ಬಾಗಲಕೋಟೆ: ’ರಾಜ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಉದ್ಯಮಿಗಳು ಇನ್ನು ಮುಂದೆ ಭೂಪರಿವರ್ತನೆಗೆ, ಕಟ್ಟಡ ನಿರ್ಮಾಣ ಅನುಮತಿ ಕೋರಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ. ಬದಲಿಗೆ ನಿಗದಿತ ಜಾಗದಲ್ಲಿ ಕೈಗಾರಿಕೆ ಆರಂಭಿಸಿ ಮೂರು ವರ್ಷಗಳ ಒಳಗೆ ಎಲ್ಲಾ ಅನುಮತಿ ಪಡೆಯಬಹುದಾಗಿದೆ‘ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದರು.