ವಾರಸುದಾರರು ಇಲ್ಲದ ಮೃತದೇಹಗಳು, ಶವಸಂಸ್ಕಾರ ನಡೆಸಲು ಕುಟುಂಬ ಸದಸ್ಯರು ನಿರಾಕರಿಸಿದ ಮೃತದೇಹಗಳನ್ನು ಸರ್ಕಾರದದಿಂದಲೇ ಶವಸಂಸ್ಕಾರ ನೆರವೇರಿಸಲಾಗಿತ್ತು. ಕುಟುಂಬದ ಸದಸ್ಯರು ಅಸ್ಥಿಯನ್ನೂ ಪಡೆದಿರಲಿಲ್ಲ. ಹೀಗಾಗಿ ಕಾವೇರಿ ನದಿ ತೀರದಲ್ಲಿರುವ ಕಾಶಿವಿಶ್ವನಾಥಸ್ವಾಮಿ ದೇವಾಲಯದಲ್ಲಿ ಧಾರ್ಮಿಕ ವಿಧಿವಿಧಾನದೊಂದಿಗೆ ಅಸ್ಥಿ ವಿಸರ್ಜಿಸಲಾಯಿತು.