ರಾತ್ರಿ ಗಸ್ತು ಕರ್ತವ್ಯಕ್ಕೆ ತೆರಳುವಂತೆ ಜಯಗೌರಿ ಅವರು ಶಿವನಂಜೇಗೌಡರಿಗೆ ಸೂಚಿಸಿದ್ದಾರೆ. ಬೆಳಿಗ್ಗೆಯಿಂದಲೂ ಕರ್ತವ್ಯ ಮಾಡಿದ್ದು, ಮತ್ತೆ ಕರ್ತವ್ಯಕ್ಕೆ ಬರುವುದಿಲ್ಲ ಎಂದು ಎಎಸ್ಐ ತಿಳಿಸಿದ್ದಾರೆ. ಈಗ ಮನೆಗೆ ತೆರಳಿ ವಿಶ್ರಾಂತಿ ಪಡೆದು ಮತ್ತೆ ರಾತ್ರಿ ಕರ್ತವ್ಯ ಮಾಡುವಂತೆ ಎಸ್ಐ ತಿಳಿಸಿದ್ದಾರೆ. ಇದರಿಂದ ಅಸಮಾಧಾನಗೊಂಡ ಎಎಸ್ಐ, ಎಸ್ಐ ಜಯಗೌರಿ ಮೇಲೆ ಹಲ್ಲೆ ನಡೆಸಿದ್ದಾರೆ.