ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಮದ್ದೂರಿನ ಧ್ವಜ ಸತ್ಯಾಗ್ರಹ ಸೌಧದ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದು ಬಿಟ್ಟರೆ ಹಲವಾರು ವರ್ಷಗಳಿಂದ ಮತ್ಯಾರೂ ಅಭಿವೃದ್ಧಿಗೆ ಆಸಕ್ತಿ ವಹಿಸಿಲ್ಲದಿರುವುದು ಬೇಸರ ತರಿಸಿದೆ
ಕೆ.ಟಿ. ಚಂದು, ಸ್ವಾತಂತ್ರ್ಯ ಹೋರಾಟಗಾರ, ಮದ್ದೂರು
ಮದ್ದೂರಿನ ಧ್ವಜ ಸತ್ಯಾಗ್ರಹ ಸೌಧವು ಜಿಲ್ಲೆಯ ಹೆಮ್ಮೆಯ ಸ್ಮಾರಕವಾಗಿದ್ದು, ಅಧಿಕಾರಿಗಳ ಅಸಡ್ಡೆಯಿಂದಾಗಿ ಸಾರ್ವಜನಿಕರಿಗಷ್ಟೇ ಅಲ್ಲದೇ ಶೈಕ್ಷಣಿಕ ಪ್ರವಾಸಕ್ಕಾಗಿ ರಾಜ್ಯದ ಹಲವೆಡೆಗಳಿಂದ ಬರುವ ವಿದ್ಯಾರ್ಥಿಗಳೂ ಸೌಧದ ಬಾಗಿಲಿಗೆ ಬೀಗ ಜಡಿದಿರುವುದರಿಂದ ಬೇಸರದಿಂದ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮ.ನ. ಪ್ರಸನ್ನಕುಮಾರ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸದಸ್ಯ, ಮದ್ದೂರು
ಮದ್ದೂರಿನ ಧ್ವಜ ಸತ್ಯಾಗ್ರಹ ಸೌಧಕ್ಕೆ ಸಂಬಂಧಿಸಿದ ಸಮಸ್ಯೆಗಳು ಗಮನಕ್ಕೆ ಬಂದಿದೆ. ಸಮಸ್ಯೆ ಪರಿಹರಿಸಲು ಮತ್ತು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಉನ್ನತ ಅಧಿಕಾರಿಗಳ ಗಮನಕ್ಕೆ ತರಲಾಗುವುದು