<p>ಶ್ರೀರಂಗಪಟ್ಟಣ: ತಾಲ್ಲೂಕಿನ ಬಲಮುರಿ ಪ್ರಕೃತಿ ತಾಣದ ಸಮೀಪ ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿದೆ.</p>.<p>ಚಾಮರಾಜನಗರ ಜಿಲ್ಲೆ, ಸಂತೆಮರಹಳ್ಳಿ ಹೋಬಳಿ, ಕಮರವಾಡಿ ಗ್ರಾಮದ ಮೋಹನಕುಮಾರ್ (21) ಮತ್ತು ಮೈಸೂರು ತಾಲ್ಲೂಕು ಜಯಪುರ ಹೋಬಳಿ ಕೆಲ್ಲಹಳ್ಳಿ ಗ್ರಾಮದ ರವಿಚಂದ್ರ (21) ಮೃತರು.</p>.<p>ಮೋಹನಕುಮಾರ್ ಅವರ ಮೃತದೇಹ ಪತ್ತೆಯಾಗಿದೆ. ರವಿಚಂದ್ರ ಅವರ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರೆದಿದೆ ಎಂದು ಕೆಆರ್ಎಸ್ ಪೊಲೀಸ್ ಠಾಣೆ ಪಿಎಸ್ಐ ರಮೇಶ ಕರ್ಕಿಕಟ್ಟಿ ತಿಳಿಸಿದ್ದಾರೆ.</p>.<p>ಮೈಸೂರಿನ ಕೇನ್ಸ್ ಸಂಸ್ಥೆಯ ನೌಕರರಾದ ಮೋಹನಕುಮಾರ್, ರವಿಚಂದ್ರ ಮತ್ತು ಚಾಮರಾಜನಗರ ಜಿಲ್ಲೆ ಸಿಂಗಾನಲ್ಲೂರಿನ ವಿಕಾಸ್ ಎಂಬವರು ಬೈಕ್ನಲ್ಲಿ ಗುರುವಾರ ಸಂಜೆ ಇಲ್ಲಿಗೆ ವಿಹಾರಕ್ಕೆ ಬಂದಿದ್ದರು. ಬಲಮುರಿ ಪ್ರಕೃತಿ ತಾಣಕ್ಕೆ ಪರ್ಲಾಂಗು ದೂರದ ಎಡತಿಟ್ಟು ದ್ವೀಪದ ಬಳಿ ಈಜಲು ಕಾವೇರಿ ನದಿಗೆ ಇಳಿದಿದ್ದರು.</p>.<p>‘ನದಿಯಲ್ಲಿ ಈಜುವ ವೇಳೆ ರವಿಚಂದ್ರ ನೀರಿನಲ್ಲಿ ಮುಳುಗಿದ. ಆತನನ್ನು ರಕ್ಷಿಸಲು ಮುಂದಾದ ಮೋಹನ್ಕುಮಾರ್ ಕೂಡ ನೀರಿನಲ್ಲಿ ಮುಳುಗಿದ’ ಎಂದು ಜತೆಯಲ್ಲಿದ್ದ ವಿಕಾಸ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಕೆಆರ್ಎಸ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ನಿಷೇಧಾಜ್ಞೆ ಉಲ್ಲಂಘನೆ ಆರೋಪ: ಬಲಮುರಿ ಮತ್ತು ಆಸುಪಾಸಿನಲ್ಲಿ ತಾಲ್ಲೂಕು ಆಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ. ಆದರೂ ಪ್ರವಾಸಿಗರು ನದಿಗೆ ಇಳಿಯುತ್ತಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಬೆಳಗೊಳ ಕುಮಾರ್ ಇತರರು ದೂರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-40-1155591046</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀರಂಗಪಟ್ಟಣ: ತಾಲ್ಲೂಕಿನ ಬಲಮುರಿ ಪ್ರಕೃತಿ ತಾಣದ ಸಮೀಪ ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿದೆ.</p>.<p>ಚಾಮರಾಜನಗರ ಜಿಲ್ಲೆ, ಸಂತೆಮರಹಳ್ಳಿ ಹೋಬಳಿ, ಕಮರವಾಡಿ ಗ್ರಾಮದ ಮೋಹನಕುಮಾರ್ (21) ಮತ್ತು ಮೈಸೂರು ತಾಲ್ಲೂಕು ಜಯಪುರ ಹೋಬಳಿ ಕೆಲ್ಲಹಳ್ಳಿ ಗ್ರಾಮದ ರವಿಚಂದ್ರ (21) ಮೃತರು.</p>.<p>ಮೋಹನಕುಮಾರ್ ಅವರ ಮೃತದೇಹ ಪತ್ತೆಯಾಗಿದೆ. ರವಿಚಂದ್ರ ಅವರ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರೆದಿದೆ ಎಂದು ಕೆಆರ್ಎಸ್ ಪೊಲೀಸ್ ಠಾಣೆ ಪಿಎಸ್ಐ ರಮೇಶ ಕರ್ಕಿಕಟ್ಟಿ ತಿಳಿಸಿದ್ದಾರೆ.</p>.<p>ಮೈಸೂರಿನ ಕೇನ್ಸ್ ಸಂಸ್ಥೆಯ ನೌಕರರಾದ ಮೋಹನಕುಮಾರ್, ರವಿಚಂದ್ರ ಮತ್ತು ಚಾಮರಾಜನಗರ ಜಿಲ್ಲೆ ಸಿಂಗಾನಲ್ಲೂರಿನ ವಿಕಾಸ್ ಎಂಬವರು ಬೈಕ್ನಲ್ಲಿ ಗುರುವಾರ ಸಂಜೆ ಇಲ್ಲಿಗೆ ವಿಹಾರಕ್ಕೆ ಬಂದಿದ್ದರು. ಬಲಮುರಿ ಪ್ರಕೃತಿ ತಾಣಕ್ಕೆ ಪರ್ಲಾಂಗು ದೂರದ ಎಡತಿಟ್ಟು ದ್ವೀಪದ ಬಳಿ ಈಜಲು ಕಾವೇರಿ ನದಿಗೆ ಇಳಿದಿದ್ದರು.</p>.<p>‘ನದಿಯಲ್ಲಿ ಈಜುವ ವೇಳೆ ರವಿಚಂದ್ರ ನೀರಿನಲ್ಲಿ ಮುಳುಗಿದ. ಆತನನ್ನು ರಕ್ಷಿಸಲು ಮುಂದಾದ ಮೋಹನ್ಕುಮಾರ್ ಕೂಡ ನೀರಿನಲ್ಲಿ ಮುಳುಗಿದ’ ಎಂದು ಜತೆಯಲ್ಲಿದ್ದ ವಿಕಾಸ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಕೆಆರ್ಎಸ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ನಿಷೇಧಾಜ್ಞೆ ಉಲ್ಲಂಘನೆ ಆರೋಪ: ಬಲಮುರಿ ಮತ್ತು ಆಸುಪಾಸಿನಲ್ಲಿ ತಾಲ್ಲೂಕು ಆಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ. ಆದರೂ ಪ್ರವಾಸಿಗರು ನದಿಗೆ ಇಳಿಯುತ್ತಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಬೆಳಗೊಳ ಕುಮಾರ್ ಇತರರು ದೂರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-40-1155591046</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>