇ ಮಂಗಳವಾರ ನಡೆಸಿಕೊಂಡು ಬರುತ್ತಿರುವ ‘ಓದಿನ ಹಾದಿ‘ಯಲ್ಲಿ ಈ ಬಾರಿ ನ.11ರಂದು ಮಂಗಳವಾರ ‘ಒಂದಾನೊಂದು ಕಾಲದಲ್ಲಿ ಶಂಕರ್ ನಾಗ್‘ ಕಾರ್ಯಕ್ರಮ ಆಯೋಜಿಸಿದೆ.</p><p>ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ದಿ. ಶಂಕರ್ನಾಗ್ ಅವರ ಜನ್ಮದಿನದ ನೆನಪಿನಲ್ಲಿ ಸಂಘಟಿಸಿರುವ ಈ ಕಾರ್ಯಕ್ರಮವು ಸುಭಾಷ್ ನಗರದ ಶಿವನಂಜಪ್ಪ ಪಾರ್ಕ್ ನಲ್ಲಿ ಸಂಜೆ 6ಕ್ಕೆ ಆರಂಭಗೊಳ್ಳಲಿದೆ ಎಂದು ಪರಿಚಯ ಪ್ರಕಾಶನದ ಸಂಸ್ಥಾಪಕ ಶಿವಕುಮಾರ್ ಆರಾಧ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>ನಟ ಅನಂತ್ನಾಗ್ ರಚನೆಯ ‘ನನ್ನ ತಮ್ಮ ಶಂಕರ‘ ಮತ್ತು ಆರ್.ಕೆ.ನಾರಾಯಣ ಅವರ ‘ಮಾಲ್ಗುಡಿ ಡೇಸ್‘ ಪುಸ್ತಕದ ಆಯ್ದ ಭಾಗಗಳನ್ನು ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್ನ ಸಂಸ್ಥಾಪಕ ಎಂ.ವಿನಯ್ಕುಮಾರ್ ಮತ್ತು ಸಿದ್ದು ಆರ್.ಜಿ.ಹಳ್ಳಿ ಓದಲಿದ್ದಾರೆ.</p><p>ಇದೇ ವೇಳೆ ಶಂಕರ್ನಾಗ್ ಅವರ ಪ್ರಸಿದ್ಧ ಚಲನಚಿತ್ರ ಗೀತೆಗಳನ್ನು ಪ್ರತಿಭಾಂಜಲಿ ಸಂಸ್ಥೆಯ ಡೇವಿಡ್ ಮತ್ತು ಸಂಗಡಿಗರು ಪ್ರಸ್ತುತಪಡಿಸುವರು. ಕೊಳಲು, ಸ್ಯಾಕ್ರೋಫೋನ್ ವಾದಕರು ಸಂಗೀತ ನಮನ ಸಲ್ಲಿಸಿದ್ದಾರೆ. ಶಂಕರ್ನಾಗ್ ಅವರ ಸಮಾಜಮುಖಿ ಚಿಂತನೆಗಳನ್ನು ಈ ತಲೆಮಾರಿಗೆ ಪಸರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದ್ದು, ಶಂಕರ್ನಾಗ್ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಪರಿಚಯ ಪ್ರಕಾಶನವು ಪ್ರತಿ ತಿಂಗಳ 2ನೇ ಮಂಗಳವಾರ ನಡೆಸಿಕೊಂಡು ಬರುತ್ತಿರುವ ‘ಓದಿನ ಹಾದಿ‘ಯಲ್ಲಿ ಈ ಬಾರಿ ನ.11ರಂದು ಮಂಗಳವಾರ ‘ಒಂದಾನೊಂದು ಕಾಲದಲ್ಲಿ ಶಂಕರ್ ನಾಗ್‘ ಕಾರ್ಯಕ್ರಮ ಆಯೋಜಿಸಿದೆ.</p><p>ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ದಿ. ಶಂಕರ್ನಾಗ್ ಅವರ ಜನ್ಮದಿನದ ನೆನಪಿನಲ್ಲಿ ಸಂಘಟಿಸಿರುವ ಈ ಕಾರ್ಯಕ್ರಮವು ಸುಭಾಷ್ ನಗರದ ಶಿವನಂಜಪ್ಪ ಪಾರ್ಕ್ ನಲ್ಲಿ ಸಂಜೆ 6ಕ್ಕೆ ಆರಂಭಗೊಳ್ಳಲಿದೆ ಎಂದು ಪರಿಚಯ ಪ್ರಕಾಶನದ ಸಂಸ್ಥಾಪಕ ಶಿವಕುಮಾರ್ ಆರಾಧ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>ನಟ ಅನಂತ್ನಾಗ್ ರಚನೆಯ ‘ನನ್ನ ತಮ್ಮ ಶಂಕರ‘ ಮತ್ತು ಆರ್.ಕೆ.ನಾರಾಯಣ ಅವರ ‘ಮಾಲ್ಗುಡಿ ಡೇಸ್‘ ಪುಸ್ತಕದ ಆಯ್ದ ಭಾಗಗಳನ್ನು ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್ನ ಸಂಸ್ಥಾಪಕ ಎಂ.ವಿನಯ್ಕುಮಾರ್ ಮತ್ತು ಸಿದ್ದು ಆರ್.ಜಿ.ಹಳ್ಳಿ ಓದಲಿದ್ದಾರೆ.</p><p>ಇದೇ ವೇಳೆ ಶಂಕರ್ನಾಗ್ ಅವರ ಪ್ರಸಿದ್ಧ ಚಲನಚಿತ್ರ ಗೀತೆಗಳನ್ನು ಪ್ರತಿಭಾಂಜಲಿ ಸಂಸ್ಥೆಯ ಡೇವಿಡ್ ಮತ್ತು ಸಂಗಡಿಗರು ಪ್ರಸ್ತುತಪಡಿಸುವರು. ಕೊಳಲು, ಸ್ಯಾಕ್ರೋಫೋನ್ ವಾದಕರು ಸಂಗೀತ ನಮನ ಸಲ್ಲಿಸಿದ್ದಾರೆ. ಶಂಕರ್ನಾಗ್ ಅವರ ಸಮಾಜಮುಖಿ ಚಿಂತನೆಗಳನ್ನು ಈ ತಲೆಮಾರಿಗೆ ಪಸರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದ್ದು, ಶಂಕರ್ನಾಗ್ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>