<p><strong>ಮೇಲುಕೋಟೆ</strong>: ಮೈಸೂರು ಮನೆತನದ ಕುಲದೈವ ಶ್ರೀಚೆಲುವನಾರಾಯಣಸ್ವಾಮಿ ಯಸನ್ನಿಧಿಯಲ್ಲಿ ಮಹಾಲಕ್ಷ್ಮೀ ಕಲ್ಯಾಣನಾಯಕಿದೇವಿಗೆ ನಡೆದ ಬಂಗಾರದ ಶೇಷವಾಹನೋತ್ಸವದೊಂದಿಗೆ ಸೋಮವಾರ ನವರಾತ್ರಿ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು.</p>.<p> ದೇವಿ ಮೂರ್ತಿಯನ್ನು ಅಲಂಕರಿಸಿ ಬಂಗಾರದ ಶೇಷವಾಹನೋತ್ಸವ, ಪಲ್ಲಕಿ ಉತ್ಸವಇಲ್ಲಿನ ರಾಜಬೀದಿಯಲ್ಲಿ ವೈಭವದಿಂದ ಜರುಗಿತು.</p>.<p>ನವರಾತ್ರಿ ಅಂಗವಾಗಿ ಪ್ರತಿದಿನ ಬೆಳಗ್ಗೆ 6.30ಕ್ಕೆ ನಿತ್ಯಪೂಜೆ, 11 ಗಂಟೆಗೆ ಕಲ್ಯಾಣನಾಯಕಿ ದೇವಿಗೆ ಬೆಳ್ಳಿಯ ಪಲ್ಲಕ್ಕಿಯಲ್ಲಿ ಉತ್ಸವ , ಅಲಂಕೃತ ಕಲ್ಯಾಣಿತಾಯಿಗೆ ಬಂಗಾರದ ಶೇಷವಾಹನೋತ್ಸವ , ಪ್ರಬಂಧ ಪಾರಾಯಣ ಹಾಗೂ ಮಂಗಳ ವಾದ್ಯಗಳೊಂದಿಗೆ ಉತ್ಸವ ನಡೆಯಲಿದೆ.</p>.<p> ಚೆಲುವನಾರಾಯಣಸ್ವಾಮಿಗೆ ಅ.2ರ ವಿಜಯದಶಮಿಯಂದು ಮಹಾರಾಜರ ಅಲಂಕಾರ ನೆರವೇರಿಸಲಾಗುತ್ತದೆ. ಸಂಜೆ ಸ್ವಾಮಿಗೆ ಅಶ್ವವಾಹನದ ಜಂಬೂಸವಾರಿ ಬನ್ನಿಪೂಜೆ, ವಿಜಯೋತ್ಸವ ಮೆರವಣಿಗೆ ನಡೆಯಲಿದೆ. </p>.<p>ನವರಾತ್ರಿ ಬಗ್ಗೆ ಮಾಹಿತಿ ನೀಡಿದ ದೇಗುಲದ ಇಒ ಶೀಲಾ , ಚೆಲುವನಾರಾಯಣಸ್ವಾಮಿ ದೇವಾಲಯದ ರಾಜಗೋಪುರ ಮತ್ತು ರಾಜಬೀದಿಗೆ ಸರಳ ದೀಪಾಲಂಕಾರ ಮಹಾಲಕ್ಷ್ಮಿ ಕಲ್ಯಾಣನಾಯಕಿಗೆ ಗೆ 9 ದಿನ ವಿಶೇಷ ತೋಮಾಲೆ ಮಂಗಳವಾದ್ಯ ವ್ಯವಸ್ಥೆ ಮಾಡಲಾಗಿದೆ. ವಿಜಯದಶಮಿ ಅಚ್ಚುಕಟ್ಟಾಗಿ ನಡೆಸಲು ಪಾರುಪತ್ತೇಗಾರರಿಗೆ ಸೂಚಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೇಲುಕೋಟೆ</strong>: ಮೈಸೂರು ಮನೆತನದ ಕುಲದೈವ ಶ್ರೀಚೆಲುವನಾರಾಯಣಸ್ವಾಮಿ ಯಸನ್ನಿಧಿಯಲ್ಲಿ ಮಹಾಲಕ್ಷ್ಮೀ ಕಲ್ಯಾಣನಾಯಕಿದೇವಿಗೆ ನಡೆದ ಬಂಗಾರದ ಶೇಷವಾಹನೋತ್ಸವದೊಂದಿಗೆ ಸೋಮವಾರ ನವರಾತ್ರಿ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು.</p>.<p> ದೇವಿ ಮೂರ್ತಿಯನ್ನು ಅಲಂಕರಿಸಿ ಬಂಗಾರದ ಶೇಷವಾಹನೋತ್ಸವ, ಪಲ್ಲಕಿ ಉತ್ಸವಇಲ್ಲಿನ ರಾಜಬೀದಿಯಲ್ಲಿ ವೈಭವದಿಂದ ಜರುಗಿತು.</p>.<p>ನವರಾತ್ರಿ ಅಂಗವಾಗಿ ಪ್ರತಿದಿನ ಬೆಳಗ್ಗೆ 6.30ಕ್ಕೆ ನಿತ್ಯಪೂಜೆ, 11 ಗಂಟೆಗೆ ಕಲ್ಯಾಣನಾಯಕಿ ದೇವಿಗೆ ಬೆಳ್ಳಿಯ ಪಲ್ಲಕ್ಕಿಯಲ್ಲಿ ಉತ್ಸವ , ಅಲಂಕೃತ ಕಲ್ಯಾಣಿತಾಯಿಗೆ ಬಂಗಾರದ ಶೇಷವಾಹನೋತ್ಸವ , ಪ್ರಬಂಧ ಪಾರಾಯಣ ಹಾಗೂ ಮಂಗಳ ವಾದ್ಯಗಳೊಂದಿಗೆ ಉತ್ಸವ ನಡೆಯಲಿದೆ.</p>.<p> ಚೆಲುವನಾರಾಯಣಸ್ವಾಮಿಗೆ ಅ.2ರ ವಿಜಯದಶಮಿಯಂದು ಮಹಾರಾಜರ ಅಲಂಕಾರ ನೆರವೇರಿಸಲಾಗುತ್ತದೆ. ಸಂಜೆ ಸ್ವಾಮಿಗೆ ಅಶ್ವವಾಹನದ ಜಂಬೂಸವಾರಿ ಬನ್ನಿಪೂಜೆ, ವಿಜಯೋತ್ಸವ ಮೆರವಣಿಗೆ ನಡೆಯಲಿದೆ. </p>.<p>ನವರಾತ್ರಿ ಬಗ್ಗೆ ಮಾಹಿತಿ ನೀಡಿದ ದೇಗುಲದ ಇಒ ಶೀಲಾ , ಚೆಲುವನಾರಾಯಣಸ್ವಾಮಿ ದೇವಾಲಯದ ರಾಜಗೋಪುರ ಮತ್ತು ರಾಜಬೀದಿಗೆ ಸರಳ ದೀಪಾಲಂಕಾರ ಮಹಾಲಕ್ಷ್ಮಿ ಕಲ್ಯಾಣನಾಯಕಿಗೆ ಗೆ 9 ದಿನ ವಿಶೇಷ ತೋಮಾಲೆ ಮಂಗಳವಾದ್ಯ ವ್ಯವಸ್ಥೆ ಮಾಡಲಾಗಿದೆ. ವಿಜಯದಶಮಿ ಅಚ್ಚುಕಟ್ಟಾಗಿ ನಡೆಸಲು ಪಾರುಪತ್ತೇಗಾರರಿಗೆ ಸೂಚಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>