ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಬುಲೆನ್ಸ್‌ ಕೊರತೆ: ಕಾದು ದಣಿದ ಸೋಂಕಿತರು

Last Updated 26 ಏಪ್ರಿಲ್ 2021, 4:41 IST
ಅಕ್ಷರ ಗಾತ್ರ

ಪಾಂಡವಪುರ: ಕೊರೊನಾ ಸೋಂಕಿತರನ್ನು ಸಕಾಲಕ್ಕೆ ಕೋವಿಡ್‌ ಕೇರ್‌ ಸೆಂಟರ್‌ಗೆ ಕರೆದೊಯ್ಯಲು ಆಂಬುಲೆನ್ಸ್‌ ಬಾರದ ಕಾರಣ ಸೋಂಕಿತರು ಪಟ್ಟಣದ ಆಸ್ಪತ್ರೆ ಆವರಣದಲ್ಲಿ ಮಲಗಿದ್ದರು.

‘ಸೋಂಕಿತರನ್ನು ಕೋವಿಡ್‌ ಸೆಂಟರ್‌ಗೆ ದಾಖಲಿಸಲು ವಿಳಂಬ ಮಾಡುವುದು ಸರಿಯಲ್ಲ. ತಾಲ್ಲೂಕು ಆಡಳಿತವು ಸಕಾಲದಲ್ಲಿ ಸಮರ್ಪಕ ಚಿಕಿತ್ಸೆ ನೀಡಲು ಕ್ರಮ ವಹಿಸಬೇಕು’ ಎಂದು ಸಾರ್ವಜನಿಕರು ಆಗ್ರಹಿಸಿದರು.

ನಾಲ್ವರು ಆಂಬುಲೆನ್ಸ್‌ಗಾಗಿ ಸಾಕಷ್ಟು ಹೊತ್ತು ಕಾದು ಮಲಗಿದ್ದರು.

ಒಂದೇ ಆಂಬುಲೆನ್ಸ್‌: ‘ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಎರಡು ಆಂಬುಲೆನ್ಸ್‌ಗಳಿವೆ. ಈ ಪೈಕಿ ಒಂದನ್ನು ಇತರ ರೋಗಿಗಳನ್ನು ಕರೆದೊಯ್ಯಲು ಮೀಸಲಿರಿಸಲಾಗಿದೆ. ಒಂದು ಆಂಬುಲೆನ್ಸ್‌ ಅನ್ನು ಮಾತ್ರ ಸೋಂಕಿತರನ್ನು ಕರೆದೊಯ್ಯಲು ಬಳಕೆ ಮಾಡಲಾಗುತ್ತಿದೆ’ ಎಂದು ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಎಚ್.ಕುಮಾರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT