<p>ಮಂಡ್ಯ: ಶಿವರಾತ್ರಿ ಅಂಗವಾಗಿ ಶನಿವಾರ ಜಿಲ್ಲೆಯಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನೆರವೇರಿದವು. ಶಿವಾಲಯಗಳಲ್ಲಿ ಹೋಮ, ಹವನದ ಜೊತೆಗೆ ದೇವಾಲಯಕ್ಕೆ ಬಂದ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.</p>.<p>ಶಿವಾಲಯಗಳಲ್ಲಿ ಅಭಿಷೇಕ, ರುದ್ರಾಭಿಷೇಕ, ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಬೆಳಿಗ್ಗಿನಿಂದಲೇ ನಡೆಯುತ್ತಿದ್ದವು. ಅಪಾರ ಸಂಖ್ಯೆಯ ಭಕ್ತರು ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆದರು. ಹಬ್ಬದ ಅಂಗವಾಗಿ ಬಗೆಬಗೆಯ ಪುಷ್ಪಗಳಿಂದ ದೇವರ ಮೂರ್ತಿಯಿನ್ನು ಅಲಂಕಾರ ಮಾಡಲಾಗಿತ್ತು. ಮಹಿಳೆಯರು ಜಾಗರಣೆ ವ್ರತಾಚರಣೆ ಮಾಡಿದರು, ಬೆಳಿಗ್ಗೆಯಿಂದಲೂ ಉಪವಾಸ ಇದ್ದು ಭಕ್ತಿ ಮೆರೆದರು. ಶಿವನ ದೇವಾಲಯಗಳಲ್ಲಿ ಹರಿಕಥೆ, ಶಿವ ಪಾರಾಯಣ ಹಾಗೂ ಭಕ್ತಿ ಗೀತೆ ಕಾರ್ಯಕ್ರಮಗಳು ನಡೆದವು.</p>.<p>ನಗರದ ಅರಕೇಶ್ವರಸ್ವಾಮಿ ದೇವಸ್ಥಾನದಲ್ಲಿ ಬೆಳಿಗ್ಗೆ 4.30 ರಿಂದಲೇ ದೇವರಿಗೆ ವಿಶೇಷ ಪೂಜೆ, ಅಭಿಷೇಕ ನಡೆದವು. ಕ್ಷೀರ, ಮೊಸರು, ಎಳನೀರು, ಗಂಧ, ಜೇನುತುಪ್ಪ, ಸಕ್ಕರೆ, ನಿಂಬೆಹಣ್ಣು, ಪಂಚಾಮೃತಾಭಿಷೇಕ, ಅರಿಶಿನ-ಕುಂಕುಮ, ಬಿಲ್ವಪತ್ರ ಅರ್ಚನೆ ಮಾಡಲಾಯಿತು. ಭಕ್ತರು ಸರತಿ ಸಾಲಿನಲ್ಲಿ ದೇವರ ದರ್ಶನ ಪಡೆದರು.</p>.<p>ಸ್ವಾಮಿಗೆ ಪ್ರಥಮ ಪೂಜೆ ಸಲ್ಲಿಸಿ ತೀರ್ಥ-ಪ್ರಸಾದ ಸ್ವೀಕರಿಸಿ ಧನ್ಯತಾ ಭಾವ ಮೆರೆದರು. ದೇವಾಲಯದಲ್ಲಿ ರಾತ್ರಿ ಪೂರ್ತಿ ಶಿವ ಪಾರಾಯಣ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪ್ರಮುಖ ಪುರಾಣ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವ ಪೇಟೆಬೀದಿಯ ಸಕಲೇಶ್ವರಸ್ವಾಮಿ ದೇವಾಲಯದಲ್ಲಿ ಬೆಳಗ್ಗಿನಿಂದಲೇ ವಿಶೇಷ ಪೂಜೆಗಳು ನಡೆದವು. ಬೆಳ್ಳಿಯ ನಾಗಾಭರಣವನ್ನು ಧರಿಸಿದ್ದ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.</p>.<p>ಶಂಕರನಗರದಲ್ಲಿರುವ ಮಲೆ ಮಹದೇಶ್ವರಸ್ವಾಮಿ, ಶಂಕರಮಠದ ಆದಿ ಚುಂಚನಗಿರಿ ಶಾಖಾ ಮಠದಲ್ಲಿರುವ ಗವಿಗಂಗಾಧರೇಶ್ವರ ಸ್ವಾಮಿಗೆ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಅಭಿಷೇಕ, ಪೂಜೆ, ಅಲಂಕಾರ ನಡೆಸಲಾಯಿತು. ಬೆಳಿಗ್ಗೆಯಿಂದಲೇ ನೂರಾರು ಭಕ್ತರು ದೇಗುಲಕ್ಕೆ ಬಂದು ಸ್ವಾಮಿಯ ದರ್ಶನ ಪಡೆದರು. ಭಾನುವಾರ ಬೆಳಿಗ್ಗೆ ನಡೆಯುವ ಅನ್ನಸಂತರ್ಪಣೆಗೂ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು.</p>.<p>ನಗರದ ಚಾಮುಂಡೇಶ್ವರಿ ನಗರದಲ್ಲಿರುವ ಶನೀಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ನೂತನ ದೇವಾಲಯ ಪ್ರಾಂಗಣ ನಿರ್ಮಿಸಿರುವುದು ದೇವಾಲಯಕ್ಕೆ ಹೊಸ ಕಳೆ ಬಂದಿತ್ತು. ಮಂಡ್ಯ ತಾಲ್ಲೂಕಿನ ಹಳುವಾಡಿ ಶನಿದೇವರ ದೇವಾಲಯ, ರಾಗಿಮುದ್ದನಹಳ್ಳಿ ಶಂಭುಲಿಂಗೇಶ್ವರಸ್ವಾಮಿ, ಸುಂಡಹಳ್ಳಿ ಮಹದೇಶ್ವರ ಸ್ವಾಮಿ ದೇವಾಲಯಗಳಲ್ಲಿ ಭಕ್ತರು ದೇವರ ದರ್ಶನ ಪಡೆದರು.</p>.<p>ಕಿರಗಂದೂರು ಕಾಡುಮಲೆಮಹದೇಶ್ವರ, ಸಂತೆಕಸಲಗೆರೆ ಭೂಮಿ ಸಿದ್ದೇಶ್ವರಸ್ವಾಮಿ, ಮಂಗಲ ಮಲ್ಲೇಶ್ವರಸ್ವಾಮಿ ದೇವಾಲಯ ಸೇರಿದಂತೆ ಕೆಲವು ದೇವಾಲಯಗಳಲ್ಲಿ ಬಾಯಿಬೀಗ ಸೇರಿದಂತೆ ವಿವಿಧ ದೇವತಾ ಕಾರ್ಯಕ್ರಮಗಳು ಜರುಗಿದವು.</p>.<p>ಶಿವನ ದೇವಾಲಯ, ಶನೀಶ್ವರ ಸ್ವಾಮಿ ದೇವಾಲಯಗಳಲ್ಲಿ ಶನಿವಾರ ರಾತ್ರಿಯಿಡೀ ಜಾಗರಣೆ ನಡೆಸಲಾಯಿತು. ಹಲವು ಕಲಾವಿದರು, ಕಲಾ ತಂಡಗಳು ಭಕ್ತಿಗೀತೆ ಕಾರ್ಯಕ್ರಮ ನೀಡಿ ಜಾಗರಣೆಯಲ್ಲಿ ನೆರವಾದರು. ಶಿವಲಿಂಗಕ್ಕೆ ಬಿಲ್ವಾರ್ಚನೆ, ರುದ್ರಾಭಿಷೇಕ, ಶಿವನಾಮ ಧ್ಯಾನಗಳ ಮೂಲಕ ಶಿವನ ನಾಮ ಸ್ಮರಣೆ ಮಾಡಿದರು. ಶಿವನ ದೇವಾಲಯಗಳಲ್ಲಿ ರುದ್ರಪಠಣದ ಜೊತೆಗೆ ಜಾಗರಣೆ ಭಕ್ತಿ ಭಾವದಿಂದ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಶಿವರಾತ್ರಿ ಅಂಗವಾಗಿ ಶನಿವಾರ ಜಿಲ್ಲೆಯಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನೆರವೇರಿದವು. ಶಿವಾಲಯಗಳಲ್ಲಿ ಹೋಮ, ಹವನದ ಜೊತೆಗೆ ದೇವಾಲಯಕ್ಕೆ ಬಂದ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.</p>.<p>ಶಿವಾಲಯಗಳಲ್ಲಿ ಅಭಿಷೇಕ, ರುದ್ರಾಭಿಷೇಕ, ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಬೆಳಿಗ್ಗಿನಿಂದಲೇ ನಡೆಯುತ್ತಿದ್ದವು. ಅಪಾರ ಸಂಖ್ಯೆಯ ಭಕ್ತರು ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆದರು. ಹಬ್ಬದ ಅಂಗವಾಗಿ ಬಗೆಬಗೆಯ ಪುಷ್ಪಗಳಿಂದ ದೇವರ ಮೂರ್ತಿಯಿನ್ನು ಅಲಂಕಾರ ಮಾಡಲಾಗಿತ್ತು. ಮಹಿಳೆಯರು ಜಾಗರಣೆ ವ್ರತಾಚರಣೆ ಮಾಡಿದರು, ಬೆಳಿಗ್ಗೆಯಿಂದಲೂ ಉಪವಾಸ ಇದ್ದು ಭಕ್ತಿ ಮೆರೆದರು. ಶಿವನ ದೇವಾಲಯಗಳಲ್ಲಿ ಹರಿಕಥೆ, ಶಿವ ಪಾರಾಯಣ ಹಾಗೂ ಭಕ್ತಿ ಗೀತೆ ಕಾರ್ಯಕ್ರಮಗಳು ನಡೆದವು.</p>.<p>ನಗರದ ಅರಕೇಶ್ವರಸ್ವಾಮಿ ದೇವಸ್ಥಾನದಲ್ಲಿ ಬೆಳಿಗ್ಗೆ 4.30 ರಿಂದಲೇ ದೇವರಿಗೆ ವಿಶೇಷ ಪೂಜೆ, ಅಭಿಷೇಕ ನಡೆದವು. ಕ್ಷೀರ, ಮೊಸರು, ಎಳನೀರು, ಗಂಧ, ಜೇನುತುಪ್ಪ, ಸಕ್ಕರೆ, ನಿಂಬೆಹಣ್ಣು, ಪಂಚಾಮೃತಾಭಿಷೇಕ, ಅರಿಶಿನ-ಕುಂಕುಮ, ಬಿಲ್ವಪತ್ರ ಅರ್ಚನೆ ಮಾಡಲಾಯಿತು. ಭಕ್ತರು ಸರತಿ ಸಾಲಿನಲ್ಲಿ ದೇವರ ದರ್ಶನ ಪಡೆದರು.</p>.<p>ಸ್ವಾಮಿಗೆ ಪ್ರಥಮ ಪೂಜೆ ಸಲ್ಲಿಸಿ ತೀರ್ಥ-ಪ್ರಸಾದ ಸ್ವೀಕರಿಸಿ ಧನ್ಯತಾ ಭಾವ ಮೆರೆದರು. ದೇವಾಲಯದಲ್ಲಿ ರಾತ್ರಿ ಪೂರ್ತಿ ಶಿವ ಪಾರಾಯಣ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪ್ರಮುಖ ಪುರಾಣ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವ ಪೇಟೆಬೀದಿಯ ಸಕಲೇಶ್ವರಸ್ವಾಮಿ ದೇವಾಲಯದಲ್ಲಿ ಬೆಳಗ್ಗಿನಿಂದಲೇ ವಿಶೇಷ ಪೂಜೆಗಳು ನಡೆದವು. ಬೆಳ್ಳಿಯ ನಾಗಾಭರಣವನ್ನು ಧರಿಸಿದ್ದ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.</p>.<p>ಶಂಕರನಗರದಲ್ಲಿರುವ ಮಲೆ ಮಹದೇಶ್ವರಸ್ವಾಮಿ, ಶಂಕರಮಠದ ಆದಿ ಚುಂಚನಗಿರಿ ಶಾಖಾ ಮಠದಲ್ಲಿರುವ ಗವಿಗಂಗಾಧರೇಶ್ವರ ಸ್ವಾಮಿಗೆ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಅಭಿಷೇಕ, ಪೂಜೆ, ಅಲಂಕಾರ ನಡೆಸಲಾಯಿತು. ಬೆಳಿಗ್ಗೆಯಿಂದಲೇ ನೂರಾರು ಭಕ್ತರು ದೇಗುಲಕ್ಕೆ ಬಂದು ಸ್ವಾಮಿಯ ದರ್ಶನ ಪಡೆದರು. ಭಾನುವಾರ ಬೆಳಿಗ್ಗೆ ನಡೆಯುವ ಅನ್ನಸಂತರ್ಪಣೆಗೂ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು.</p>.<p>ನಗರದ ಚಾಮುಂಡೇಶ್ವರಿ ನಗರದಲ್ಲಿರುವ ಶನೀಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ನೂತನ ದೇವಾಲಯ ಪ್ರಾಂಗಣ ನಿರ್ಮಿಸಿರುವುದು ದೇವಾಲಯಕ್ಕೆ ಹೊಸ ಕಳೆ ಬಂದಿತ್ತು. ಮಂಡ್ಯ ತಾಲ್ಲೂಕಿನ ಹಳುವಾಡಿ ಶನಿದೇವರ ದೇವಾಲಯ, ರಾಗಿಮುದ್ದನಹಳ್ಳಿ ಶಂಭುಲಿಂಗೇಶ್ವರಸ್ವಾಮಿ, ಸುಂಡಹಳ್ಳಿ ಮಹದೇಶ್ವರ ಸ್ವಾಮಿ ದೇವಾಲಯಗಳಲ್ಲಿ ಭಕ್ತರು ದೇವರ ದರ್ಶನ ಪಡೆದರು.</p>.<p>ಕಿರಗಂದೂರು ಕಾಡುಮಲೆಮಹದೇಶ್ವರ, ಸಂತೆಕಸಲಗೆರೆ ಭೂಮಿ ಸಿದ್ದೇಶ್ವರಸ್ವಾಮಿ, ಮಂಗಲ ಮಲ್ಲೇಶ್ವರಸ್ವಾಮಿ ದೇವಾಲಯ ಸೇರಿದಂತೆ ಕೆಲವು ದೇವಾಲಯಗಳಲ್ಲಿ ಬಾಯಿಬೀಗ ಸೇರಿದಂತೆ ವಿವಿಧ ದೇವತಾ ಕಾರ್ಯಕ್ರಮಗಳು ಜರುಗಿದವು.</p>.<p>ಶಿವನ ದೇವಾಲಯ, ಶನೀಶ್ವರ ಸ್ವಾಮಿ ದೇವಾಲಯಗಳಲ್ಲಿ ಶನಿವಾರ ರಾತ್ರಿಯಿಡೀ ಜಾಗರಣೆ ನಡೆಸಲಾಯಿತು. ಹಲವು ಕಲಾವಿದರು, ಕಲಾ ತಂಡಗಳು ಭಕ್ತಿಗೀತೆ ಕಾರ್ಯಕ್ರಮ ನೀಡಿ ಜಾಗರಣೆಯಲ್ಲಿ ನೆರವಾದರು. ಶಿವಲಿಂಗಕ್ಕೆ ಬಿಲ್ವಾರ್ಚನೆ, ರುದ್ರಾಭಿಷೇಕ, ಶಿವನಾಮ ಧ್ಯಾನಗಳ ಮೂಲಕ ಶಿವನ ನಾಮ ಸ್ಮರಣೆ ಮಾಡಿದರು. ಶಿವನ ದೇವಾಲಯಗಳಲ್ಲಿ ರುದ್ರಪಠಣದ ಜೊತೆಗೆ ಜಾಗರಣೆ ಭಕ್ತಿ ಭಾವದಿಂದ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>