<p><strong>ಹಲಗೂರು:</strong> ಮೀನು ಹಿಡಿಯಲು ಹೋಗಿದ್ದ ಅನೇಕಲ್ ತಾಲ್ಲೋಕಿನ ಬನ್ನೇರುಘಟ್ಟ ಸಮೀಪದ ಬ್ಯಾಡರಾಯನದೊಡ್ಡಿ ಗ್ರಾಮದ ಅರುಣ್ (24) ಶಿಂಷಾ ನದಿಯಲ್ಲಿ ಕೊಚ್ಚಿ ಹೋದ ಘಟನೆ ಸಮೀಪದ ತೊರೆಕಾಡನಹಳ್ಳಿ ಸೇತುವೆ ಬಳಿ ಬುಧವಾರ ತಡರಾತ್ರಿ ನಡೆದಿದೆ. </p>.<p>4 ಮಂದಿ ಸಹಪಾಟಿಗಳೊಂದಿಗೆ ಅರುಣ್ಮೀನು ಹಿಡಿಯಲು ಬಂದಿದ್ದರು. ಶಿಂಷಾ ನದಿ ಪಾತ್ರದಲ್ಲಿ ಮಳೆಯ ಪ್ರಮಾಣ ಹೆಚ್ಚಾದ ಪರಿಣಾಮ ಇಗ್ಗಲೂರು ಅಣೆಕಟ್ಟಿನಿಂದ ಹೆಚ್ಚಿನ ಪ್ರಮಾಣದ ನೀರನ್ನು ರಾತ್ರಿ ಶಿಂಷಾ ನದಿಗೆ ಹರಿಬಿಡಲಾಗಿದೆ. ಮಧ್ಯರಾತ್ರಿ 2 ಗಂಟೆಯ ಸಮಯದಲ್ಲಿ ಸೇತುವೆ ಕೆಳಗಡೆ ಕುಳಿತು ಮೀನು ಹಿಡಿಯಲು ಹೋಗಿದ್ದವರಿಗೆ ಏಕಾಏಕಿ ನೀರು ಅಪ್ಪಳಿಸಿದೆ. ಗಾಬರಿಗೊಂಡು ಒಂದೆಡೆ ಓಡಿ ಹೋದ ನಾಲ್ವರು ದುರಂತದಿಂದ ಪಾರಾಗಿದ್ದಾರೆ. ವಿರುದ್ದ ದಿಕ್ಕಿನಡೆಗೆ ಈಜಲು ಹೋದ ಅರುಣ್ ನದಿಯ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ.</p>.<p>ಹಲಗೂರು ಪಿಎಸ್ಐ ಲೋಕೇಶ ಮತ್ತು ಮಳವಳ್ಳಿ ಅಗ್ನಿಶಾಮಕ ಠಾಣಾ ಅಧಿಕಾರಿ ಅರುಣ್ ಮತ್ತು ಶ್ರೀಧರ್ ನೇತೃತ್ವದ ತಂಡ ಘಟನಾ ಸ್ಥಳಕ್ಕೆ ಆಗಮಿಸಿ ಅರುಣ್ ಪತ್ತೆ ಹಚ್ಚುವ ಕಾರ್ಯಚಾರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಕುರಿತು ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲಗೂರು:</strong> ಮೀನು ಹಿಡಿಯಲು ಹೋಗಿದ್ದ ಅನೇಕಲ್ ತಾಲ್ಲೋಕಿನ ಬನ್ನೇರುಘಟ್ಟ ಸಮೀಪದ ಬ್ಯಾಡರಾಯನದೊಡ್ಡಿ ಗ್ರಾಮದ ಅರುಣ್ (24) ಶಿಂಷಾ ನದಿಯಲ್ಲಿ ಕೊಚ್ಚಿ ಹೋದ ಘಟನೆ ಸಮೀಪದ ತೊರೆಕಾಡನಹಳ್ಳಿ ಸೇತುವೆ ಬಳಿ ಬುಧವಾರ ತಡರಾತ್ರಿ ನಡೆದಿದೆ. </p>.<p>4 ಮಂದಿ ಸಹಪಾಟಿಗಳೊಂದಿಗೆ ಅರುಣ್ಮೀನು ಹಿಡಿಯಲು ಬಂದಿದ್ದರು. ಶಿಂಷಾ ನದಿ ಪಾತ್ರದಲ್ಲಿ ಮಳೆಯ ಪ್ರಮಾಣ ಹೆಚ್ಚಾದ ಪರಿಣಾಮ ಇಗ್ಗಲೂರು ಅಣೆಕಟ್ಟಿನಿಂದ ಹೆಚ್ಚಿನ ಪ್ರಮಾಣದ ನೀರನ್ನು ರಾತ್ರಿ ಶಿಂಷಾ ನದಿಗೆ ಹರಿಬಿಡಲಾಗಿದೆ. ಮಧ್ಯರಾತ್ರಿ 2 ಗಂಟೆಯ ಸಮಯದಲ್ಲಿ ಸೇತುವೆ ಕೆಳಗಡೆ ಕುಳಿತು ಮೀನು ಹಿಡಿಯಲು ಹೋಗಿದ್ದವರಿಗೆ ಏಕಾಏಕಿ ನೀರು ಅಪ್ಪಳಿಸಿದೆ. ಗಾಬರಿಗೊಂಡು ಒಂದೆಡೆ ಓಡಿ ಹೋದ ನಾಲ್ವರು ದುರಂತದಿಂದ ಪಾರಾಗಿದ್ದಾರೆ. ವಿರುದ್ದ ದಿಕ್ಕಿನಡೆಗೆ ಈಜಲು ಹೋದ ಅರುಣ್ ನದಿಯ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ.</p>.<p>ಹಲಗೂರು ಪಿಎಸ್ಐ ಲೋಕೇಶ ಮತ್ತು ಮಳವಳ್ಳಿ ಅಗ್ನಿಶಾಮಕ ಠಾಣಾ ಅಧಿಕಾರಿ ಅರುಣ್ ಮತ್ತು ಶ್ರೀಧರ್ ನೇತೃತ್ವದ ತಂಡ ಘಟನಾ ಸ್ಥಳಕ್ಕೆ ಆಗಮಿಸಿ ಅರುಣ್ ಪತ್ತೆ ಹಚ್ಚುವ ಕಾರ್ಯಚಾರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಕುರಿತು ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>